ಪತ್ನಿಯನ್ನು ಕೊಂದು ಚರಂಡಿಗೆಸೆದು ನಾಪತ್ತೆಯ ಕಥೆ ಕಟ್ಟಿದ ಭೂಪ

Public TV
1 Min Read
couple

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಮೃತದೇಹವನ್ನು ಚರಂಡಿಗೆ ಬಿಸಾಕಿದ್ದಾನೆ. ನಂತರ ಪೊಲೀಸರ ಬಳಿ ಪತ್ನಿ ನಾಪತ್ತೆಯಾಗಿದ್ದಾಳೆಂಬ ಕಥೆ ಕಟ್ಟಿದ್ದಾನೆ.

37 ವರ್ಷದ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಡುತ್ತಿರೋ ಸುಧೀರ್ ಈ ಕೃತ್ಯ ಎಸಗಿದ್ದಾನೆ. ಪ್ರತಿದಿನ ಪತಿ- ಪತ್ನಿ ನಡುವೆ ಕ್ಲುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಲೇ ಇತ್ತು. ಇದರಿಂದ ಬೇಸತ್ತ ವ್ಯಕ್ತಿ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ. ಆದರೆ ಪೊಲೀಸರ ಬಳಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದಾನೆ ಅಂತ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

delhi police 1

ದೆಹಲಿಯ ಆನಂದ್ ಪರ್ಬಾತ್ ನಿವಾಸಿಯಾಗಿರೋ ಸುಧೀರ್, ಶನಿವಾರ ರಾತ್ರೋ ರಾತ್ರಿ ತನ್ನ ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಾನೆ. ಹಾಗೆಯೇ ಪೊಲೀಸರ ಬಳಿ 33 ವರ್ಷದ ನನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಹೇಳಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಸುಧೀರ್ ನಡತೆಯಿಂದ ಪೊಲೀಸರಿಗೆ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಸುಧೀರ್ ನನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಸುಧೀರ್ ತಾನೇ ಕೊಲೆ ಮಾಡಿರುವುದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಕೂಡಲೇ ಪೊಲೀಸರು ಸುಧೀರ್ ನನ್ನು ಬಂಧಿಸಿದ್ದಾರೆ.

delhi police 1

ತನಿಖೆಯ ವೇಳೆ, ಪತ್ನಿ ಹಾಗೂ ನನ್ನ ಮಧ್ಯೆ ಪ್ರತಿನಿತ್ಯ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳಗಳಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ನಾನು ಆಕೆಯನ್ನು ಕೊಲೆ ಮಾಡಲು ಪ್ಲಾನ್ ಮಾಡಿರುವುದಾಗಿ ಬಾಯ್ಬಿಟಿದ್ದಾನೆ. ಶಾಪಿಂಗ್ ಮಾಡುವ ಎಂದು ಸುಳ್ಳು ಹೇಳಿ ಆಕೆಯನ್ನು ಕರೆದುಕೊಂಡು ಹೋಗಿ ನಂತರ ದುಪ್ಪಟ್ಟವನ್ನು ಆಕೆಯ ಕುತ್ತಿಗೆಗೆ ಸುತ್ತಿ ಕೊಲೆ ಮಾಡಿರುವುದಾಗಿ ಸುಧೀರ್ ವಿವರಿಸಿದ್ದಾನೆ. ಬಳಿಕ ಮೃತದೇಹವನ್ನು ಚರಂಡಿಗೆ ಎಸದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾನೆ.

arrested 1280x720 2

Share This Article
Leave a Comment

Leave a Reply

Your email address will not be published. Required fields are marked *