ಬೆಂಗಳೂರು: ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.
ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ರವರವ ಹುಟ್ಟುಹಬ್ಬವಿದ್ದು, ಪ್ರತಿವರ್ಷ ಅಭಿಮಾನಿಗಳೊಟ್ಟಿಗೆ ಬಹಳ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಸೆಲೆಬ್ರೆಟ್ ಮಾಡುತ್ತಿದ್ದರು. ಆದರೆ ಈ ಬಾರಿ ಕೊರೊನಾದಿಂದಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಗಣೇಶ್ರವರು ತಮ್ಮ ಬರ್ತ್ಡೇಗಾಗಿ ವ್ಯರ್ಥ ಮಾಡುವ ಹಣವನ್ನು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ‘ಎಲ್ಲರಿಗೂ ನಿಮ್ಮ ಗಣೇಶ್ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರಿವಿದ್ದೊ, ಅರಿವಿಲ್ಲದೆಯೋ ಈ ಕೋವಿಡ್ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂಧರೆ ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು, ನೋವು ತರಿಸಿದೆ. ಅದೆಷ್ಟೋ ಜನರ ಜೀವಗಳು ನಲುಗಿ ಹೋಗಿವೆ. ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲವೆಂದಿನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ.
ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬದ ಆಚರಣೆಗೆ ನೀವುಗಳು ಪ್ರೀತಿಯಿಂದ ತರುವ ಕೇಕ್, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೆ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೆಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ ಎಂದು ಪೋಸ್ಟ್ವೊಂದನ್ನು ಹಾಕಿಕೊಂಡಿದ್ದಾರೆ.
ಸದ್ಯ ಗಣೇಶ್ರವರು ಗಾಳಿಪಟ-2 ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಈ ಚಿತ್ರಕ್ಕೆ ನಿರ್ದೇಶಕ ಯೋಗರಾಜ್ ಭಟ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನೂ ಈ ಚಿತ್ರದಲ್ಲಿ ದಿಗಂತ್, ನಿರ್ದೇಶಕ ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್ ಮತ್ತು ಶರ್ಮೀಲಾ ಮಾಂಡ್ರೆ ಅಭಿನಯಿಸುತ್ತಿದ್ದಾರೆ.
View this post on Instagram