Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರ ಹತ್ಯೆಗೈದಿದ್ದಕ್ಕೆ ನಾನೇ ಆತನನ್ನು ಗುಂಡಿಕ್ಕಿ ಕೊಲ್ಲಬೇಕು ಅಂದ್ಕೊಂಡಿದ್ದೆ- ವಿಕಾಸ್ ದುಬೆ ಪತ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪೊಲೀಸರ ಹತ್ಯೆಗೈದಿದ್ದಕ್ಕೆ ನಾನೇ ಆತನನ್ನು ಗುಂಡಿಕ್ಕಿ ಕೊಲ್ಲಬೇಕು ಅಂದ್ಕೊಂಡಿದ್ದೆ- ವಿಕಾಸ್ ದುಬೆ ಪತ್ನಿ

Crime

ಪೊಲೀಸರ ಹತ್ಯೆಗೈದಿದ್ದಕ್ಕೆ ನಾನೇ ಆತನನ್ನು ಗುಂಡಿಕ್ಕಿ ಕೊಲ್ಲಬೇಕು ಅಂದ್ಕೊಂಡಿದ್ದೆ- ವಿಕಾಸ್ ದುಬೆ ಪತ್ನಿ

Public TV
Last updated: July 24, 2020 12:27 pm
Public TV
Share
3 Min Read
VIKAS DUBEY WIFE
SHARE

– 1 ವಾರ ಶಿಥಿಲಗೊಂಡ ಕಟ್ಟಡದಲ್ಲಿ ಜೀವನ ನಡೆಸಿದ್ದೇನೆ
– ದುಬೆಗೆ ಒಂದು ವಿಚಿತ್ರ ಖಾಯಿಲೆ ಇತ್ತು

ಲಕ್ನೋ: ಪೊಲೀಸರನ್ನು ಅಮಾನುಷವಾಗಿ ಕೊಂದಿದ್ದಕ್ಕೆ ನಾನೇ ನನ್ನ ಪತಿ ವಿಕಾಸ್ ದುಬೆಯನ್ನು ಕೊಲ್ಲಬೇಕು ಎಂದುಕೊಂಡಿದ್ದೆ ಎಂದು ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಪತ್ನಿ ರಿಚಾ ದುಬೆ ಹೇಳಿದ್ದಾರೆ.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ಬಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ದುಬೆ ಮತ್ತು ಅವನ ಸಹಚರರು ಗುಂಡಿನ ಮಳೆ ಸುರಿಸಿದ್ದರು. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು.

Vikas Dubey 2 1

ಈಗ ಈ ವಿಚಾರದ ಬಗ್ಗೆ ಮೊದಲ ಬಾರಿ ಮಾಧ್ಯಮಗಳ ಜೊತೆ ಮಾತನಾಡಿರುವ ವಿಕಾಸ್ ದುಬೆ ಪತ್ನಿ ರಿಚಾ, ಆತ ಮಾಡಿದಕ್ಕೆ ಕ್ಷಮೆಯೇ ಇಲ್ಲ. ಎಂಟು ಮಂದಿ ಅಮಾಯಕ ಪೊಲೀಸರ ಜೀವನ ಮತ್ತು ಕುಟುಂಬವನ್ನು ನಾಶ ಮಾಡಿದ್ದಾನೆ. ನಮಗೆ ಸಮಾಜದ ಮುಂದೆ ಮುಖ ತೋರಿಸದ ರೀತಿ ಮಾಡಿ ಹೋಗಿದ್ದಾನೆ. ಈ ಎಲ್ಲವನ್ನು ನೋಡುತ್ತಿದ್ದರೆ, ನಾನೇ ಆತನನ್ನು ಶೂಟ್ ಮಾಡಿ ಕೊಂದು ಬೇಡಬೇಕು ಎಂದು ಕೊಂಡಿದ್ದೆ ಎಂದು ಹೇಳಿದ್ದಾರೆ.

Vikas Dubey 1

ಅಂದು ಘಟನೆ ನಡೆದ ಜುಲೈ 2ರ ರಾತ್ರಿ ಸುಮಾರು 2 ಗಂಟೆಗೆ ನನಗೆ ಫೋನ್ ಮಾಡಿದ ದುಬೆ ನೀನು ಬಿಕ್ರು ಗ್ರಾಮವನ್ನು ಬಿಟ್ಟು ಓಡಿಹೋಗು ಎಂದು ಹೇಳಿದ್ದರು. ನಮ್ಮ ಮೇಲೆ ಪೊಲೀಸರು ಅಟ್ಯಾಕ್ ಮಾಡಿದ್ದಾರೆ. ನೀನು ಮಕ್ಕಳನ್ನು ಕರೆದುಕೊಂಡು ಇಲ್ಲಿಂದ ಹೋಗು ಎಂದು ತಿಳಿಸಿದರು. ನಾನು ಆಗ ಈ ಎಲ್ಲ ವಿಚಾರಗಳಿಂದ ನನಗೆ ಬೇಸರವಾಗಿದೆ ಎಂದು ಹೇಳಿದೆ. ಆತ ನನ್ನ ಮಾತನನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ನನಗೆ ಬೈದು ಕರೆಯನ್ನು ಕಟ್ ಮಾಡಿದ ಎಂದು ರಿಚಾ ತಿಳಿಸಿದ್ದಾರೆ.

Vikas Dubey

ನನಗೆ ಆತ ಮಾಡುವ ವ್ಯವಹಾರದ ಬಗ್ಗೆ ಜಾಸ್ತಿ ಗೊತ್ತಿರಲಿಲ್ಲ. ಜೊತೆಗೆ ಆತ ಯಾರ ಸಂಪರ್ಕದಲ್ಲಿ ಇದ್ದ ಎಂಬುದು ನನಗೆ ತಿಳಿದಿಲ್ಲ. ಆತ ಹೇಳಿದಾಗ ಮಾತ್ರ ನಾನು ಮಕ್ಕಳನ್ನು ಕರೆದುಕೊಂಡು ಬಿಕ್ರು ಗ್ರಾಮಕ್ಕೆ ಅವನನ್ನು ನೋಡಲು ಬರುತ್ತಿದ್ದೆ. ಇಲ್ಲಿಂದ ತಪ್ಪಿಸಿಕೊಂಡು ಹೋಗಿ ಮಗನೊಂದಿಗೆ ಒಂದು ವಾರಗಳ ಕಾಲ ಶಿಥಿಲಗೊಂಡ ಕಟ್ಟದ ಒಳಗೆ ಜೀವನ ಮಾಡಿದ್ದೇನೆ. ಆಗ ನನ್ನ ಮಕ್ಕಳ ಬಗ್ಗೆ ಮಾತ್ರ ಯೋಚಿಸಿದ್ದೆ. ನನಗೆ ಗೊತ್ತಿತ್ತು ನನ್ನ ಕುಟುಂಬವಾಗಲಿ ನನ್ನ ಅತ್ತೆಯಾಗಲಿ ನನ್ನ ಬೆಂಬಲಕ್ಕೆ ಬರುವುದಿಲ್ಲವೆಂದು ಎಂದು ರಿಚಾ ಹೇಳಿದ್ದಾಳೆ.

Vikas Dubey

ಇದೇ ವೇಳೆ ವಿಕಾಸ್ ದುಬೆಗೆ ಇದ್ದ ಒಂದು ವಿಚಿತ್ರ ಖಾಯಿಲೆಯ ಬಗ್ಗೆ ಹೇಳಿರುವ ರಿಚಾ, ಕಳೆದ ಕೆಲ ವರ್ಷಗಳ ಹಿಂದೆ ಆತ ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿತ್ತು. ಆಗ ಆತನ ತಲೆಗೆ ಪೆಟ್ಟಾಗಿತ್ತು. ಈ ವೇಳೆ ಅವನ ಮೆದುಳಿನಲ್ಲಿ ಗಾಳಿ ಗುಳ್ಳೆಗಳು ಆಗಿದ್ದವು. ಇದರಿಂದ ಆತನಿಗೆ ತನ್ನ ಕೋಪವನ್ನು ನಿಯಂತ್ರಣ ಮಾಡಲು ಆಗುತ್ತಿರಲಿಲ್ಲ. ಕಳೆದ ಮೂರು ನಾಲ್ಕು ತಿಂಗಳಿನಿಂದ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದ. ಆದ್ದರಿಂದ ಹೀಗೆ ಆಗಿದೆ ಎಂದು ರಿಚಾ ಹೇಳಿದ್ದಾರೆ.

Vikas Dubey 3

ದುಬೆ ಎನ್‍ಕೌಂಟರ್:
ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಜುಲೈ 10ರಂದು ಮುಂಜಾನೆ ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.

Vikas Dubey 2

ಆಗ ಪೊಲೀಸರು ವಿಕಾಸ್‍ನನ್ನು ವಾಹನದಿಂದ ಹೊರಗೆ ಎಳೆದುಕೊಂಡಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಕೂಡ ಗುಂಡಿನ ದಾಳಿ ಮಾಡಿದ್ದರು. ಈ ಶೂಟೌಟ್‍ನಲ್ಲಿ ಪೊಲೀಸರು ಆರೋಪಿ ವಿಕಾಸ್ ದುಬೆಯನ್ನ ಎನ್‍ಕೌಂಟರ್ ಮಾಡಿದ್ದರು. ಪರಿಣಾಮ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ಗೆ ಬಲಿಯಾಗಿದ್ದ.

TAGGED:familypolicePublic TVRicha Dubeyuttar pradeshVikas DubeyWifeಉತ್ತರ ಪ್ರದೇಶಕುಟುಂಬಪತ್ನಿಪಬ್ಲಿಕ್ ಟಿವಿಪೊಲೀಸ್ರಿಚಾ ದುಬೆವಿಕಾಸ್ ದುಬೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
24 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
44 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
45 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
50 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
55 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?