ಮಂಡ್ಯ: ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.
ಅರಕೆರೆ ಗ್ರಾಮದಲ್ಲಿ ರಸ್ತೆ ಅಗಲೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಜೆಸಿಬಿ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. ರಸ್ತೆ ಅಗಲೀಕರಣ ನಡೆಸಕೂಡದು ಎಂದು ಆಗ್ರಹಿಸಿ ಪೊಲೀಸರ ಮುಂದೆಯೇ ಗೂಂಡಾಗಿರಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಪೊಲೀಸರು ಮಾಜಿ ಶಾಸಕರಿಗೆ ಸ್ಪಷ್ಟನೆ ನೀಡಿದ್ರೂ ಕೇಳದ ಮಾಜಿ ಶಾಸಕ ಪುಡಿ ರೌಡಿಯಂತೆ ವರ್ತಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಎಸ್ಪಿ ಪರಶುರಾಮ್, ಅರಕೆರೆಯಲ್ಲಿ ಇಂದು ರಸ್ತೆ ಅಗಲಿಕರಣ ಕೆಲಸ ನಡೆಯುತ್ತಿತ್ತು. ಅಧಿಕಾರಿಗಳು ಎಲ್ಲರೂ ಸ್ಥಳದಲ್ಲಿದ್ದು ಸಮಾಜಯಿಷಿ ನೀಡಿದ್ರು ಕೆಲವರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕೆಲಸಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರಿ ಅಧಿಕಾರಿಗಳ ಅನತಿಯಂತೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಶಾಸಕರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.