Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಪ್ರಿಯಕರನಿಂದಲೇ ಹಳೆ ಪ್ರಿಯಕರನನ್ನು ಕೊಲೆ ಮಾಡಿಸಿದ ಪ್ರಿಯತಮೆ – ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

Public TV
Last updated: October 21, 2020 10:12 am
Public TV
Share
3 Min Read
smg murder
SHARE

– ಮಹಜರ್ ವೇಳೆ ತಪ್ಪಿಸಿಕೊಳ್ಳಲು ಆರೋಪಿ ಯತ್ನ, ಪೊಲೀಸರಿಂದ ಫೈರಿಂಗ್

ಶಿವಮೊಗ್ಗ: ಸಾಗರದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹೊಸ ಪ್ರಿಯಕರನಿಂದ ಹಳೆ ಪ್ರಿಯಕರನನ್ನು ಮಹಿಳೆ ಕೊಲೆ ಮಾಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸ್ಥಳ ಮಹಜರ್ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

SMG MURDER copy 1

ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಪೊಲೀಸರ ಗನ್ ಮತ್ತೆ ಸದ್ದು ಮಾಡಿದೆ. ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿ ಸಮೀಪ ಘಟನೆ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿ ಭರತ್ ಇದೀಗ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಶೃತಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

WhatsApp Image 2020 10 20 at 6.50.21 AM

ಕೊಲೆ ಮಾಡಿದ್ದು ಯಾಕೆ?
ಅ.11 ರಂದು ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ಬಂಗಾರಮ್ಮ (60), ಪ್ರವೀಣ್ (35) ತಾಯಿ ಮಗನನ್ನು ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಮೃತ ಪ್ರವೀಣನ ಪತ್ನಿ ಹಾಗೂ 10 ತಿಂಗಳ ಮಗುವಿನ ಎದುರಿನಲ್ಲಿಯೇ ಕೊಲೆ ಮಾಡಲಾಗಿತ್ತು. ಆದರೆ ಕೊಲೆಗೆ ನಿಖರ ಕಾರಣ ಗೊತ್ತಾಗಿರಲಿಲ್ಲ. ಘಟನೆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ಹಾಗೂ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು.

WhatsApp Image 2020 10 20 at 6.50.20 AM

ಪ್ರಕರಣ ಭೇದಿಸುವುದು ಆರಂಭದಲ್ಲಿ ಪೊಲೀಸರಿಗೆ ತಲೆ ನೋವಾಗಿತ್ತು. ಕೊಲೆ ಏಕೆ ನಡೆದಿದೆ ಎಂಬ ಅನುಮಾನ ಕಾಡಲಾರಂಭಿಸಿತ್ತು. ಕೊಲೆಯಾದವರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು. ಅಷ್ಟೊಂದು ಸ್ಥಿತಿವಂತರಲ್ಲ. ಜೊತೆಗೆ ಕೊಲೆ ಮಾಡಿದ ನಂತರ ಮನೆಯಿಂದ ಯಾವ ವಸ್ತುವನ್ನು ತೆಗೆದುಕೊಂಡು ಹೋಗಿಲ್ಲ. ಅಲ್ಲದೇ ಮನೆಯಲ್ಲಿಯೇ ಇದ್ದ ಹತ್ಯೆಯಾದ ಪ್ರವೀಣನ ಪತ್ನಿ ಹಾಗೂ ಆತನ ಮಗುವನ್ನು ಏನೂ ಮಾಡಿಲ್ಲ. ಹೀಗಿರುವಾಗ ಕೊಲೆ ಏಕೆ ನಡೆದಿದೆ ಎಂಬುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿತ್ತು. ಹೀಗಾಗಿ ಈ ಪ್ರಕರಣ ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ಅವರು ವಿಶೇಷ ಪೊಲೀಸ್ ತಂಡ ರಚಿಸಿದ್ದರು. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಮೊದಲಿಗೆ ಹತ್ಯೆಯಾದ ಪ್ರವೀಣನ ಪತ್ನಿ ರೋಹಿಣಿ ಮೇಲೆಯೇ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಈಕೆಗೆ ಏನಾದರೂ ಬೇರೆ ಸಂಬಂಧ ಇದೆಯಾ? ಇದಕ್ಕಾಗಿ ಏನಾದರೂ ಕೊಲೆ ನಡೆದಿದೆಯಾ? ಎಂದು ವಿಚಾರಣೆ ನಡೆಸಿದ್ದರು. ಪ್ರವೀಣನ ಪತ್ನಿಗೆ ಆ ರೀತಿ ಯಾವುದೇ ಸಂಬಂಧ ಇರಲಿಲ್ಲ, ಕೊಲೆ ಮಾಡಿಲ್ಲ ಎಂಬುದು ಬಳಿಕ ತಿಳಿಯಿತು.

smg double murder

ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ತನಿಖೆ ವೇಳೆ ಈ ಕೊಲೆಗೆ ಬೇರೆಯದ್ದೇ ವಿಷಯ ಇದೆ ಎಂಬ ಮಾಹಿತಿ ದೊರೆಯಿತು. ಕೊಲೆಯಾದ ಪ್ರವೀಣನಿಗೆ ನೆರೆ ಮನೆ ನಿವಾಸಿಯಾದ ಶೃತಿ ಜೊತೆ ಪ್ರೀತಿ ಇತ್ತು. ಆದರೆ ಪ್ರವೀಣ ಶೃತಿಗೆ ಕೈಕೊಟ್ಟು ರೋಹಿಣಿಯನ್ನು ವಿವಾಹವಾಗಿ ಸಂಸಾರ ನಡೆಸುತ್ತಿದ್ದ. ಇದಕ್ಕೆ ಶೃತಿ ಪ್ರವೀಣನ ವಿರುದ್ಧ ಕೋಪಗೊಂಡಿದ್ದಳು. ನಂತರ ಶೃತಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಈ ವೇಳೆ ಶೃತಿಗೆ ಭರತ್ ಎಂಬ ಯುವಕನ ಪರಿಚವಾಗಿದೆ. ಇಬ್ಬರ ಪರಿಚಯ, ಗೆಳೆತನ ನಂತರ ಪ್ರೀತಿಯಾಗಿ ಮಾರ್ಪಟ್ಟಿದೆ. ಮಾಜಿ ಪ್ರಿಯಕರ ಪ್ರವೀಣನಿಂದ ತನಗಾದ ಅನ್ಯಾಯವನ್ನು ಹೊಸ ಪ್ರಿಯಕರ ಭರತ್ ನ ಬಳಿ ಶೃತಿ ನಿವೇದಿಸಿಕೊಂಡಿದ್ದಾಳೆ. ಅಲ್ಲದೆ ಮೊದಲು ಪ್ರವೀಣ್ ಹಾಗೂ ಶೃತಿ ಪ್ರೀತಿ ಮಾಡುತ್ತಿದ್ದ ಸಂದರ್ಭದ ಇಬ್ಬರ ಖಾಸಗಿ ವಿಡಿಯೋ ಪ್ರವೀಣ್ ಬಳಿ ಇತ್ತು. ವಿಡಿಯೋ ಇಟ್ಟುಕೊಂಡು ಪ್ರವೀಣ್ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಶೃತಿ ತನ್ನ ಹೊಸ ಪ್ರಿಯತಮ ಭರತ್ ನ ಸಹಾಯ ಪಡೆದು ಆತನಿಂದಲೇ ಪ್ರವೀಣ್ ಹಾಗೂ ಆತನ ತಾಯಿ ಬಂಗಾರಮ್ಮ ಇಬ್ಬರನ್ನು ಕೊಲೆ ಮಾಡಿಸಿದ್ದಾಳೆ ಎಂಬುದು ತನಿಖೆ ವೇಳೆ ತಿಳಿದಿದೆ.

WhatsApp Image 2020 10 20 at 9.20.55 PM e1603255313606

ಆರೋಪಿ ಭರತ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ಪೊಲೀಸರು ಆರೋಪಿ ಭರತ್ ನನ್ನು ಮಹಜರ್ ನಡೆಸಲು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಮಹಜರ್ ನಡೆಸಿ ವಾಪಸ್ ಬರುವ ವೇಳೆ ಆರೋಪಿ ಭರತ್ ಮೂತ್ರ ವಿಸರ್ಜನೆ ಮಾಡುವುದಾಗಿ ಪೊಲೀಸರ ಬಳಿ ಹೇಳಿ ಜೀಪಿನಿಂದ ಕೆಳಗಡೆ ಇಳಿದು ಹೋಗಿದ್ದಾನೆ. ಪೊಲೀಸ್ ಕಾನ್ಸ್‍ಟೇಬಲ್ ಒಬ್ಬರು ಸಹ ಈತನನ್ನು ಹಿಂಬಾಲಿಸಿದ್ದರು. ಆರೋಪಿ ಭರತ್ ಪೊಲೀಸರನ್ನು ತಳ್ಳಿ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿಯೇ ಇದ್ದ ಡಿಸಿಆರ್ ಬಿ ಇನ್ಸ್ ಪೆಕ್ಟರ್ ಕುಮಾರ್ ಸ್ವಾಮಿ ಅವರು ಆರೋಪಿ ಭರತ್ ನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಿಂದ ಗಾಯಗೊಂಡಿರುವ ಆರೋಪಿ ಭರತ್ ಗೆ ಸಾಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Police Jeep 1 2 medium

 

TAGGED:loverloverspolicePublic TVshivamoggaಪಬ್ಲಿಕ್ ಟಿವಿಪೊಲೀಸರುಪ್ರಿಯಕರಪ್ರಿಯತಮೆಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories

You Might Also Like

Bidar Gurudwara
Bidar

ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಬಾಂಬ್ ಬೆದರಿಕೆ

Public TV
By Public TV
54 seconds ago
Mallikarjun Kharge 1
Latest

ಸಿದ್ದರಾಮಯ್ಯ ಹಣಕಾಸು ಸಚಿವರಾದಾಗ ಲಕ್ಷ್ಮಿ ಕುಂಟಾಗಿ ಖಜಾನೆಯಲ್ಲಿರ‍್ತಾಳೆ: ಮಲ್ಲಿಕಾರ್ಜುನ ಖರ್ಗೆ

Public TV
By Public TV
4 minutes ago
Escort Vehicle
Districts

ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

Public TV
By Public TV
9 minutes ago
Bengaluru Kempegowda Airport Cocaine Seize
Bengaluru City

ಬೆಂಗಳೂರಿನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಸೀಜ್

Public TV
By Public TV
32 minutes ago
DK Shivakumar 2 1
Districts

ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

Public TV
By Public TV
36 minutes ago
Jyoti Sharma
Crime

ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Public TV
By Public TV
50 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?