Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

Bengaluru City

ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

Public TV
Last updated: August 30, 2021 8:39 pm
Public TV
Share
3 Min Read
CM Bommai Meeting SC ST 3
SHARE

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.

CM Bommai Meeting SC ST (4)

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಸೂಚಿಸಿದರು.

CM Bommai Meeting SC ST 2

ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

CM Bommai Meeting SC ST 1

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸೂಚಿಸಿದರು.

ಸಚಿವರಾದ @KotasBJP, @sriramulubjp, @JCMBJP, ಸಮಿತಿಯ ಸದಸ್ಯರಾದ ಸಂಸದರು, ಶಾಸಕರು, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) August 30, 2021

ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು, ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ..ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Basavaraj BommaiCM BommaiScheduled CasteScheduled TribeViolence Prevention Act 1989ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989ಪರಿಶಿಷ್ಟ ಜಾತಿಪರಿಶಿಷ್ಟ ಪಂಗಡಬಸವರಾಜ ಬೊಮ್ಮಾಯಿಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
3 seconds ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
9 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
22 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
25 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
25 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?