Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆಬ್ರವರಿ 20ರಂದು ಕುಂಚಾವರಂನಲ್ಲಿ ಕಲಬುರಗಿ ಡಿಸಿ ಗ್ರಾಮ ವಾಸ್ತವ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಫೆಬ್ರವರಿ 20ರಂದು ಕುಂಚಾವರಂನಲ್ಲಿ ಕಲಬುರಗಿ ಡಿಸಿ ಗ್ರಾಮ ವಾಸ್ತವ್ಯ

Districts

ಫೆಬ್ರವರಿ 20ರಂದು ಕುಂಚಾವರಂನಲ್ಲಿ ಕಲಬುರಗಿ ಡಿಸಿ ಗ್ರಾಮ ವಾಸ್ತವ್ಯ

Public TV
Last updated: February 18, 2021 9:11 pm
Public TV
Share
3 Min Read
GLB DC
SHARE

ಕಲಬುರಗಿ: ಗ್ರಾಮೀಣ ಜನರ ಹತ್ತು-ಹಲವಾರು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಪರಿಕಲ್ಪನೆಯಡಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಇದೇ ಫೆಬ್ರವರಿ 20 ಶನಿವಾರ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಂದು ಜಿಲ್ಲಾಧಿಕಾರಿಗಳು ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆಯವರೆಗೆ ಗ್ರಾಮದಲ್ಲಿಯೇ ಇದ್ದು, ಗ್ರಾಮದ ಜನರ ಅಳಲನ್ನು ಆಲಿಸಲಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಸೇಡಂ ಸಹಾಯಕ ಆಯುಕ್ತರು, ಚಿಂಚೋಳಿ ತಾಲೂಕಿನ ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿರಲಿದ್ದು, ಅಂದು ರಾತ್ರಿ ಗ್ರಾಮದಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ.

ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಿದ್ದಾರೆ. ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಕುರಿತು ಕ್ರಮ ವಹಿಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಿದ್ದಾರೆ. ಗ್ರಾಮದಲ್ಲಿ ಸ್ಮಶಾನಭೂಮಿ ಲಭ್ಯತೆಯ ಮತ್ತು ಆಶ್ರಯ ಯೋಜನೆಯಡಿ ಅವಶ್ಯಕತೆಯಿದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಆದೇಶಿಸಲಿದ್ದಾರೆ.

ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಆಕಾರ್ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ ನಂ.3 ಮತ್ತು ಕಾಲಂ ನಂ.9 ತಾಳೆ ಹೊಂದುವಂತೆ ಸೂಕ್ತ ಆದೇಶಗಳನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದಾರೆ. ಗ್ರಾಮದಲ್ಲಿ ಪೌತಿ (ಮರಣ) ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ ನಂ. 9 ತೆಗೆದು ನೈಜ ವಾರಸುದಾರರ ಹೆಸರಿಗೆ ಸೇರಿಸುವುದು, ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವಕ್ಕೆ ಸೂಚನೆ ನೀಡಲಿದ್ದಾರೆ. ಜಮೀನಿನ ಹದ್ದು ಬಸ್ತು, ಪೋಡಿ, ಪೋಡಿ ಮುಕ್ತ ಗ್ರಾಮ, ದರಕಾಸ್ತು ಪೋಡಿ (ನಮೂನೆ 1-5 ಮತ್ತು ನಮೂನೆ 6-10ನ್ನು ಭರ್ತಿ ಮಾಡಿ ದರಕಾಸ್ತು ಪೋಡಿ ಮಾಡುವುದು), ಕಂದಾಯ ಗ್ರಾಮಗಳ ರಚನೆ ಸೇರಿದಂತೆ ಗ್ರಾಮದಲ್ಲಿನ ಇತರೆ ಕುಂದುಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಲ್ಪಿಸಲಿದ್ದಾರೆ.

ಗ್ರಾಮಸ್ಥರಲ್ಲಿ ಅರಿವು: ಗ್ರಾಮ ವಾಸ್ತವ್ಯದ ಭಾಗವಾಗಿ ಆಧಾರ್ ಕಾರ್ಡ್ ಅನುಕೂಲತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮುಖಾಂತರ ಪಡೆಯುವ ಬಗ್ಗೆ, ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ-ಅನಾವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮ ಸೇರಿದಂತೆ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಇಲಾಖೆಗಳ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ.

ಶಾಲೆ-ಅಂಗನವಾಡಿಗೂ ಭೇಟಿ: ಗ್ರಾಮದಲ್ಲಿರುವ ಸರ್ಕಾರಿ ವಸತಿ ನಿಲಯ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳಿಗೂ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಭೇಟಿ ನೀಡಿ ಶಿಕ್ಷಣ ಬೋಧನೆ, ಆಹಾರ ಮತ್ತು ಕಲಿಕೆಯ ಗುಣಮಟ್ಟ ಪರಿಶೀಲಿಸಲಿದ್ದಾರೆ.

ಸಾಂಸ್ಕೃತಿಕ ಸಂಜೆ: ಗ್ರಾಮ ವಾಸ್ತವ್ಯದಲ್ಲಿ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಯಂಕಾಲ ಸಾಂಸ್ಕೃತಿಕ ಸಂಜೆ ಸಹ ಆಯೋಜಿಸಲಾಗಿದೆ.

ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಲು ಡಿ.ಸಿ.ಮನವಿ: ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಜನರ ಮನೆ ಬಾಗಿಲಿಗೆ ಬರುತ್ತಿರುವುದರಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಜಿಲ್ಲೆಯ ಆಯಾ ಗ್ರಾಮದ ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಬಂದು ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ತಹಶೀಲ್ದಾರರಿಂದಲೂ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳು ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಅದೇ ರೀತಿ ಮಹಾರಾಷ್ಟ್ರದ ಗಡಿಯಲ್ಲಿರುವ ಆಳಂದ ತಾಲೂಕಿನ ನಂದಗೂರ ಗ್ರಾಮದಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಮತ್ತು ಆಳಂದ ತಹಶೀಲ್ದಾರರು ಜಂಟಿಯಾಗಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಉಳಿದಂತೆ ಸೇಡಂ ತಾಲೂಕಿನ ಗೌಡನಹಳ್ಳಿ, ಚಿತ್ತಾಪೂರ ತಾಲೂಕಿನ ಗುಂಡಗುರ್ತಿ, ಶಹಾಬಾದ ತಾಲೂಕಿನ ಅಲದಿಹಾಳ, ಕಲಬುರಗಿ ತಾಲೂಕಿನ ಅವರಾದ(ಬಿ), ಕಮಲಾಪುರ ತಾಲೂಕಿನ ಡೊಂಗರಗಾಂವ, ಕಾಳಗಿ ತಾಲೂಕಿನ ರಟಕಲ್, ಅಫಜಲಪೂರ ತಾಲೂಕಿನ ರೇವೂರ(ಬಿ), ಜೇವರ್ಗಿ ತಾಲೂಕಿನ ರಾಜವಾಳ ಹಾಗೂ ಯಡ್ರಾಮಿ ತಾಲೂಕಿನ ಮಂಗಳೂರ ಗ್ರಾಮದಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಿದ್ದಾರೆ.

TAGGED:DCgrama vatsavyaKalaburagiPublic TVಕಲಬುರಗಿಗ್ರಾಮ ವಾಸ್ತವ್ಯಜಿಲ್ಲಾಧಿಕಾರಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood

You Might Also Like

Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
32 minutes ago
Bengaluru Poster Removed From BMTC KSRTC
Bengaluru City

ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

Public TV
By Public TV
43 minutes ago
siddaramaiah 1 3
Bengaluru City

Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

Public TV
By Public TV
9 hours ago
KN RAJANNA
Bengaluru City

ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

Public TV
By Public TV
9 hours ago
TRAIN
Bengaluru City

ಶಿವರಾತ್ರಿ ಪ್ರಯುಕ್ತ ಬೆಂಗಳೂರು – ವಿಜಯಪುರ ನಡುವೆ ವಿಶೇಷ ರೈಲು

Public TV
By Public TV
9 hours ago
01 27
Big Bulletin

ಬಿಗ್‌ ಬುಲೆಟಿನ್‌ 28 January 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?