ಮುಂಬೈ: ಪತ್ನಿಯ ನಡತೆಯನ್ನು ಅನುಮಾನಿಸಿ ಮನೆಬಿಟ್ಟು ಹೋದ ವ್ಯಕ್ತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 27 ವರ್ಷದ ಯುವಕನನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿ ಒಂದೆಡೆಗೆ ಎಸೆದು ಹೋಗಿದ್ದರು. ಈ ಕುರಿತಾಗಿ ವಿಚಾರಣೆ ನಡೆಸಿದಾಗ ಕೊಲೆಯಾದ ವ್ಯಕ್ತಿಯ ಸುಳಿವು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ವ್ಯಕ್ತಿ ತನ್ನ ಪತ್ನಿಯ ನಡವಳಿಕೆಯನ್ನು ಅನುಮಾನಿಸುತ್ತಿದ್ದನಂತೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು. ಹೀಗೆ ಒಂದು ದಿನ ದಂಪತಿಯ ನಡುವೆ ಜಗಳವಾಗಿದ್ದು, ಮನೆಯಿಂದ ಆಚೆ ಹೋಗಿದ್ದಾನೆ. ನಂತರ ಈತನ ಶವ ಹಳ್ಳಿಯದಲ್ಲಿರುವ ಒಂದು ಕಲ್ಲಿನ ಮನೆಯಲ್ಲಿ ಪತ್ತೆಯಾಗಿದೆ ಎಂದು ವಾಡಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ವ್ಯಕ್ಯಿಯನ್ನು ಹಲ್ಲೆ ಮಾಡಿ ಕೊಂದಿದ್ದಾರೆ. ದೇಹದ ತುಂಬಾ ಗಾಯಗಳಾಗಿವೆ. ಶವವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಈ ಕುರಿತಾದ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ, ತನಿಖೆ ನಡೆಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.