ಕಲಬುರಗಿ: ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸೂರು ನಾಯಕ ತಾಂಡಾದಲ್ಲಿ ನಡೆದಿದೆ.
ಮೃತ ಯುವತಿಯನ್ನು ಕಾವೇರಿ ಪವಾರ್(23) ಎಂದು ಗುರುತಿಸಲಾಗಿದೆ. ಪ್ರಿಯಕರ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮನನೊಂದು ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
- Advertisement 2
- Advertisement 3
ಕಾವೇರಿ ಮತ್ತು ಸಲಗರ ಕಾಲೋನಿ ಯುವಕ ಮಾನಸಿಂಗ್ ರಾಠೋಡ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತನ್ನನ್ನು ಮದುವೆಯಾಗು ಎಂದಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಯುವತಿ ಪೋಷಕರು ದೂರಿದ್ದಾರೆ.
- Advertisement 4
ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.