Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪುರಾಣ ಪ್ರಸಿದ್ಧ ಕೋಟಿತೀರ್ಥ ಗಂಗೆ ಶುದ್ಧಿಗೆ ಶೀಘ್ರದಲ್ಲೇ ಅನುದಾನ

Public TV
Last updated: January 31, 2021 12:56 pm
Public TV
Share
2 Min Read
koti thirtha web
SHARE

ಕಾರವಾರ: ಪುರಾಣ ಪ್ರಸಿದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥ ಕೆರೆಯ ಶುದ್ಧಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಹಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

koti thirtha web 2

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಗೋಕರ್ಣಕ್ಕೆ ಆಗಮಿಸಿದ್ದ ಸಚಿವ ಈಶ್ವರಪ್ಪನವರು ಕೋಟಿ ತೀರ್ಥಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಯನ್ನು ಆಲಿಸಿದ್ದರು. ಈ ವೇಳೆ ಪುಣ್ಯ ಕ್ಷೇತ್ರದ ಗಂಗೆ ಮಲೀನವಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಅವರು ಕೋಟಿ ತೀರ್ಥ ಅಭಿವೃದ್ಧಿ ಮಾಡುವ ಭರವಸೆ ನೀಡಿದ್ದರು.

ಕೋಟಿತೀರ್ಥ ಅಭಿವೃದ್ಧಿಗೆ ಸೂಚನೆ: ಗೋಕರ್ಣದ ಕೋಟಿತೀರ್ಥ ಅಭಿವೃದ್ಧಿಗೆ 1.50 ಕೋಟಿ ಅಗತ್ಯವಿದೆ ಎಂದು ಅಧಿಕಾರಿಗಳು ಶನಿವಾರ ನಡೆದ ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಜಿಲ್ಲಾ ಪಂಚಾಯಿತಿಯಲ್ಲಿ ಅನುದಾನದ ಲಭ್ಯತೆಯ ಬಗ್ಗೆ ಪರಿಶೀಲಿಸಿ, ಒಂದು ವೇಳೆ ಕೊರತೆಯಿದ್ದರೆ ತಿಳಿಸಿ, ಅನುದಾನ ಬಿಡುಗಡೆ ಮಾಡಿಸಲಾಗುವುದು. ಕೂಡಲೇ ಕಾಮಗಾರಿ ಆರಂಭವಾಗಬೇಕು ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ. ಶೀಘ್ರ ಸ್ವಚ್ಛತೆ ಮಾಡಲು ಸೂಚಿಸಲಾಗಿದೆ ಎಂದು ಪಬ್ಲಿಕ್ ಟಿ.ವಿ ಗೆ ಮಾಹಿತಿ ನೀಡಿದ್ದಾರೆ.

koti thirtha web 1

ವೈಜ್ಞಾನಿಕ ಪದ್ಧತಿ ಅನುಸರಿಸಿ: ಕೋಟಿ ತೀರ್ಥ ಸ್ಥಳವು ಗೋಕರ್ಣದ ಮಧ್ಯ ಭಾಗದಲ್ಲಿದೆ. ಅಂತರಗಂಗೆಯಾಗಿ ಕೋಟಿ ತೀರ್ಥದಲ್ಲಿ ಪ್ರತ್ಯಕ್ಷವಾಗುವ ಪುಷ್ಕರಣಿಯ ನೀರು ಗಂಗಾ ಜಲದಷ್ಟೇ ಪವಿತ್ರವೆಂದು ಪುರಾಣದಲ್ಲಿ ವಿಶ್ಲೇಷಣೆಗಳಿವೆ. ಇದಲ್ಲದೇ ಈ ಪುಷ್ಕರಣಿ ನೀರಿನ ಆಗರವು ಸುತ್ತಮುತ್ತಲ ಪ್ರದೇಶದ ಜಲಮೂಲ ಸಹ ಆಗಿದೆ. ಹೀಗಾಗಿ ಇದರಲ್ಲಿರುವ ಹುಳು ತೆಗೆಯಲು ಹಾಗೂ ಶುದ್ಧತೆ ಮಾಡಲು ವೈಜ್ಞಾನಿಕ ಪದ್ದತಿ ಅನುಸರಿಸಬೇಕು ಎಂಬ ಸ್ಥಳೀಯರು ಒತ್ತಾಯಿಸಿದ್ದರು. ಈ ಕುರಿತು ಜಿಲ್ಲಾಡಳಿತ ಕೂಡ ಗಮನ ಹರಿಸುತಿದ್ದು, ಇದರ ಅಂದ ಕೆಡದೇ ಜಲಮೂಲ ಬತ್ತದಂತೆ ನೋಡಿಕೊಂಡು ಶುದ್ಧೀಕರಣಕ್ಕೆ ಜಿಲ್ಲಾಡಳಿತ ಪ್ರಯತ್ನ ನಡೆಸಿದೆ.

koti thirtha web 3

ಕೋಟಿ ತೀರ್ಥವನ್ನು ಕಳೆದ ಆರು ವರ್ಷದ ಹಿಂದೆ ಸ್ವಚ್ಛತೆ ಮಾಡಲಾಗಿತ್ತು. ಹೊಂಡದ ಹೂಳೆತ್ತಿ ಒಂದು ಹಂತದ ಸ್ವಚ್ಛತೆ ಮಾಡಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಅವೈಜ್ಞಾನಿಕ ಪದ್ದತಿ ಅನುಸರಿಸಿದರಿಂದ ಹೊಂಡ ಈ ರೀತಿ ಗಲೀಜಾಗಿದೆ ಎಂದು ಸ್ಥಳೀಯರು ದೂರಿದ್ದರು.

koti thirtha web 5

ಮಲೀನದಿಂದ ಕೋಟಿ ತೀರ್ಥದ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಕಸ ಕಡ್ಡಿಗಳು, ಅವ್ಯಾಹತವಾಗಿ ಬೆಳೆದುಕೊಂಡು ಪಾಚಿ, ಕೊಳೆತು ನಾರುತ್ತಿರುವ ಹೂವುಗಳಿಂದ ಕೋಟಿ ತೀರ್ಥದ ಅಂದ ಕೆಟ್ಟು ಸ್ವಚ್ಚತೆ ಇಲ್ಲದೆ ಪ್ರಾಮುಖ್ಯತೆ ಕಳೆದುಕೊಂಡಿತ್ತು. ಇದರಲ್ಲಿ ಸ್ನಾನ ಮಾಡುವವರಿಗೆ ದೇಹದಲ್ಲಿ ತುರುಕೆ, ಚರ್ಮ ರೋಗಗಳು ಬಾಧಿಸುತಿತ್ತು. ಈ ಕಾರಣ ಭಕ್ತರು ಪಿಂಡ ಪ್ರಧಾನ ಮಾಡುವ ಸಮಯದಲ್ಲಿ ನೀರನ್ನು ಪ್ರೋಕ್ಷಣ್ಯ ಮಾತ್ರ ಮಾಡಿಕೊಳ್ಳುತಿದ್ದರು. ಹಿಂದೂ ಸಂಪ್ರದಾಯದ ವಿಧಿ ವಿಧಾನಗಳನ್ನು ಆಚರಿಸುವ ಪವಿತ್ರ ಪುಷ್ಕರಣಿ ಹೊಂಡ ಸದ್ಯ ತನ್ನ ಅಂದವನ್ನು ಕಳೆದುಕೊಂಡು ರೋಗ ಹರಡುವ ಮೂಲವಾಗಿದೆ.

koti thirtha web 4

ಗೋಕರ್ಣ ದಲ್ಲಿ ಪ್ರತಿ ವರ್ಷ ಶಿವರಾತ್ರಿ ಸಂದರ್ಭದಲ್ಲಿ ಇಲ್ಲಿನ ಗ್ರಾಮ ಪಂಚಾಯತಿಯಿಂದ ಸ್ವಚ್ಛತೆ ಕಾರ್ಯ ಮಾಡಲಾಗುತ್ತದೆ. ಆದರೆ ಇದು ಕೇವಲ ತಾತ್ಕಾಲಿಕ. ಪೂರ್ಣ ಪ್ರಮಾಣದ ಸ್ವಚ್ಛತೆ ಆಗುತ್ತಿಲ್ಲ. ಇದರಿಂದಾಗಿ ಇಲ್ಲಿನ ನೀರಿನಲ್ಲಿ ಸ್ನಾನ ಮಾಡಲು ಸಹ ಭಕ್ತರು ಹೆದರುತಿದ್ದರು. ಸದ್ಯ ಹಣ ಬಿಡುಗಡೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು ಶೀಘ್ರದಲ್ಲಿ ಪವಿತ್ರ ಗಂಗೆ ಶುದ್ಧವಾಗಲಿದ್ದಾಳೆ.

TAGGED:eshwarappaGokarnaKoti TheerthaPublic TVriverState Governmentಈಶ್ವರಪ್ಪಕಾರವಾರಕೋಟಿ ತೀರ್ಥಗೋಕರ್ಣನದಿಪಬ್ಲಿಕ್ ಟಿವಿ Karawaraರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
4 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
14 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
38 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
42 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
55 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?