ಪಾದರಾಯನಪುರದ ಪುಂಡರಿಗೆ ಷರತ್ತುಬದ್ಧ ಜಾಮೀನು

Public TV
1 Min Read
Padarayanapur Pundaru 3 copy

ಬೆಂಗಳೂರು: ಪಾದರಾಯನಪುರಲ್ಲಿ ಪೊಲೀಸರ ಮೇಲೆ ಹಲ್ಲೆ ಎಸೆಗಿದ್ದ ಪ್ರಕರಣದ ಎಲ್ಲಾ 126 ಆರೋಪಿಗಳಿಗೂ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಎಲ್ಲ ಆರೋಪಿಗಳಿಗೂ ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ನಡೆಸಬೇಕು. ಒಂದು ವೇಳೆ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದರೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ ಎಲ್ಲರೂ ಕೋವಿಡ್-19 ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದರೆ ಜಾಮೀನು ರದ್ದುಗೊಳ್ಳುವುದಾಗಿ ಹೈಕೋರ್ಟ್ ಷರತ್ತು ವಿಧಿಸಿದೆ.

HIGHCOURT

ಆರೋಪಿಗಳು 1 ಲಕ್ಷ ರೂ. ಬಾಂಡ್, ಶ್ಯೂರಿಟಿ ಒದಗಿಸಬೇಕು ಎಂದು ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದ ನ್ಯಾಯಪೀಠವು ಆದೇಶ ಹೊರಡಿಸಿದೆ.

ಏನಿದು ಪ್ರಕರಣ:
ಪಾದರಾಯನಪುರದಲ್ಲಿ ಚೆಕ್ ಪೋಸ್ಟ್ ನಾಶ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಬೆಂಗಳೂರಿನಲ್ಲೇ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಇರ್ಫಾನ್‍ನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

Padarayanapur Pundaru 1 copy

ಆರೋಪಿಗಳ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ ಅವರು ಕಕ್ಷಿದಾರರಿಗೆ ಜಾಮೀನು ನೀಡುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತು ವಿಚಾರಣೆ ನಡೆಸಿ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇರ್ಫಾನ್ ಯಾರು?:
ಕೆಎಫ್‍ಡಿಯ ಇರ್ಫಾನ್ ಕೇವಲ ಕೆಎಫ್‍ಡಿನಲ್ಲಿ ಇರಲಿಲ್ಲ. ಕಳೆದ ಬಾರಿ ಎಸ್‍ಡಿಪಿಐಯಿಂದ ಕಾರ್ಪೋರೇಷನ್ ಎಲೆಕ್ಷನ್‍ಗೆ ನಿಂತು ಸೋತಿದ್ದ. ಈ ಮೂಲಕ ಎಸ್‍ಡಿಪಿಐನಲ್ಲಿ ಕೂಡ ಗುರುತಿಸಿಕೊಂಡಿದ್ದ. ಹಾಲಿ ಕಾರ್ಫೊರೇಟರ್ ಇಮ್ರಾನ್ ಪಾಷಾ ವಿರುದ್ಧ ತೊಡೆ ತಟ್ಟೋದೆ ಈತನ ಉದ್ದೇಶವಾಗಿತ್ತು.

Padarayanapur Pundaru 2 copy

Share This Article
Leave a Comment

Leave a Reply

Your email address will not be published. Required fields are marked *