ಪೊಲೀಸ್ ಅಧಿಕಾರಿಗೆ 1 ವಾರ ಕಸ ಗುಡಿಸೋ ಶಿಕ್ಷೆ ವಿಧಿಸಿದ ಕಲಬುರಗಿ ಹೈಕೋರ್ಟ್!

Public TV
1 Min Read
11 3

ಕಲಬುರಗಿ: ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರು ಸ್ವೀಕರಿಸಿ, ಎಫ್‍ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.

ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದಿರುವುದು ಕರ್ತವ್ಯ ಲೋಪವಾಗುತ್ತದೆ. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಆದೇಶ ನೀಡಿದೆ.

11 6

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾಗಿರುವುದು ಮತ್ತು ಆ ಪ್ರದೇಶ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿವೆ. ಪ್ರಾಥಮಿಕವಾಗಿ ಪೊಲೀ ಅಧಿಕಾರಿ ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

22 4

ದೂರುದಾರೇ ತಾರಾಬಾಯಿ ಠಾಣೆಗೆ ಬಂದಿದ್ದರು ಎಂಬುದನ್ನು ಒಪ್ಪಿಕೊಳ್ಳುತ್ತಾರೆ. ಹೀಗಿದ್ದಾಗ ಆ ಅಧಿಕಾರಿ ಠಾಣಾ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಅದಾದ ಬಳಿಕ ಎಫ್‍ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡಿಕೊಂಡಿಲ್ಲ ಇದು ಸಿಪಿಐ ಅವರ ನಿರ್ಲಕ್ಷ್ಯತೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *