– ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್
ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ- ಸಿಎಂ
ಈ ಬಗ್ಗೆ ಸಚಿವ ಶ್ರೀರಾಮು ಟ್ವೀಟ್ ಮಾಡಿದ್ದು, ಶವ ಸಂಸ್ಕಾರ ಮಾಡಿದ್ದ 8 ಜನರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮೊದಲಿಗೆ, “ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ” ಎಂದು ಶವ ಸಂಸ್ಕಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement 2
- Advertisement 3
ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ. ಕೋವಿಡ್-19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು, ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
- Advertisement 4
ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ. ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ ಎಂದು ಶ್ರೀರಾಮುಲು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ #ಕೋವಿಡ್19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ.
ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿರುವುದಲ್ಲದೆ, 1/3
— B Sriramulu (@sriramulubjp) June 30, 2020
ಏನಿದು ಪ್ರಕರಣ?
ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು.
ಜಿಲ್ಲಾಧಿಕಾರಿ ಕ್ಷಮೆ
ಪ್ರಕರಣದ ಕುರಿತು ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ.#ಕೋವಿಡ್19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಳ್ಳುತ್ತೇನೆ. 3/3
— B Sriramulu (@sriramulubjp) June 30, 2020
ಅಮಾನವೀಯ ಘಟನೆ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿ, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್ ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.