ಬೆಂಗಳೂರು: ಪ್ರೇಯಸಿಯನ್ನ ಕೊಲೆ ಮಾಡಿ ಪ್ರಿಯತಮ ಆತ್ಮಹತ್ಯೆಗೆ ಯತ್ನ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಈ ಘಟನೆ ಬಂಡೆಪಾಳ್ಯದ ಬಳಿ ಇರುವ ಸೋಮಸುಂದ್ರ ಪಾಳ್ಯದಲ್ಲಿ ಜರುಗಿದೆ. ಪ್ರಿಯಕರ ಹಾಗೂ ಆತ್ಮಹತ್ಯೆಗೆ ಯತ್ನಿಸಿದವನನ್ನು ರಾಜು ಎಂದು ಗುರುತಿಸಲಾಗಿದೆ.
ಝೋಮೊಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ರಾಜು ಮತ್ತು ಆತನ ಪ್ರಿಯತಮೆ ಮಧ್ಯೆ ಜಗಳವಾಗಿದೆ. ಹೀಗಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ರಾಜು ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಇತ್ತ ಲವ್ವರ್ ಕೊಲೆಗೈದ ಬಳಿಕ ರಾಜು ಚಲಿಸುತ್ತಿರುವ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿರುವ ರಾಜುವನ್ನು ಸ್ಥಳೀಯರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ನಗರದ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.