Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

Public TV
Last updated: June 14, 2021 3:43 pm
Public TV
Share
3 Min Read
yogeshwar 1
SHARE

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಸಂಕಷ್ಟದ ಪರಿಹಾರವಾಗಿ 5 ಸಾವಿರ ರೂ. ನೀಡಲು ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೇಶ್ವರ್ ಮುಂದಾಗಿದ್ದಾರೆ.

cp yogeshwar medium

ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಗೈಡ್‍ಗಳಿದ್ದು, ಅವರೆಲ್ಲರಿಗೂ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದು, ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪರಿಹಾರ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಗಳನ್ನು ನೀಡಲು ಸಹ ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅತೀ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಅಭಿಪ್ರಯಾಪಟ್ಟರು. ಇದನ್ನೂ ಓದಿ: ಹಂಪಿ ಪ್ರವಾಸಿ ಗೈಡ್‍ಗಳಿಗೆ ನೆರವಿನ ಹಸ್ತಚಾಚಿದ ಸುಧಾಮೂರ್ತಿ

karnataka tourism 1

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಛೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಲಾಕ್‍ಡೌನ್‍ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳ ಜೊತೆ ಸಹ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಕಷ್ಟಗಳನ್ನು ವಿವರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ಮದ್ಯ ಪರವಾನಗಿ ಶುಲ್ಕವನ್ನು ಶೇ.50 ರಷ್ಟು ಮನ್ನಾ ಮಾಡಿ ಉಳಿದ ಶೇ.50 ರಷ್ಟು ಶುಲ್ಕವನ್ನು ಕಟ್ಟಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಸಮಯ ವಿಸ್ತರಿಸಬೇಕು ಹಾಗೂ ವಿದ್ಯುತ್‍ಚ್ಛಕ್ತಿ ದರದಲ್ಲಿ ರಿಯಾಯಿತಿ ನೀಡಬೇಕು. ಪ್ರವಾಸೋದ್ಯಮ ವಾಹನಗಳ ತೆರಿಗೆಯನ್ನು ಆರು ತಿಂಗಳ ಅವಧಿಗೆ ಮನ್ನಾ ಮಾಡಬೇಕು. ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ಚಾಲಕರಿಗೆ 2 ಸಾವಿರ ರೂಗಳ ಕೋವಿಡ್ ಪರಿಹಾರ ಹಣವಾಗಿ ನೀಡಬೇಕು. ರಾಜ್ಯದಲ್ಲಿ ಓಲಾ, ಉಬರ್ ಸೇರಿದಂತೆ ಒಟ್ಟು 3 ಲಕ್ಷ 30 ಸಾವಿರ ಪ್ರವಾಸಿ ವಾಹನ ಚಾಲಕರಿದ್ದು, ಅವರೆಲ್ಲರಿಗೂ ಕೋವಿಡ್ ಪ್ಯಾಕೇಜ್ ಹಣ ನೀಡಬೇಕೆಂದು ಒತ್ತಾಯಿಸಿದರು. ಇದೇ ತಿಂಗಳ 21 ರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್‍ಗಳನ್ನು ತೆಗೆಯಲು ಅವಕಾಶ ನೀಡಬೇಕು. ಟೂರ್ ಆಪರೇಟರ್ಸ್ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಬೇಕೆಂದು ಸಹ ಮನವಿ ಮಾಡಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೆ.ಎಸ್.ಎಫ್.ಸಿ.ಯಿಂದ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿಗೆ ರಿಯಾಯಿತಿ ಕೊಡಿಸಬೇಕು ಎಂದು ಸಹ ಕೋರಿದರು.

hampi utsava

ರಾಜ್ಯದಲ್ಲಿರುವ ಎಲ್ಲಾ ಹೋಟೆಲ್‍ಗಳಿಗೂ, ಸ್ಟಾರ್ ಹೋಟೆಲ್‍ಗಳಿಗೆ ನೀಡಿರುವ ಕೈಗಾರಿಕಾ ಸ್ಥಾನಮಾನ ವಿಸ್ತರಿಸಬೇಕೆಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ.ಶ್ಯಾಮರಾಜ್, ಉಪಾಧ್ಯಕ್ಷ ವಿನಿತ್ ವರ್ಮಾ, ಕಾರ್ಯದರ್ಶಿ ಮಹಾಲಿಂಗಯ್ಯ ಇವರು ಸಚಿವರಿಗೆ ಮನವಿ ಪತ್ರ ನೀಡಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.

ಜೂನ್ ತಿಂಗಳ ಅಂತ್ಯಕ್ಕೆ ವಿಜಯಪುರ, ಹಂಪಿ, ಬಾದಾಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ತ್ರೀ ಸ್ಟಾರ್ ಹೋಟೆಲ್‍ಗಳಿಗೆ ಶಿಲಾನ್ಯಾಸ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿಗಳನ್ನು ಅಳವಡಿಸಿ, ಸರ್ಕಾರಿ ಆದೇಶ ಹೊರಡಿಸಲು ಹಾಗೂ ಸ್ಟಾರ್ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿರುವ ಬಗ್ಗೆ ಸಹ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಇದನ್ನೂ ಓದಿ: ಗುಡುಗು ಯತ್ನಾಳ್, ಮಿಂಚು ಯೋಗೇಶ್ವರ್ ಮಳೆ ಬಂದ್ಮೇಲೆ ತಣ್ಣಗಾಗ್ತಾರೆ: ಕೋಟ ವ್ಯಾಖ್ಯಾನ

hotel

ಹೆಲಿಟೂರಿಸಂ, ಸಿ-ಪ್ಲೈನ್ ಹಾಗೂ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ವಾಟರ್ ಸ್ಪೋಟ್ರ್ಸ್ ಆರಂಭಿಸುವುದು, ನಂದಿಬೆಟ್ಟ ಹಾಗೂ ಇತರ ಕಡೆ ರೋಪ್-ವೇಗಳನ್ನು ನಿರ್ಮಾಣ ಮಾಡುವ ಯೋಜನೆಗಳಿಗೆ ವೇಗ ನೀಡುವಂತೆ ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದರು. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಪ್ರವಾಸೋದ್ಯಮ ಯೋಜನೆಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಂಡು ನಿಗಧಿತ ಸಮಯದಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧು ಬಿ.ರೂಪೇಶ್, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಶರ್ಮಾ ಹಾಗೂ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಗತಿ ಪರಿಶೀಲನೆ ಸಭೆಯ ನಂತರ ಸಚಿವ ಯೋಗೇಶ್ವರರವರು ಚಿತ್ರಕಲಾ ಪರಿಷತ್‍ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯಿಂದ ಟೂರ್ ಆಪರೇಟರ್ಸ್ ಹಾಗೂ ಚಾಲಕರಿಗೆ ಆಯೋಜಿಸಿದ್ದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ, ಸಚಿವರು ಚಾಲನೆ ನೀಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಪ್ರಥಮ ಆದ್ಯತೆಯಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಚಿವರು ತಿಳಿಸಿದರು.

TAGGED:CoronaCoronavirusCovid 19CP YogeshwarHotelkarnatakaPackagePublic TVtourismಕರ್ನಾಟಕಕೊರೊನಾಕೋವಿಡ್ 19ಪಬ್ಲಿಕ್ ಟಿವಿಪ್ರವಾಸಿ ಮಾರ್ಗದರ್ಶಿಪ್ರವಾಸೋದ್ಯಮಲಸಿಕೆಸಿ.ಪಿ.ಯೋಗೇಶ್ವರ್
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
12 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
15 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
16 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
21 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
4 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
17 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
39 minutes ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
1 hour ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
1 hour ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?