Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

Bengaluru City

ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

Public TV
Last updated: May 19, 2020 9:20 pm
Public TV
Share
3 Min Read
ksrtc corona covid 19 6
SHARE

– ಕೊನೆಯ ಬಸ್ ಸಂಜೆ 7ಕ್ಕೆ ಹೊರಡುತ್ತದೆ
– ಎಲ್ಲೂ ನಿಲ್ಲಲ್ಲ, ರಾತ್ರಿ ಊಟವನ್ನು ಕಟ್ಟಿಕೊಂಡು ಬಸ್ ಹತ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಕೇವಲ 5 ಮಾರ್ಗಗಳಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸಿದ್ದಕ್ಕೆ ಜನತೆಯಿಂದ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಈಗ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಬಸ್ ಆರಂಭಿಸಲು ಸಾರಿಗೆ ಇಲಾಖೆ ಮುಂದಾಗಿದೆ. Public Tv IMPACT

ಸಾರಿಗೆ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಸುತ್ತೋಲೆಯಲ್ಲಿ ಬೆಂಗಳೂರಿನಿಂದ ಮೈಸೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಗಳೂರು ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸುವುದಾಗಿ ಹೇಳಿತ್ತು. ಆದರೆ ಇಂದು ಬೆಳಗ್ಗೆ ಮೆಜೆಸ್ಟಿಕ್ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗಕ್ಕೂ ಬಸ್ ಆರಂಭಗೊಳ್ಳಲಿದೆ ಎಂಬ ವಿಚಾರ ತಿಳಿದು ಅಲ್ಲಿನ ಜನತೆ ಆಗಮಿಸಿದ್ದರು.

ksrtc corona covid 19 5

ರಾತ್ರಿ 7 ರಿಂದ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯ ಒಳಗಡೆ ತಲುಪುವ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರವನ್ನು ಕೆಎಸ್‌ಆರ್‌ಟಿಸಿ ಆರಂಭಿಸಿತ್ತು. ಉತ್ತರ ಕರ್ನಾಟಕದ ಕೆಲ ಜಿಲ್ಲಾ ಕೇಂದ್ರಗಳನ್ನು ಈ ಅವಧಿಯಲ್ಲಿ ತಲುಪುವುದು ಕಷ್ಟವಾದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಭಾಗಕ್ಕೆ ಬಸ್ ಓಡಿಸದೇ ಇರಲು ನಿರ್ಧರಿಸಿತ್ತು.

ಈ ವಿಚಾರ ತಿಳಿಯದ ಹಲವು ಜನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದಿದ್ದು ಇವರಿಗೆ ಸಮಸ್ಯೆಯಾಗಿತ್ತು. ಪಬ್ಲಿಕ್ ಟಿವಿ ಈ ವಿಚಾರವನ್ನು ಪ್ರಸ್ತಾಪ ಮಾಡಿ ಒಂದು ಭಾಗಕ್ಕೆ ಮಾತ್ರ ಯಾಕೆ ಈ ಸೇವೆ? ಉಳಿದ ಜಿಲ್ಲೆಗಳಿಗೆ ಯಾಕೆ ಬಸ್ ಸೇವೆ ಇಲ್ಲ ಎಂದು ಪ್ರಶ್ನಿಸಿತ್ತು. ಜನರಿಂದಲೂ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಾರಿಗೆ ಇಲಾಖೆ ಈಗ ಉತ್ತರ ಕರ್ನಾಟಕದ ಭಾಗಗಳಿಗೂ ಬಸ್ ಓಡಿಸಲು ಮುಂದಾಗಿದೆ.

ksrtc corona covid 19 3

ವ್ಯವಸ್ಥೆ ಹೇಗಿದೆ?
ರಾತ್ರಿ ಹತ್ತಿ ಬೆಳಗ್ಗೆ ತಲುಪುವ ಸ್ಥಳಗಳಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಬಸ್ಸುಗಳ ಕಾರ್ಯಾಚರಣೆಯ ಸಮಯವನ್ನು ಸಂಜೆ 7 ಗಂಟೆಯವರೆಗೆ ವಿಸ್ತರಿಸಲಾಗಿದೆ. ಅಂದರೆ ಕೊನೆಯ ಬಸ್ಸು ಸಂಜೆ 7 ಗಂಟೆಗೆ ಬೆಂಗಳೂರು ಬಿಡಲಿದೆ. ಉದಾಹರಣೆಗೆ ಕಲುಬುರಗಿ, ಬೀದರ್ ಸಂಜೆ 7ಕ್ಕೆ ಬೆಂಗಳೂರಿನಿಂದ ಹೊರಟು ನಾಡಿದ್ದು ಬೆಳಗ್ಗೆ ನಿಗದಿತ ನಿಲ್ದಾಣ ತಲುಪುತ್ತದೆ. ನಾಳೆಯ ಪ್ರಯಾಣಕ್ಕಾಗಿ 148 ಬಸ್ಸುಗಳು, 3,600 ಅಸನಗಳನ್ನ ಕಾಯ್ದಿರಿಸಲಾಗಿದೆ.

ಬೆಂಗಳೂರಿನಿಂದ ಎಲ್ಲಾ ಜಿಲ್ಲಾ ಕೇಂದ್ರಕ್ಕೆ ಸಂಜೆ 7 ಗಂಟೆಯ ಒಳಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು, ಒಂದು ಬಸ್ಸಿನಲ್ಲಿ 30 ಜನ ಒಂದು ಜಿಲ್ಲೆಗೆ ಹೋಗುವಂತಿರಬೇಕು. ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಜೆ 7 ಗಂಟೆಗೆ ಬಸ್ ಹೊರಡಲಿದೆ.

ksrtc corona covid 19 2

ಒಂದು ಬಸ್ಸಿನಲ್ಲಿ 30 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದ್ದು, ಬಸ್ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಆದ ಬಳಿಕವೇ ಬಸ್ ಹತ್ತಲು ಅವಕಾಶ ನೀಡಲಾಗುತ್ತದೆ. 10 ವರ್ಷದ ಒಳಗಡೆ ಮತ್ತು 60 ವರ್ಷ ಮೀರಿದ ಪ್ರಯಾಣಿಕರು ಪ್ರಯಾಣಿಸುವಂತಿಲ್ಲ.

ಹವಾನಿಯಂತ್ರಿತ ಬಸ್ಸುಗಳ ಕಾರ್ಯಾಚರಣೆಗೆ ಅವಕಾಶ ನೀಡಿಲ್ಲ. ಮುಂಗಡ ಆಸನಗಳನ್ನು ಕೆಎಸ್‌ಆರ್‌ಟಿಸಿ ವೆಬ್‍ಸೈಟ್ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಅಲ್ಲದೇ ಪ್ರಯಾಣಿಕರಿಗೆ ಕಡಿಮೆ ಲಗೇಜ್ ಹಾಗೂ ಐಡಿ ಕಾರ್ಡ್ ತರುವಂತೆ ಸೂಚನೆ ನೀಡಿದೆ. ಅಲ್ಲದೇ ಸುರಕ್ಷತೆಯ ದೃಷ್ಟಿಯಿಂದ ಮಾರ್ಗ ಮಧ್ಯೆ ಯಾವುದೇ ಸ್ಥಳದಲ್ಲಿ ನಿಲುಗಡೆ ಇಲ್ಲದೇ ಇರುವುದರಿಂದ ನೀರು, ಅಗತ್ಯ ಆಹಾರವನ್ನು ತರಲು ಮನವಿ ಮಾಡಿದೆ.

ksrtc corona covid 19 1

ಬುಕ್ಕಿಂಗ್ ವ್ಯವಸ್ಥೆ ಹೇಗೆ?
ಬೆಂಗಳೂರಿನಿಂದ – ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ, ರಾಯಚೂರು, ಹುಬ್ಬಳ್ಳಿ, ಹೊಸಪೇಟೆ, ಹಾವೇರಿ, ಹರಪ್ಪನ ಹಳ್ಳಿ, ಕೊಪ್ಪಳ, ಕಾರವಾರ, ಮಂಗಳೂರು, ಮಡಿಕೇರಿ, ಮೈಸೂರು, ಶಿವಮೊಗ್ಗ, ಸಿರ್ಸಿ, ಉಡುಪಿ, ಯಾದಗಿರಿ.

ಬೆಂಗಳೂರಿಗೆ – ಬೆಳಗಾವಿ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ, ಕಲಬುರ್ಗಿ, ಹುಬ್ಬಳ್ಳಿ, ಗಂಗಾವತಿ, ಹಡಗಲಿ, ಹರಿಹರ, ಹೊಸಪೇಟೆ, ಕಂಪ್ಲಿ, ಕುಮಟಾ, ಕುಷ್ಟಗಿ, ಕೊಪ್ಪಳ, ಶಿರಸಿ, ಉಡುಪಿ, ಯಾದಗಿರಿ, ಯಲಬುರ್ಗಾ, ಸಂಡೂರು, ಶಿರಗುಪ್ಪ, ಯಲ್ಲಾಪುರ, ಮಂಗಳೂರು, ಮೈಸೂರು, ವಿಜಯಪುರ.

TAGGED:bengalurubusCovid 19kannada newskarnatakaksrtcಕೆಎಸ್‍ಆರ್‍ಟಿಸಿಪಬ್ಲಿಕ್ ಟಿವಿಬೆಂಗಳೂರುಮಂಗಳೂರುಮೈಸೂರುರಾಜ್ಯ ಸರ್ಕಾರಲಾಕ್‍ಡೌನ್ಸಾರಿಗೆ ಸಂಸ್ಥೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
16 minutes ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
23 minutes ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
42 minutes ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
1 hour ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
2 hours ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?