ಯಾದಗಿರಿ: ಜಿಲ್ಲೆಯಲ್ಲಿ ಮುಂದಿನ ಐದು ದಿನಗಳಲ್ಲಿ ಮದುವೆ ಮಾಡಿಕೊಳ್ಳುವವರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ. ಪಬ್ಲಿಕ್ ಟಿವಿ ವರದಿ ಬಳಿಕ ಮದುವೆ ನೆನಪಿನಲ್ಲಿ ಕಳ್ಳಾಟ ನಡೆಸಿದ್ದ ಕ್ರೂಸರ್ ವಾಹನಗಳಿಗೆ ಮತ್ತು ಜನರಿಗೆ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸಿದ್ದಾರೆ.
ಮದುವೆ ಕಾರ್ಯಕ್ರಮಗಳಿಗೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೆಚ್ಚಿನ ಜನ ಪ್ರಯಾಣ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಹೆಚ್ಚಳವಾಗುತ್ತಿತ್ತು. ಮದುವೆಗೆ ಅನುಮತಿ ಪಡೆದು ಕಾನೂನು ಬಾಹಿರವಾಗಿ ಅನುಮತಿ ಪತ್ರಗಳನ್ನು, ಕ್ರೂಸರ್ ಮಾಲೀಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈ ಬಗ್ಗೆ ಇಂದು ಬೆಳಗ್ಗೆ 6.45ಗೆ ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದನ್ನೂ ಓದಿ: ಕಠಿಣ ಲಾಕ್ಡೌನ್ – ನಗರ ಪ್ರದಕ್ಷಿಣೆಗೆ ಸೈಕಲ್ ಏರಿದ ಎಸ್ಪಿ
ಸುದ್ದಿಯಿಂದ ಸಮಸ್ಯೆ ಮನವರಿಕೆ ಮಾಡಿಕೊಂಡ ಜಿಲ್ಲಾಡಳಿತ, ಮುಂದಿನ ಐದು ದಿನಗಳಲ್ಲಿ ಮದುವೆ ಸಮಾರಂಭಗಳಿಗೆ ಬ್ರೇಕ್ ಹಾಕಿದೆ. ಜೂನ್ 7 ರ ಬೆಳಗ್ಗೆ 6 ಗಂಟೆ ವರಗೆ ಮದುವೆ ಸಮಾರಂಭಗಳಿಗೆ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಫ್ರೆಂಡ್ಸ್ ಜೊತೆಗೆ ಊರು ಸುತ್ತೋಕೆ ಬಂದು ಪೊಲೀಸರ ಕೈಗೆ ತಗ್ಲಾಕೊಂಡ ನವದಂಪತಿ