Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್

Districts

ಪ್ರಕೃತಿ ಉಳಿವಿಗಾಗಿ ಗಿಡ ನೆಡಿ : ವಿಜ್ಞಾನಿ ಡಾ.ಚಂದ್ರಶೇಖರ್

Public TV
Last updated: July 18, 2021 3:05 pm
Public TV
Share
3 Min Read
BIJ SCIENTIST
SHARE

ವಿಜಯಪುರ: ಪ್ರಕೃತಿ ಉಳಿವಿಗಾಗಿ ಶೇ.1ರಷ್ಟು ಜನ ಮಾತ್ರ ಪ್ರಯತ್ನಗಳನ್ನು ನಡೆಸಿದ್ದು, ಶೇ.99 ಜನರು ಪ್ರಕೃತಿಯ ವಿನಾಶದ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಪ್ರಕೃತಿ ರಕ್ಷಿಸಲು ಪ್ರಯತ್ನಿಸುತ್ತಿರುವ ಶೇ.1ರ ಜನ ಸಂಖ್ಯೆಯನ್ನು ಪ್ರತಿಶತ 10ಕ್ಕೆ ಏರಿಸಿದರೆ ಜಗತ್ತಿನಲ್ಲಿ ಸಾಕಷ್ಟು ಆರೋಗ್ಯಕರ ಬದಲಾವಣೆಗಳಾಗಿ ವಿಕೋಪಗಳು ತಪ್ಪುತ್ತವೆ. ಪ್ರಕೃತಿ ಉಳಿವಿಗಾಗಿ ಗಿಡ ನೆಡಿ ಎಂದು ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ್ ಬಿರಾದಾರ್ ಅಭಿಪ್ರಾಯಪಟ್ಟಿದ್ದಾರೆ.

SCIENTIST

ಮುದ್ದೇಬಿಹಾಳ ಢವಳಗಿ ಮೂಲದ ಡಾ.ಚಂದ್ರಶೇಖರ್ ಬಿರಾದಾರ್ ಸದ್ಯ ಈಜಿಪ್ಟ್‍ನಲ್ಲಿ ನೆಲೆಸಿದ್ದು, ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಮತ್ತು ಹವಾಮಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯ್ನಾಡಿನ ಪ್ರವಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ನಿವಾಸದಲ್ಲಿ ಇಂದು ಪರಿಸರ ಆಸಕ್ತರ ಉಪಹಾರ ಕೂಟ ಏರ್ಪಡಿಸಿದ ಸಂದರ್ಭದಲ್ಲಿ ಮಾತನಾಡಿದ ಡಾ.ಚಂದ್ರಶೇಖರ್ ಬಿರಾದಾರ್ ಅವರು, ಪ್ರಕೃತಿ ನಾಶಮಾಡುತ್ತಿರುವುದರಿಂದ ಮಣ್ಣು, ನೀರು, ಹವಾಮಾನಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗಿ, ವಿಷಮಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ಮೊದಲು ನಾವು ತಿನ್ನುವ ಆಹಾರವೇ ವಿಷವಾಗಿದೆ. ಇದನ್ನು ಬದಲಾಯಿಸಬೇಕು. ಯುವಕರಿಂದ ಮಾತ್ರ ಈ ಬದಲಾವಣೆ ಸಾಧ್ಯ. ನಾನು ಜಗತ್ತಿನ 50 ರಾಷ್ಟ್ರಗಳಲ್ಲಿ ಈ ಬದಲಾವಣೆ ಪ್ರಯೋಗವನ್ನು ಮಾಡಿದ್ದೇನೆ. ಯಶಸ್ವಿಯೂ ಆಗಿದ್ದೇನೆ. ನನ್ನ ತಾಯ್ನಾಡಿನ ನನ್ನ ಹೆಮ್ಮೆಯ ವಿಜಯಪುರ ಜಿಲ್ಲೆಯಲ್ಲಿ ಈ ಬದಲಾವಣೆ ತರುವ ಕಾರ್ಯವನ್ನು ಎಂ.ಬಿ.ಪಾಟೀಲ್ ರವರು ಕೋಟಿ ವೃಕ್ಷ ಅಭಿಯಾನದ ಮೂಲಕ ಯಶಸ್ವಿಯಾಗಿ ಮಾಡುತ್ತಿದ್ದು, ಭೂತನಾಳದ ಕಲ್ಲನ್ನು ಕೊರೆದು ಸಸಿ ನೆಟ್ಟು ಬೆಳೆಸಿದ್ದು ಸಣ್ಣ ಸಾಧನೆಯಲ್ಲ. ಅದು ಮಹಾನ್ ಕ್ರಾಂತಿಕಾರಿ ಕೆಲಸ ಎಂದು ನಾನು ಭಾವಿಸುತ್ತೇನೆ ಎಂದರು.

Tamarind tree

ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ, ಯುನೆಸ್ಕೋ ಜೀವವಿಜ್ಞಾನ ಪೀಠದ ಮುಖ್ಯಸ್ಥ ಡಾ.ಕುಶಾಲ್ ದಾಸ್ ಮಾತನಾಡಿ, ಪ್ರಕೃತಿಯ ರಕ್ಷಣೆಯ ಸಂಶೋಧನೆಗಳಲ್ಲಿ ಅಮೇರಿಕ, ಯೂರೋಪಿಯನ್ ರಾಷ್ಟ್ರಗಳು ಮುಂದಿದ್ದರೂ, ಆ ರಕ್ಷಣೆಯ ಕಾರ್ಯದಲ್ಲಿ ಅವರು ಮುಂದಾಗಿರುವುದು ಕಡಿಮೆ. ಏಷ್ಯಾದ, ಆಫ್ರಿಕಾದ ಕಾಡಿನ ಜನರೇ ಈ ಪ್ರಕೃತಿಯ ರಕ್ಷಕರು. ಏಕೆಂದರೆ ಅವರ ಹೃದಯದಲ್ಲಿಯೇ ಪ್ರಕೃತಿ ತುಂಬಿಕೊಂಡಿರುತ್ತದೆ. ಜಾಗತಿಕ ತಾಪಮಾನ ಸೇರಿದಂತೆ ಜಗತ್ತಿನ ಹಲವು ಗಂಭೀರ ಪ್ರಾಕೃತಿಕ ಸಮಸ್ಯೆಗಳಿಗೆ ಅಮೇರಿಕಾ ಅಧ್ಯಕ್ಷರೇ ಯೂಟರ್ನ್ ತೆಗೆದುಕೊಂಡಿರುವುದು ಅವರ ದ್ವಂಧ್ವ ನೀತಿಯನ್ನು ತೋರುತ್ತದೆ ಎಂದರು. ಇದನ್ನೂ ಓದಿ: ಮೋದಿ ಚಪ್ಪಾಳೆ, ತಟ್ಟೆ ಹೊಡೆಯೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿಕೆಶಿ

ಮಾಜಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ಜಗತ್ತಿನ ಹಲವು ರಾಷ್ಟ್ರಗಳ ಪ್ರಯೋಗಕ್ಕೂ ಭಾರತಕ್ಕೂ ತೀವ್ರ ವ್ಯತ್ಯಾಸವಿದೆ. 130 ಕೋಟಿ ಜನಸಂಖ್ಯೆಯ ಇಲ್ಲಿನ ಪರಿಸ್ಥಿತಿಗಳಲ್ಲಿ ನಾವು ಪರಿಸರ ಅಳಿವು-ಉಳಿವು ಕುರಿತು ಮಾತನಾಡುವುದೇ ದುಸ್ಥರವಾಗಿದೆ. ಅಧಿಕಾರ ನಡೆಸುವ ನಾಯಕರು, ಇಲಾಖೆ ಮುಖ್ಯಸ್ಥರು ಹೇಗೆ ಕ್ರೀಯಾಶೀಲರಾಗಿ ಕಾರ್ಯ ಮಾಡುತ್ತಾರೆಯೋ ಹಾಗೆಯೇ ಆ ಇಲಾಖೆ, ಅಧಿಕಾರಿಗಳು ಅದನ್ನು ಅನುಸರಿಸುತ್ತಾರೆ. ಆದರೆ ಇಲ್ಲಿನ ಸ್ಥಿತಿಗತಿಗಳು ಸರಿ ಇಲ್ಲ ಎಂದು ನಾವು ಭಾವಿಸದೇ ಆಶಾವಾದದಿಂದ ಪ್ರಯತ್ನಕ್ಕೆ ಮುಂದಾಗಬೇಕು. ಆಗ ಯಶಸ್ಸು ಖಂಡಿತ ಸಾಧ್ಯ. ಕೋಟಿವೃಕ್ಷ ಅಭಿಯಾನವೇ ಇದಕ್ಕೆ ಉತ್ತಮ ಉದಾಹರಣೆ. 5 ವರ್ಷಗಳ ಹಿಂದೆ ಅರಣ್ಯ ಇಲಾಖೆ ನರ್ಸರಿಗಳಲ್ಲಿ ಬೆಳೆದ ಸಸಿಗಳನ್ನು ತೆಗೆದುಕೊಂಡು ಹೋಗುವವರು ಇರಲಿಲ್ಲ. ಇತ್ತೀಚಿಗೆ ಸಸಿಗಳನ್ನು ಹಂಚಲು ಆರಂಭಿಸಿದ 2-3 ದಿನಗಳಲ್ಲಿ ಹತ್ತಾರು ಲಕ್ಷ ಸಸಿಗಳು ಖಾಲಿಯಾಗುತ್ತಿವೆ. ಇದರಿಂದ ಜಿಲ್ಲೆಯ ಪರಿಸರದಲ್ಲಿ ಉತ್ತಮ ಬದಲಾವಣೆ ಬಂದಿದೆ ಎಂದರು.

SCIENTIST 1

ವಿಜ್ಞಾನಿ ಚಂದ್ರಶೇಖರ ಅವರು ಜಿಲ್ಲೆಯ, ರಾಜ್ಯದ ಪರಿಸರ ಪೂರಕವಾಗಿ ನೀಡಿರುವ ಸಲಹೆಗಳನ್ನು ಕ್ರೋಢಿಕರಿಸಿ, ಆದ್ಯತೆಯ ಮೆರೆಗೆ ಅವುಗಳನ್ನು ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರ ಗಮನ ಸೆಳೆಯಲಾಗುವುದು ಎಂದು ಎಂ.ಬಿ.ಪಾಟೀಲ್ ಹೇಳಿದರು.

ಅರಣ್ಯ ಇಲಾಖೆ ಅಧಿಕಾರಿಗಳಾದ ಪಿ.ಕೆ.ಪೈ, ಎನ್.ಕೆ.ಬಾಗಯತ್, ಮಹೇಶ್ ಪಾಟೀಲ್, ಪ್ರಭುಲಿಂಗ, ಎನ್.ಡಿ.ಪಾಟೀಲ್ ಡೋಮನಾಳ, ಶರದ ರೂಡಗಿ, ಡಾ.ಮಹಾಂತೇಶ್ ಬಿರಾದಾರ್, ಡಾ.ಮುರುಗೇಶ್ ಪಟ್ಟಣಶೆಟ್ಟಿ, ಬಸವರಾಜ್ ಬಿರಾದಾರ್, ಪರುಗೌಡ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

TAGGED:Dr Chandrashekar Biradarforestforest departmentMB PatilNaturePublic TVvijayapuraಅರಣ್ಯಅರಣ್ಯ ಇಲಾಖೆಎಂ.ಬಿ.ಪಾಟೀಲ್ಡಾ. ಚಂದ್ರಶೇಖರ್ ಬಿರಾದಾರ್ಪಬ್ಲಿಕ್ ಟಿವಿಪ್ರಕೃತಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
4 hours ago
big bulletin 10 March 2026 part 1
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-1

Public TV
By Public TV
5 hours ago
big bulletin 10 March 2026 part 2
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-2

Public TV
By Public TV
5 hours ago
big bulletin 10 March 2026 part 3
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-3

Public TV
By Public TV
5 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?