ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಗದ ಲಕ್ಷಣವೇ ಇಲ್ಲದವಿರಗೆ ಕೊರೊನಾ ಪಾಸಿಟಿವ್ ಬರುತ್ತಿರುವ ಕಾರಣ, ಈ ರೋಗಿಗಳಿಗೆ ಚಿಕಿತ್ಸೆ ನೀಡಿಲು ಪೀಣ್ಯದ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೋವಿಡ್-19 ಲಕ್ಷಣಗಳಿಲ್ಲದ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸುವುದು ಕಷ್ಟಕರವಾಗುತ್ತಿದೆ. ಸರ್ಕಾರದ ಸಲಹೆಯಂತೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಲಕ್ಷಣ ರಹಿತ ಮತ್ತು ಸೌಮ್ಯ ಪ್ರಕರಣಗಳನ್ನು ನಿರ್ವಹಿಸಲು ಕೋವಿಡ್ ಆರೈಕೆ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್ ಆರೈಕೆ ಕೇಂದ್ರದ ಸ್ಥಾಪನೆಗಾಗಿ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ಪೀಣ್ಯ ಬೆಂಗಳೂರಿನಲ್ಲಿ ಸ್ಥಳಾವಕಾಶ ಒದಗಿಸಿದೆ ಎಂದು ಕೆ.ಎಸ್.ಆರ್.ಟಿ.ಸಿಯು ಮಾಹಿತಿ ನೀಡಿದೆ.
ಕೇಂದ್ರವು ಆಗಸ್ಟ್ 6 ರಿಂದ ಕಾರ್ಯಾರಂಭ ಮಾಡಲಿದೆ. ರೋಟರಿ ಅಡ್ವಿಕಾ ಕೇರ್ ಫೌಂಡೇಶನ್ ಮತ್ತು ನಯೋನಿಕಾ ಐ ಟ್ರಸ್ಟ್ ಸಹಯೋಗದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುತ್ತಾರೆ. ಈ ಕೇಂದ್ರವನ್ನು ನಿರ್ವಹಿಸಲು ವೈದ್ಯಕೀಯ ಪಾಲುದಾರರಾಗಿ ಪ್ರಕ್ರಿಯಾ ಆಸ್ವತ್ರೆ, ನಾಗಸಂದ್ರ, ಬೆಂಗಳೂರು ಮತ್ತು ಟೈಟಾನ್ ಸಂಸ್ಥೆ ಪ್ರಮುಖ ಹಣಕಾಸಿನ ಪಾಲುದಾರರಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಕೇಂದ್ರವನ್ನು ಇಂದು ಡಿಸಿಎಂ ಲಕ್ಷಣ ಸವದಿಯವರು ಉದ್ಘಾಟಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ಕೇಂದ್ರ ಕಛೇರಿ: ಬೆಂಗಳೂರು
ಪತ್ರಿಕಾ ಪ್ರಕಟಣೆ
ವಿಷಯ: ‘’ಕೆ ಎಸ್ ಆರ್ ಟಿ ಸಿ- ರೋಟರಿ ಅಡ್ವಿಕಾ ನಯೋನಿಕಾ ಕೋವಿಡ್ ಕೇರ್ ಸೆಂಟರ್’’, ಶ್ರೀ ಬಸವೇಶ್ವರ ಬಸ್ ನಿಲ್ದಾಣ, ಬೆಂಗಳೂರು.
ಲಿಂಕ್; https://t.co/IjIR5VypQv pic.twitter.com/h9OkQN1wVQ
— KSRTC (@KSRTC_Journeys) August 5, 2020
ಕೊವಿಡ್-19 ಗೆ ತುತ್ತಾಗಿ ಗುಣಮುಖರಾದ ಕೆ.ಎಸ್.ಆರ್.ಟಿ.ಸಿ ಚಾಲಕ, ನಿರ್ವಾಹಕ, ಸಿಬ್ಬಂದಿಗಳಿಗೆ ಮಾನ್ಯ ಉಪಮುಖ್ಯಮಂತ್ರಿಗಳು ಹೂ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಸುಮಾರು ಒಂದು ಸಾವಿರ ಸಿಬ್ಬಂದಿ ಕೊವಿಡ್-19 ಗೆ ತುತ್ತಾಗಿದು 700 ಸಿಬ್ಬಂದಿಗಳು ಗುಣಮುಖರಾಗಿದ್ದಾರೆ. ಅವರುಗಳ ಯೋಗ ಕ್ಷೇಮ ನಮ್ಮ ಪ್ರತಮ ಆದ್ಯತೆಯಾಗಿದ್ದು, ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ನಮ್ಮ ಸಿಬ್ಬಂದಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಪೀಣ್ಯ ಬಸ್ ನಿಲ್ದಾಣದ ನೆಲಮಹಡಿ ಹಾಗೂ ಮೊದಲನೆ ಮಹಡಿಯಲ್ಲಿ, ಈ ಕೇಂದ್ರವು ಮೊದಲನೆ ಹಂತದಲ್ಲಿ 200 ಹಾಸಿಗೆಗಳನ್ನು ಹೊಂದಿರುತ್ತದೆ. ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಮತ್ತು ಬೇಡಿಕೆ ಹೆಚ್ಚಾದರೆ ಇನ್ನೂ 100 ಹಾಸಿಗೆಗಳನ್ನು ಸೇರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಪೂರ್ಣ ಸಮಯದ ದಾದಿಯರು, ವೈದ್ಯರು, ರೋಗಿಗಳ ಆರೈಕೆ ಮಾಡುವವರು, ಸ್ವಚ್ಛತಾಕಾರರು, ವ್ಯವಸ್ಥಾಪಕರು, ಬಿಲ್ಲಿಂಗ್ ತಂಡ, ಸ್ವಾಗತಕಾರರು, ನಿರ್ವಹಣೆ ಮತ್ತು ಭದ್ರತಾ ತಂಡಗಳು ಇರಲಿವೆ. ರೋಗಿಗೆ ಆಸ್ವತ್ರೆಯ ಆರೈಕೆ ಅಗತ್ಯವಿದ್ದಲ್ಲಿ, ಪ್ರಕ್ರಿಯಾ ಆಸ್ವತ್ರೆ ತನ್ನ ಆಸ್ವತ್ರೆಗಳಲ್ಲಿ ಅವಕಾಶ ಕಲ್ಪಿಸುತ್ತದೆ. ಕೇಂದ್ರದಲ್ಲಿ ಅಂಬುಲೆನ್ಸ್ ಜೊತೆ ಆಕ್ಸಿಜನ್ ಸೌಲಭ್ಯ ಲಭ್ಯವಿರುತ್ತದೆ. ಸ್ವಾಬ್ ಸಂಗ್ರಹ ಕೇಂದ್ರವನ್ನು ಸಹ ಇಲ್ಲಿ ಸ್ಥಾಪಿಸಲಾಗಿದೆ.
ಈ ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಮತ್ತು ವಾಯವ್ಯ ಸಾರಿಗೆ ಉದ್ಯೋಗಿಗಳು ಮತ್ತು ಅವರ ಕುಟುಂಬಗಳಿಗೆ 50% ಹಾಸಿಗೆಗಳನ್ನು ಒದಗಿಸಲಾಗಿದೆ. ಈ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ರೋಟರಿ ಮತ್ತು ಟೈಟಾನ್ನಿಂದ ಉಲ್ಲೇಖಿಸಲಾದ ರೋಗಿಗಳಿಗೆ 10% ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸರ್ಕಾರ ಸೂಚಿಸಿದ ದರಗಳ ಪ್ರಕಾರ ರೋಗಿಗಳಿಗೆ ಶುಲ್ಕ ವಿಧಿಸಲಾಗುತ್ತದೆ. ಬಡವರು ಮತ್ತು ನಿರ್ಗತಿಕರಿಗೆ ಈ ಕೇಂದ್ರದಿಂದ ಅನುಕೂಲವಾಗಲಿದೆ.
ರೋಗಿಗಳಿಗೆ ಆಹಾರ ಮತ್ತು ಇತರ ಸೇವೆಗಳೊಂದಿಗೆ ಮೂಲ ವೈದ್ಯಕೀಯ ಸೇವೆಯನ್ನು ನೀಡಲಾಗುತ್ತದೆ. ಸದರಿ ಕೇಂದ್ರದಲ್ಲಿ ಶೌಚಾಲಯ, ಬಿಸಿ ನೀರಿನ ಸ್ನಾನದ ಸೌಲಭ್ಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಎಲ್ಲಾ ರೋಗಿಗಳಿಗೆ ಪೌಷ್ಠಿಕ ಆಹಾರವನ್ನು ನೀಡಲಾಗುವುದು. ಈ ಕೇಂದ್ರದಲ್ಲಿ ಸಿಬ್ಬಂದಿ ಇರಲು ಅವಕಾಶ ಕಲ್ಪಿಸಲಾಗಿದೆ. ಸಿಬ್ಬಂದಿ ಮತ್ತು ವೈದ್ಯರುಗಳಿಗೆ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಕೇಂದ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ಸಂಪೂರ್ಣ ಪಿಪಿಇ ಕಿಟ್ಗಳನ್ನು ಒದಗಿಸಲಾಗಿದೆ.
ಕೇಂದ್ರವು ತುರ್ತು ವಾರ್ಡ್ ಮತ್ತು 10 ಹಾಸಿಗೆಗಳ ಐಸಿಯು ಹೊಂದಿದ್ದು, ಇದರಲ್ಲಿ ರೋಗಿಗಳ ಹಾಸಿಗೆಗಳು, ಮಾನಿಟರ್ ಗಳು, ಆಮ್ಲಜನಕ ಪೂರೈಕೆ ಮತ್ತು ಆಮ್ಲಜನಿಕ ಸಾಂದ್ರತೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐಸಿಯು ಅನ್ನು ಟೈಟಾನ್ ಕಂಪನಿಯು ಪ್ರಾಯೋಜಿಸುತ್ತಿದೆ. ರೋಗಿಗಳು ಆಸ್ವತ್ರೆಯಲ್ಲಿ ಹಾಸಿಗೆ ಸಿಗುವವರೆಗೂ ಅವರನ್ನು ಇಲ್ಲಿ ತಾತ್ಕಲಿಕವಾಗಿ ನೋಡಿಕೊಳ್ಳಲಾಗುತ್ತದೆ. ಹೆಚ್ಚಿನ ವೈದ್ಯಕೀಯ ಅಗತ್ಯ ಕಂಡು ಬಂದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು.