ಪುರಸಭೆ ಸದಸ್ಯೆಗೆ ಗರ್ಭಪಾತ – ಸಿಎಂಗೆ ಕಣ್ಣು, ಬಾಯಿ ಇಲ್ಲ ಅಂದ್ರು ಉಮಾಶ್ರೀ

Public TV
2 Min Read
umashree

– ಗರ್ಭಪಾತ, ಕೊಲೆಗೆ ಸಮಾನ

ಬಾಗಲಕೋಟೆ: ಮಹಲಿಂಗಪುರ ಸದಸ್ಯೆ ತಳ್ಳಾಟ ನೂಕಾಟದಿಂದ ಮಾನಸಿಕ ಹಿಂಸೆ ಹಾಗೂ ದೈಹಿಕ ಹಿಂಸೆಯ ಪರಿಣಾಮ ಅವರಿಗೆ ಗರ್ಭಪಾತವಾಗಿದೆ. ಸಿಎಂಗೆ ಕಿವಿ, ಕಣ್ಣೂ, ಬಾಯಿಯೂ ಇಲ್ಲದಂತಾಗಿದೆ ಎಂದು ಮಾಜಿ ಸಚಿವೆ, ನಟಿ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.

BJP MLA Siddu Savadi a

ಬಿಜೆಪಿ ಶಾಸಕ ಮತ್ತು ಬೆಂಬಲಿಗರ ತಳ್ಳಾಟದಿಂದಾಗಿ ಪುರಸಭೆ ಸದಸ್ಯೆಗೆ ಗರ್ಭಪಾತ ವಿಚಾರವಾಗಿ ಮಾತನಾಡಿದ ಉಮಾಶ್ರೀ, ಗರ್ಭಪಾತ ಆಗಿರೋದು ಕೊಲೆಗೆ ಸಮಾನವಾಗಿದೆ. ಆದರೆ ಸರ್ಕಾರ ಮಾತ್ರ ಏನು ಕ್ರಮ ಕೈ ಗೊಳ್ಳುತ್ತಿಲ್ಲ. ಈ ಘಟನೆಯಲ್ಲಿ ಇದ್ದ ನೀಚ ಶಾಸಕರನ್ನು ಸರ್ಕಾರ ಪಕ್ಷದಿಂದ ಹೊರಗಿಡಬೇಕು. ಸರ್ಕಾರ ಅಪರಾಧಿಗಳನ್ನ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

BJP MLA Siddu Savadi Mahalingapura Election 1

ಏನಿದು ಪ್ರಕರಣ?:
ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. ಇದೀಗ ಅವರಿಗೆ ಗರ್ಭಪಾತವಾಗಿದೆ

BJP MLA Siddu Savadi a 1

ನಡೆದಿದ್ದೇನು?:
ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿತ್ತು. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದರು. ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿತ್ತು. ಪೋಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆಯಿಂದ ವರ್ತನೆ ಮಾಡಲಾಗಿತ್ತು. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

BJP MLA Siddu Savadi 2

ಘಟನೆ ಸಂಬಂಧ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಚಾಂದಿನಿ ನಾಯ್ಕ್, ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ತೆರಳಿದ್ದೆವು. ಈ ವೇಳೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಘಟನೆ ನಡೆಯುವ ಮುನ್ನವೇ ನಮಗೆ ರಕ್ಷಣೆ ನೀಡುವಂತೆ ಪೋಲೀಸರಿಗೆ ಮನವಿ ಮಾಡಿದ್ದೆವು. ಆದರೆ ಅವರು ಯಾವುದೇ ರಕ್ಷಣೆ ನೀಡಲು ಮುಂದಾಗಲಿಲ್ಲ. ಶಾಸಕರು ಹಾಗೂ ಅವರ ಬೆಂಬಲಿಗರು ನಮ್ಮನ್ನು ಹಿಡಿದು ಎಳೆದಾಡಿ, ಮೆಟ್ಟಿಲು ಮೇಲಿನಿಂದ ತಳ್ಳಿ ತುಳಿದಾಡಿದ್ದರು. ಘಟನೆಯಿಂದ ಮಾಸಿಕವಾಗಿ, ದೈಹಿಕವಾಗಿ ನೋವಾಗಿದ್ದು, ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ ಎಂದು ಅಲವತ್ತುಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *