ಮೈಸೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೈಸೂರಿನ 11ವಿದ್ಯಾರ್ಥಿಗಳು ತಿರಸ್ಕರಿಸಿದ್ದು, ಪೂರಕ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.
ಡಿಡಿಪಿಯು ಶ್ರೀನಿವಾಸ್ ಮೂರ್ತಿ ಈ ಮಾಹಿತಿ ನೀಡಿದ್ದಾರೆ. ಮೈಸೂರು ನಗರದಲ್ಲಿ – 6, ಕೆ ಆರ್ ನಗರ- 3, ಹುಣಸೂರು-2 ಮಂದಿ ವಿದ್ಯಾರ್ಥಿಗಳು ರಿಸಲ್ಟ್ ರಿಜೆಕ್ಟ್ ಮಾಡಿದ್ದು, ಆಗಸ್ಟ್ ಕೊನೆಯ ವಾರದಲ್ಲಿ ಆರಂಭವಾಗಲಿರುವ ಪಿಯು ಪೂರಕ ಪರೀಕ್ಷೆ ಬರೆಯಲಿದ್ದಾರೆ.
ನಿರೀಕ್ಷೆಯಷ್ಟು ಅಂಕ ಬಂದಿಲ್ಲ, ಫಲಿತಾಂಶ ತೃಪ್ತಿದಾಯಕವಲ್ಲ ಎಂದು ವಿದ್ಯಾರ್ಥಿಗಳು ರಿಜೆಕ್ಟ್ ಮಾಡಿದ್ದಾರೆ. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿತ್ತು.
11ಮಂದಿ ವಿದ್ಯಾರ್ಥಿಗಳ ಜೊತೆ ಕಳೆದ ವರ್ಷದ 6 ಮಂದಿ ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಪ್ರತಿ ಬಾರಿನೂ ದುರ್ಗಾದೇವಿ ಆಶೀರ್ವಾದ ಮಾಡ್ಕೊಂಡೇ ಬಂದಿದ್ದಾಳೆ: ಕೌರವ