ಯಾದಗಿರಿ: ಜಿಲ್ಲೆಯಲ್ಲಿ ಮುಂದಿನ ಐದು ದಿನಗಳಲ್ಲಿ ಮದುವೆ ಮಾಡಿಕೊಳ್ಳುವವರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ. ಪಬ್ಲಿಕ್ ಟಿವಿ ವರದಿ ಬಳಿಕ ಮದುವೆ ನೆನಪಿನಲ್ಲಿ ಕಳ್ಳಾಟ ನಡೆಸಿದ್ದ ಕ್ರೂಸರ್ ವಾಹನಗಳಿಗೆ ಮತ್ತು ಜನರಿಗೆ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸಿದ್ದಾರೆ.

ಸುದ್ದಿಯಿಂದ ಸಮಸ್ಯೆ ಮನವರಿಕೆ ಮಾಡಿಕೊಂಡ ಜಿಲ್ಲಾಡಳಿತ, ಮುಂದಿನ ಐದು ದಿನಗಳಲ್ಲಿ ಮದುವೆ ಸಮಾರಂಭಗಳಿಗೆ ಬ್ರೇಕ್ ಹಾಕಿದೆ. ಜೂನ್ 7 ರ ಬೆಳಗ್ಗೆ 6 ಗಂಟೆ ವರಗೆ ಮದುವೆ ಸಮಾರಂಭಗಳಿಗೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಫ್ರೆಂಡ್ಸ್ ಜೊತೆಗೆ ಊರು ಸುತ್ತೋಕೆ ಬಂದು ಪೊಲೀಸರ ಕೈಗೆ ತಗ್ಲಾಕೊಂಡ ನವದಂಪತಿ



