Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

Bengaluru City

ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಕೋವಿಡ್ ಪರಿಹಾರ – ಯೋಗೇಶ್ವರ್

Public TV
Last updated: June 14, 2021 3:43 pm
Public TV
Share
3 Min Read
yogeshwar 1
SHARE

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಸಂಕಷ್ಟದ ಪರಿಹಾರವಾಗಿ 5 ಸಾವಿರ ರೂ. ನೀಡಲು ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೇಶ್ವರ್ ಮುಂದಾಗಿದ್ದಾರೆ.

cp yogeshwar medium

ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಗೈಡ್‍ಗಳಿದ್ದು, ಅವರೆಲ್ಲರಿಗೂ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ 5 ಸಾವಿರ ರೂಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದು, ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪರಿಹಾರ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಗಳನ್ನು ನೀಡಲು ಸಹ ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅತೀ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಚಿವರು ಅಭಿಪ್ರಯಾಪಟ್ಟರು. ಇದನ್ನೂ ಓದಿ: ಹಂಪಿ ಪ್ರವಾಸಿ ಗೈಡ್‍ಗಳಿಗೆ ನೆರವಿನ ಹಸ್ತಚಾಚಿದ ಸುಧಾಮೂರ್ತಿ

karnataka tourism 1

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಛೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಲಾಕ್‍ಡೌನ್‍ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳ ಜೊತೆ ಸಹ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಕಷ್ಟಗಳನ್ನು ವಿವರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ಮದ್ಯ ಪರವಾನಗಿ ಶುಲ್ಕವನ್ನು ಶೇ.50 ರಷ್ಟು ಮನ್ನಾ ಮಾಡಿ ಉಳಿದ ಶೇ.50 ರಷ್ಟು ಶುಲ್ಕವನ್ನು ಕಟ್ಟಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಸಮಯ ವಿಸ್ತರಿಸಬೇಕು ಹಾಗೂ ವಿದ್ಯುತ್‍ಚ್ಛಕ್ತಿ ದರದಲ್ಲಿ ರಿಯಾಯಿತಿ ನೀಡಬೇಕು. ಪ್ರವಾಸೋದ್ಯಮ ವಾಹನಗಳ ತೆರಿಗೆಯನ್ನು ಆರು ತಿಂಗಳ ಅವಧಿಗೆ ಮನ್ನಾ ಮಾಡಬೇಕು. ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ಚಾಲಕರಿಗೆ 2 ಸಾವಿರ ರೂಗಳ ಕೋವಿಡ್ ಪರಿಹಾರ ಹಣವಾಗಿ ನೀಡಬೇಕು. ರಾಜ್ಯದಲ್ಲಿ ಓಲಾ, ಉಬರ್ ಸೇರಿದಂತೆ ಒಟ್ಟು 3 ಲಕ್ಷ 30 ಸಾವಿರ ಪ್ರವಾಸಿ ವಾಹನ ಚಾಲಕರಿದ್ದು, ಅವರೆಲ್ಲರಿಗೂ ಕೋವಿಡ್ ಪ್ಯಾಕೇಜ್ ಹಣ ನೀಡಬೇಕೆಂದು ಒತ್ತಾಯಿಸಿದರು. ಇದೇ ತಿಂಗಳ 21 ರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್‍ಗಳನ್ನು ತೆಗೆಯಲು ಅವಕಾಶ ನೀಡಬೇಕು. ಟೂರ್ ಆಪರೇಟರ್ಸ್ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಬೇಕೆಂದು ಸಹ ಮನವಿ ಮಾಡಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೆ.ಎಸ್.ಎಫ್.ಸಿ.ಯಿಂದ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿಗೆ ರಿಯಾಯಿತಿ ಕೊಡಿಸಬೇಕು ಎಂದು ಸಹ ಕೋರಿದರು.

hampi utsava

ರಾಜ್ಯದಲ್ಲಿರುವ ಎಲ್ಲಾ ಹೋಟೆಲ್‍ಗಳಿಗೂ, ಸ್ಟಾರ್ ಹೋಟೆಲ್‍ಗಳಿಗೆ ನೀಡಿರುವ ಕೈಗಾರಿಕಾ ಸ್ಥಾನಮಾನ ವಿಸ್ತರಿಸಬೇಕೆಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ.ಶ್ಯಾಮರಾಜ್, ಉಪಾಧ್ಯಕ್ಷ ವಿನಿತ್ ವರ್ಮಾ, ಕಾರ್ಯದರ್ಶಿ ಮಹಾಲಿಂಗಯ್ಯ ಇವರು ಸಚಿವರಿಗೆ ಮನವಿ ಪತ್ರ ನೀಡಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.

ಜೂನ್ ತಿಂಗಳ ಅಂತ್ಯಕ್ಕೆ ವಿಜಯಪುರ, ಹಂಪಿ, ಬಾದಾಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ತ್ರೀ ಸ್ಟಾರ್ ಹೋಟೆಲ್‍ಗಳಿಗೆ ಶಿಲಾನ್ಯಾಸ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿಗಳನ್ನು ಅಳವಡಿಸಿ, ಸರ್ಕಾರಿ ಆದೇಶ ಹೊರಡಿಸಲು ಹಾಗೂ ಸ್ಟಾರ್ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿರುವ ಬಗ್ಗೆ ಸಹ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಇದನ್ನೂ ಓದಿ: ಗುಡುಗು ಯತ್ನಾಳ್, ಮಿಂಚು ಯೋಗೇಶ್ವರ್ ಮಳೆ ಬಂದ್ಮೇಲೆ ತಣ್ಣಗಾಗ್ತಾರೆ: ಕೋಟ ವ್ಯಾಖ್ಯಾನ

hotel

ಹೆಲಿಟೂರಿಸಂ, ಸಿ-ಪ್ಲೈನ್ ಹಾಗೂ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ವಾಟರ್ ಸ್ಪೋಟ್ರ್ಸ್ ಆರಂಭಿಸುವುದು, ನಂದಿಬೆಟ್ಟ ಹಾಗೂ ಇತರ ಕಡೆ ರೋಪ್-ವೇಗಳನ್ನು ನಿರ್ಮಾಣ ಮಾಡುವ ಯೋಜನೆಗಳಿಗೆ ವೇಗ ನೀಡುವಂತೆ ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದರು. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಪ್ರವಾಸೋದ್ಯಮ ಯೋಜನೆಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಂಡು ನಿಗಧಿತ ಸಮಯದಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧು ಬಿ.ರೂಪೇಶ್, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಶರ್ಮಾ ಹಾಗೂ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಗತಿ ಪರಿಶೀಲನೆ ಸಭೆಯ ನಂತರ ಸಚಿವ ಯೋಗೇಶ್ವರರವರು ಚಿತ್ರಕಲಾ ಪರಿಷತ್‍ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯಿಂದ ಟೂರ್ ಆಪರೇಟರ್ಸ್ ಹಾಗೂ ಚಾಲಕರಿಗೆ ಆಯೋಜಿಸಿದ್ದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ, ಸಚಿವರು ಚಾಲನೆ ನೀಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಪ್ರಥಮ ಆದ್ಯತೆಯಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಚಿವರು ತಿಳಿಸಿದರು.

TAGGED:CoronaCoronavirusCovid 19CP YogeshwarHotelkarnatakaPackagePublic TVtourismಕರ್ನಾಟಕಕೊರೊನಾಕೋವಿಡ್ 19ಪಬ್ಲಿಕ್ ಟಿವಿಪ್ರವಾಸಿ ಮಾರ್ಗದರ್ಶಿಪ್ರವಾಸೋದ್ಯಮಲಸಿಕೆಸಿ.ಪಿ.ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
12 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
29 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
1 hour ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
1 hour ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?