Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿದ ಹಾಸನ ಪೊಲೀಸರು – ನಾಲ್ವರು ಅಂದರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿದ ಹಾಸನ ಪೊಲೀಸರು – ನಾಲ್ವರು ಅಂದರ್

Public TV
Last updated: October 14, 2020 12:16 am
Public TV
Share
3 Min Read
HSN
SHARE

ಹಾಸನ: ಜಿಲ್ಲೆಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 8 ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮೂರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬೇಲೂರು ವೃತ್ತದ ಸಿಪಿಐ ಮತ್ತು ತಂಡದವರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಖಚಿತ ಮಾಹಿತಿಯ ಮೇರೆಗೆ ಲಕ್ಯ ಗ್ರಾಮದ ವಾಸಿ ಮೆಕ್ಯಾನಿಕ್ ಶ್ರೀಕಾಂತ್ (26) ಹಾಗೂ ಆತನ ಸ್ನೇಹಿತರಾದ ಚೇತನ್ (29) ಮತ್ತು ಲೈಟ್ ಬಾಯ್ ಮೋಹನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದರು.

ವರ್ಷದ ಆರಂಭದ ಜನವರಿ 6 ರಂದು ಅರೆಕೆರೆ ಗ್ರಾಮದ ಬಳಿಯ ಬಾಣಾವರ ಜಾವಗಲ್ ಮುಖ್ಯ ರಸ್ತೆಯ ಎಡ ಬದಿಯ ಹಳ್ಳದಲ್ಲಿ 25 ರಿಂದ 30 ವರ್ಷದ ವ್ಯಕ್ತಿಯೊಬ್ಬರ ಅರೆಬೆಂದ ಕೊಳೆತ ಶವ ಪತ್ತೆಯಾಗಿತ್ತು. ಈ ಕುರಿತು ಬಾಣಾವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಎಎಸ್‍ಪಿ ನಂದಿನಿ ಅವರ ಮೇಲುಸ್ತುವಾರಿ, ಅರಸೀಕೆರೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಎಲ್. ನಾಗೇಶ್ ಹಾಗೂ ಬೇಲೂರು ವೃತ್ತ ನಿರೀಕ್ಷಕಸಿದ್ದರಾಮೇಶ್ವರ ಅವರ ನೇತೃತ್ವದಲ್ಲಿ ಬೇಲೂರು ಪಿಎಸ್‍ಐ ಆಜಂತ್ ಕುಮಾರ್ ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

HSN Police 2

ಅರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಶ್ರೀಕಾಂತ್‍ನ ಅಣ್ಣನ ಮಗನ ನಾಮಕರಣದ ಪಾರ್ಟಿಗೆ ಹೋಗಿ ಬರುತ್ತಿದ್ದ ಶ್ರೀಕಾಂತ್ ಮತ್ತು ಆತನ ಸ್ನೇಹಿತರಾದ ಚೇತನ್ ಮತ್ತು ಮೋಹನ್ ಚಿಕ್ಕಮಗಳೂರು ಲಕ್ಯ ಬಸ್ ನಿಲ್ದಾಣ ಬಳಿ ಕುಡಿದ ಅಮಲಿನಲ್ಲಿ ಭಿಕ್ಷುಕನೊಬ್ಬನ ಬಳಿ ಗಲಾಟೆ ಮಾಡಿಕೊಂಡರು. ಆ ಭಿಕ್ಷುಕ ಶ್ರೀಕಾಂತ್‍ನ ಕೈಗೆ ಕಚ್ಚಿ ಓಡಿ ಹೋಗುತ್ತಿದ್ದಾಗ, ಆತನ ಬೆನ್ನಟ್ಟಿದ ಮೂವರೂ ಹಿಡಿದು ಹಲ್ಲೆ ಮಾಡಿದ್ದಲ್ಲದೇ ಕೊಲೆ ಮಾಡಿ ಮಾರುತಿ ಎಸ್ಟಿಮ್ ಕಾರಿನಲ್ಲಿ ಶವ ಹಾಕಿಕೊಂಡು ಬಾಣಾವರ ಕಡೆಗೆ ಹೋಗಿ ಕೆರೆಕೋಡಿ ಹಳ್ಳದ ಸೇತುವೆ ಬಳಿ ಶವ ಸುಟ್ಟು ಹಾಕುವ ಯತ್ನ ಮಾಡಿದ್ದರು ಎಂದು ವಿಚಾರಣೆ ವೇಳೆ ಮಾಹಿತಿ ಲಭಿಸಿದೆ.

2ನೇ ಪ್ರಕರಣದಲ್ಲಿ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬಾಗನಹಳ್ಳಿ ಕ್ರಾಸ್ ಬಳಿ ಕಳೆದ ತಿಂಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ದೊಡ್ಡಬಾಗನಹಳ್ಳಿ ಕ್ರಾಸ್ ಸಮೀಪ ಜವೇನಹಳ್ಳಿ ಕೊಪ್ಪಲು ಸ್ವಾಮೀಗೌಡ ಎಂಬುವರ ಪುತ್ರ ದಿನೇಶ್‍ನ್ನು ಕೊಲೆ ಮಾಡಲಾಗಿತ್ತು. ಶಕುನಿಗೌಡ ಎಂಬುವರ ಜಮೀನಿನ ರಸ್ತೆ ಬದಿ ಕಾಲುವೆಯಲ್ಲಿ ದಿನೇಶ್ ಶವ ಪತ್ತೆಯಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ ಅವರ ಮೇಲುಸ್ತುವಾರಿಯಲ್ಲಿ ಹಾಸನ ಉಪವಿಭಾಗದ ಪೊಲೀಸ್ ಅಧೀಕ್ಷಕರಾದ ಪುಟ್ಟಸಾಮಿಗೌಡರ ಉಸ್ತುವಾರಿಯಲ್ಲಿ ಹಾಸನ ಗ್ರಾಮಾಂತರ ವೃತ್ತ ನಿರೀಕ್ಷಕ ಸುರೇಶ್ .ಪಿ ನೇತೃತ್ವದಲ್ಲಿ ಗೊರೂರು ಪಿಎಸ್‍ಐ ಜಗದೀಶ್ ಜಿ ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

HSN Police 1

ಮೈಸೂರು ಜಿಲ್ಲೆ ಕೆ.ಆರ್. ನಗರದ ನಿವಾಸಿ ಹಾಗೂ ಸ್ವಂತ ಸ್ಥಳ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆ ಹೋಬಳಿಯ ಅರೆಸೂರು ಗಾಮದ ಹೆಚ್.ಜಿ. ಮೋಹನ್‍ನನ್ನು ಪೊಲೀಸರು ಮಂಗಳವಾರ ಮುಂಜಾನೆ ಸಮೀಪದ ಮೊಸಳೆ ಹೊಸಹಳ್ಳಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ತಾನೇ ಈ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಸೆ.2 ರಂದು ದೊಡ್ಡಬಾಗನಹಳ್ಳಿ ಕ್ರಾಸ್ ಸಮೀಪ ಜವೇನಹಳ್ಳಿ ಕೊಪ್ಪಲು ಸ್ವಾಮೀಗೌಡ ಎಂಬುವರ ಪುತ್ರ ದಿನೇಶ್‍ಗೂ ಆರೋಪಿಗೂ ಮಾತಿಗೆ ಮಾತು ಬೆಳೆದು ದಿನೇಶನ ಕೊಲೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡಕ್ಕೆ ಹಾಗೂ ಸಿಬ್ಬಂದಿ ರವಿಕುಮಾರ್, ಸುಬ್ರಮಣ್ಯ, ಅರುಣ್ ಕುಮಾರ್, ಅನಿಲ್‍ಕುಮಾರ್, ಪೀರ್ ಖಾನ್ ಅವರುಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

Police Jeep 1 2 medium

Share This Article
Facebook Whatsapp Whatsapp Telegram
Previous Article vlcsnap 2020 10 14 00h05m42s403 ಬಿಗ್ ಬುಲೆಟಿನ್ | Oct 13, 2020 | ಭಾಗ-1
Next Article Karnataka weather report ರಾಜ್ಯದ ನಗರಗಳ ಹವಾಮಾನ ವರದಿ: 14-10-2020

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

2 hours ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

2 hours ago
Shivaleela Kulkarni
Bengaluru City

ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

3 hours ago
Asia Cup Team India
Cricket

ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

3 hours ago
asia cup Abhishek Sharma
Cricket

ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?