Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ

Bengaluru City

ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ

Public TV
Last updated: September 30, 2020 11:59 am
Public TV
Share
2 Min Read
SIDDU DINESH
SHARE

– ದೇಶಾದ್ಯಂತ ಯುಪಿ ಪೊಲೀಸರ ವಿರುದ್ಧ ಆಕ್ರೋಶ

ಬೆಂಗಳೂರು: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಕ್ಕೆ ಇದೀಗ ದೇಶದ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕೂಡ ಯೋಗಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

1 12

ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ ಹಾಗೂ ಸಮಸ್ತ ಸಂಘ ಪರಿವಾರ ಕೂಡ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತು ಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು
ಕೊಲೆಯ ಹೊಣೆಯನ್ನು @myogiadityanath ಮಾತ್ರವಲ್ಲ,
ಅವರನ್ನು
ಬೆಂಬಲಿಸುತ್ತಿರುವ @narendramodi ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ.

ತಕ್ಷಣ @myogiadityanath ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ.#HathrasHorror

— Siddaramaiah (@siddaramaiah) September 30, 2020

ಇನ್ನೊಂದು ಟ್ವೀಟ್ ಮಾಡಿ, ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳು ಸುರಕ್ಷಿತವಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಕಿಡಿಕಾರಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ,
ಹೆತ್ತವರನ್ನು ಗೋಳಾಡಿಸಿದ @myogiadityanath ಕಾವಿಧಾರಿಗಳ ಪಾಲಿನ ಕಳಂಕ.

ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ.

ಮೊದಲು ಇವರನ್ನು ವಜಾ ಮಾಡಿ.#HathrasHorror

— Siddaramaiah (@siddaramaiah) September 30, 2020

ದಿನೇಶ್ ಗುಂಡೂರಾವ್ ಕೂಡ ಈ ಸಂಬಂಧ ಟ್ವೀಟ್ ಮಾಡಿ ಗರಂ ಆಗಿದ್ದಾರೆ. ಹತ್ರಾಸ್ ನಲ್ಲಿ ನಡೆದ ಘಟನೆಯ ಭಯಾನಕ ಅಂತ್ಯವಾಗಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಇಂತಹ ಅನೇಕ ಭಯಾನಕ ಘಟನೆಗಳನ್ನು ನೋಡುತ್ತಿದ್ದೇವೆ. ಯೋಗಿ ಅವರು ಕೆಟ್ಟದ್ದನ್ನು ರಕ್ಷಿಸುವ ಹಾಗೂ ಪ್ರೇರೇಪಿಸುವಂತಹ ಆಡಳಿತವನ್ನು ನಡೆಸುತ್ತಿದ್ದಾರೆ. ಇದು ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ ಎಂದು ಬರೆದುಕೊಳ್ಳುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Capture 31

ಸೆಪ್ಟೆಂಬರ್ 14ರಂದು ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಯುವತಿ ತನ್ನ ತಾಯಿಯೊಂದಿಗೆ ಹುಲ್ಲು ತರಲು ಹೋಗಿದ್ದಳು. ಈ ವೇಳೆ ನಾಲ್ವರು ಕಾಮುಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ ಆಕೆಯ ನಾಲಿಗೆ ಕತ್ತರಿಸಿ, ಬೆನ್ನುಮೂಳೆ ಹಾಗೂ ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಘಟನೆಯಿಂದ ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯಿಸಿರೆಳೆದಿದ್ದಳು.

ಸಂಸ್ಕೃತಿಯ ರಕ್ಷಕರ ಮುಖವಾಡ ಹಾಕಿಕೊಂಡಿರುವ #BJP ನಾಯಕರಿಗೆ ದಲಿತ ಹುಡುಗಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕಣ್ಣಿಗೆ ಕಾಣಿಸುವುದಿಲ್ಲವೇ?

ಇದೇನಾ ನೀವು ಜನರ ಮುಂದೆ ಪ್ರತಿಪಾದಿಸುತ್ತಿರುವ #YogiAdityanath ಯ ಮಾದರಿ ರಾಜ್ಯ?

ಅತ್ಯಾಚಾರಿಗಳ ರಾಜ್ಯ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಕಾಪಾಡುವರ್ಯಾರು?#HathrasHorror

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 30, 2020

ಇತ್ತ ಮಗಳನ್ನು ಕಳೆದುಕೊಳ್ಳುತ್ತಿದ್ದಂತೆಯೇ ಸಂತ್ರಸ್ತೆಯ ಕುಟುಂಬದವರ ರೋಧನ ಮುಗಿಲುಮುಟ್ಟಿತ್ತು. ಅಲ್ಲದೇ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಯಿತು. ಸಂತ್ರಸ್ತೆಯ ಸಾವು ಖಂಡಿಸಿ ಆಕೆಯ ಸಹೋದರ ಹಾಗೂ ತಂದೆ ಪ್ರತಿಭಟನೆ ನಡೆಸುತ್ತಿದ್ದಂತೆಯೇ, ಇತ್ತ ಪೊಲೀಸರು ಸಂತ್ರಸ್ತೆಯ ಮೃತದೇಹವನ್ನು ಕಪ್ಪು ಬಣ್ಣದ ಸ್ಕಾರ್ಪಿಯೋದಲ್ಲಿ ಸಾಗಿಸಿ ನಸುಕಿನ ಜಾವ 2.30ರ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!

2 5

ತಮ್ಮ ಮಗಳ ಮುಖವನ್ನು ಕೊನೆಯ ಬಾರಿಗೂ ನೋಡಲು ಬಿಡದ ಪೊಲೀಸರ ವಿರುದ್ಧ ಸಂತ್ರಸ್ತೆಯ ಕುಟುಂಬಸ್ಥರು ನೋವಿನ ಆಕ್ರೋಶ ಹೊರ ಹಾಕಿದ್ದಾರೆ. ಮೃತದೇಹವನ್ನು ನಮಗೆ ಕೊಡಿ, ಬೆಳಗ್ಗೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಪರಪರಿಯಾಗಿ ಬೇಡಿಕೊಂಡರೂ ಪೊಲೀಸರು ಕ್ಯಾರೇ ಎನ್ನಲಿಲ್ಲ. ಒಟ್ಟಿನಲ್ಲಿ ಯುವತಿಯ ಕುಟುಂಬಸ್ಥರು ಹಾಗೂ ಪತ್ರಕರ್ತರನ್ನು ಹೊರಗಿಟ್ಟು ತಾವೇ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ದುಷ್ಟ ಉತ್ತರ ಪ್ರದೇಶ ಬಿಜೆಪಿ ಸರ್ಕಾರ.#ರಾವಣ_ರಾಜ್ಯ pic.twitter.com/2oL8rs30si

— Karnataka Congress (@INCKarnataka) September 30, 2020

TAGGED:bengalurudinesh gunduraoFuneralgang rapePublic TVsiddaramaiahಅಂತ್ಯಕ್ರಿಯೆಉತ್ತರಪ್ರದೇಶಗ್ಯಾಂಗ್‍ರೇಪ್ದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
12 minutes ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
1 hour ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
2 hours ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
2 hours ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?