Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್

Districts

ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್

Public TV
Last updated: July 18, 2021 3:05 pm
Public TV
Share
3 Min Read
BIJ SCIENTIST
SHARE

ವಿಜಯಪುರ: ಪ್ರಕೃತಿ ಉಳಿವಿಗಾಗಿ ಶೇ.1ರಷ್ಟು ಜನ ಮಾತ್ರ ಪ್ರಯತ್ನಗಳನ್ನು ನಡೆಸಿದ್ದು, ಶೇ.99 ಜನರು ಪ್ರಕೃತಿಯ ವಿನಾಶದ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಪ್ರಕೃತಿ ರಕ್ಷಿಸಲು ಪ್ರಯತ್ನಿಸುತ್ತಿರುವ ಶೇ.1ರ ಜನ ಸಂಖ್ಯೆಯನ್ನು ಪ್ರತಿಶತ 10ಕ್ಕೆ ಏರಿಸಿದರೆ ಜಗತ್ತಿನಲ್ಲಿ ಸಾಕಷ್ಟು ಆರೋಗ್ಯಕರ ಬದಲಾವಣೆಗಳಾಗಿ ವಿಕೋಪಗಳು ತಪ್ಪುತ್ತವೆ. ಪ್ರಕೃತಿ ಉಳಿವಿಗಾಗಿ ಗಿಡ ನೆಡಿ ಎಂದು ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ್ ಬಿರಾದಾರ್ ಅಭಿಪ್ರಾಯಪಟ್ಟಿದ್ದಾರೆ.

SCIENTIST

ಮುದ್ದೇಬಿಹಾಳ ಢವಳಗಿ ಮೂಲದ ಡಾ.ಚಂದ್ರಶೇಖರ್ ಬಿರಾದಾರ್ ಸದ್ಯ ಈಜಿಪ್ಟ್‍ನಲ್ಲಿ ನೆಲೆಸಿದ್ದು, ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಮತ್ತು ಹವಾಮಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯ್ನಾಡಿನ ಪ್ರವಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ನಿವಾಸದಲ್ಲಿ ಇಂದು ಪರಿಸರ ಆಸಕ್ತರ ಉಪಹಾರ ಕೂಟ ಏರ್ಪಡಿಸಿದ ಸಂದರ್ಭದಲ್ಲಿ ಮಾತನಾಡಿದ ಡಾ.ಚಂದ್ರಶೇಖರ್ ಬಿರಾದಾರ್ ಅವರು, ಪ್ರಕೃತಿ ನಾಶಮಾಡುತ್ತಿರುವುದರಿಂದ ಮಣ್ಣು, ನೀರು, ಹವಾಮಾನಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿ, ವಿಷಮಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ಮೊದಲು ನಾವು ತಿನ್ನುವ ಆಹಾರವೇ ವಿಷವಾಗಿದೆ. ಇದನ್ನು ಬದಲಾಯಿಸಬೇಕು. ಯುವಕರಿಂದ ಮಾತ್ರ ಈ ಬದಲಾವಣೆ ಸಾಧ್ಯ. ನಾನು ಜಗತ್ತಿನ 50 ರಾಷ್ಟ್ರಗಳಲ್ಲಿ ಈ ಬದಲಾವಣೆ ಪ್ರಯೋಗವನ್ನು ಮಾಡಿದ್ದೇನೆ. ಯಶಸ್ವಿಯೂ ಆಗಿದ್ದೇನೆ. ನನ್ನ ತಾಯ್ನಾಡಿನ ನನ್ನ ಹೆಮ್ಮೆಯ ವಿಜಯಪುರ ಜಿಲ್ಲೆಯಲ್ಲಿ ಈ ಬದಲಾವಣೆ ತರುವ ಕಾರ್ಯವನ್ನು ಎಂ.ಬಿ.ಪಾಟೀಲ್ ರವರು ಕೋಟಿ ವೃಕ್ಷ ಅಭಿಯಾನದ ಮೂಲಕ ಯಶಸ್ವಿಯಾಗಿ ಮಾಡುತ್ತಿದ್ದು, ಭೂತನಾಳದ ಕಲ್ಲನ್ನು ಕೊರೆದು ಸಸಿ ನೆಟ್ಟು ಬೆಳೆಸಿದ್ದು ಸಣ್ಣ ಸಾಧನೆಯಲ್ಲ. ಅದು ಮಹಾನ್ ಕ್ರಾಂತಿಕಾರಿ ಕೆಲಸ ಎಂದು ನಾನು ಭಾವಿಸುತ್ತೇನೆ ಎಂದರು.

Tamarind tree

ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ, ಯುನೆಸ್ಕೋ ಜೀವವಿಜ್ಞಾನ ಪೀಠದ ಮುಖ್ಯಸ್ಥ ಡಾ.ಕುಶಾಲ್ ದಾಸ್ ಮಾತನಾಡಿ, ಪ್ರಕೃತಿಯ ರಕ್ಷಣೆಯ ಸಂಶೋಧನೆಗಳಲ್ಲಿ ಅಮೇರಿಕ, ಯೂರೋಪಿಯನ್ ರಾಷ್ಟ್ರಗಳು ಮುಂದಿದ್ದರೂ, ಆ ರಕ್ಷಣೆಯ ಕಾರ್ಯದಲ್ಲಿ ಅವರು ಮುಂದಾಗಿರುವುದು ಕಡಿಮೆ. ಏಷ್ಯಾದ, ಆಫ್ರಿಕಾದ ಕಾಡಿನ ಜನರೇ ಈ ಪ್ರಕೃತಿಯ ರಕ್ಷಕರು. ಏಕೆಂದರೆ ಅವರ ಹೃದಯದಲ್ಲಿಯೇ ಪ್ರಕೃತಿ ತುಂಬಿಕೊಂಡಿರುತ್ತದೆ. ಜಾಗತಿಕ ತಾಪಮಾನ ಸೇರಿದಂತೆ ಜಗತ್ತಿನ ಹಲವು ಗಂಭೀರ ಪ್ರಾಕೃತಿಕ ಸಮಸ್ಯೆಗಳಿಗೆ ಅಮೇರಿಕಾ ಅಧ್ಯಕ್ಷರೇ ಯೂಟರ್ನ್ ತೆಗೆದುಕೊಂಡಿರುವುದು ಅವರ ದ್ವಂಧ್ವ ನೀತಿಯನ್ನು ತೋರುತ್ತದೆ ಎಂದರು. ಇದನ್ನೂ ಓದಿ: ಮೋದಿ ಚಪ್ಪಾಳೆ, ತಟ್ಟೆ ಹೊಡೆಯೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿಕೆಶಿ

ಮಾಜಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ಜಗತ್ತಿನ ಹಲವು ರಾಷ್ಟ್ರಗಳ ಪ್ರಯೋಗಕ್ಕೂ ಭಾರತಕ್ಕೂ ತೀವ್ರ ವ್ಯತ್ಯಾಸವಿದೆ. 130 ಕೋಟಿ ಜನಸಂಖ್ಯೆಯ ಇಲ್ಲಿನ ಪರಿಸ್ಥಿತಿಗಳಲ್ಲಿ ನಾವು ಪರಿಸರ ಅಳಿವು-ಉಳಿವು ಕುರಿತು ಮಾತನಾಡುವುದೇ ದುಸ್ಥರವಾಗಿದೆ. ಅಧಿಕಾರ ನಡೆಸುವ ನಾಯಕರು, ಇಲಾಖೆ ಮುಖ್ಯಸ್ಥರು ಹೇಗೆ ಕ್ರೀಯಾಶೀಲರಾಗಿ ಕಾರ್ಯ ಮಾಡುತ್ತಾರೆಯೋ ಹಾಗೆಯೇ ಆ ಇಲಾಖೆ, ಅಧಿಕಾರಿಗಳು ಅದನ್ನು ಅನುಸರಿಸುತ್ತಾರೆ. ಆದರೆ ಇಲ್ಲಿನ ಸ್ಥಿತಿಗತಿಗಳು ಸರಿ ಇಲ್ಲ ಎಂದು ನಾವು ಭಾವಿಸದೇ ಆಶಾವಾದದಿಂದ ಪ್ರಯತ್ನಕ್ಕೆ ಮುಂದಾಗಬೇಕು. ಆಗ ಯಶಸ್ಸು ಖಂಡಿತ ಸಾಧ್ಯ. ಕೋಟಿವೃಕ್ಷ ಅಭಿಯಾನವೇ ಇದಕ್ಕೆ ಉತ್ತಮ ಉದಾಹರಣೆ. 5 ವರ್ಷಗಳ ಹಿಂದೆ ಅರಣ್ಯ ಇಲಾಖೆ ನರ್ಸರಿಗಳಲ್ಲಿ ಬೆಳೆದ ಸಸಿಗಳನ್ನು ತೆಗೆದುಕೊಂಡು ಹೋಗುವವರು ಇರಲಿಲ್ಲ. ಇತ್ತೀಚಿಗೆ ಸಸಿಗಳನ್ನು ಹಂಚಲು ಆರಂಭಿಸಿದ 2-3 ದಿನಗಳಲ್ಲಿ ಹತ್ತಾರು ಲಕ್ಷ ಸಸಿಗಳು ಖಾಲಿಯಾಗುತ್ತಿವೆ. ಇದರಿಂದ ಜಿಲ್ಲೆಯ ಪರಿಸರದಲ್ಲಿ ಉತ್ತಮ ಬದಲಾವಣೆ ಬಂದಿದೆ ಎಂದರು.

SCIENTIST 1

ವಿಜ್ಞಾನಿ ಚಂದ್ರಶೇಖರ ಅವರು ಜಿಲ್ಲೆಯ, ರಾಜ್ಯದ ಪರಿಸರ ಪೂರಕವಾಗಿ ನೀಡಿರುವ ಸಲಹೆಗಳನ್ನು ಕ್ರೋಢಿಕರಿಸಿ, ಆದ್ಯತೆಯ ಮೆರೆಗೆ ಅವುಗಳನ್ನು ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರ ಗಮನ ಸೆಳೆಯಲಾಗುವುದು ಎಂದು ಎಂ.ಬಿ.ಪಾಟೀಲ್ ಹೇಳಿದರು.

ಅರಣ್ಯ ಇಲಾಖೆ ಅಧಿಕಾರಿಗಳಾದ ಪಿ.ಕೆ.ಪೈ, ಎನ್.ಕೆ.ಬಾಗಯತ್, ಮಹೇಶ್ ಪಾಟೀಲ್, ಪ್ರಭುಲಿಂಗ, ಎನ್.ಡಿ.ಪಾಟೀಲ್ ಡೋಮನಾಳ, ಶರದ ರೂಡಗಿ, ಡಾ.ಮಹಾಂತೇಶ್ ಬಿರಾದಾರ್, ಡಾ.ಮುರುಗೇಶ್ ಪಟ್ಟಣಶೆಟ್ಟಿ, ಬಸವರಾಜ್ ಬಿರಾದಾರ್, ಪರುಗೌಡ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

TAGGED:Dr Chandrashekar Biradarforestforest departmentMB PatilNaturePublic TVvijayapuraಅರಣ್ಯಅರಣ್ಯ ಇಲಾಖೆಎಂ.ಬಿ.ಪಾಟೀಲ್ಡಾ. ಚಂದ್ರಶೇಖರ್ ಬಿರಾದಾರ್ಪಬ್ಲಿಕ್ ಟಿವಿಪ್ರಕೃತಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
18 minutes ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
1 hour ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
1 hour ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
1 hour ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
1 hour ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?