ಮೈಸೂರು: ಪುರಾಣದಲ್ಲಿನ ಶ್ರವಣಕುಮಾರನ ರೀತಿ ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿಯನ್ನು ಬಜಾಜ್ ಸ್ಕೂಟರಿನಲ್ಲೇ ಕರೆದುಕೊಂಡು ಹೋಗಿ ದೇಶದ ತೀರ್ಥ ಕ್ಷೇತ್ರದ ದರ್ಶನ ಮಾಡಿಸಿದ್ದಾರೆ. ಈ ಮೂಲಕ ಪೋಷಕರನ್ನು ನಿರ್ಲಕ್ಷ್ಯ ಮಾಡಲು ಮಕ್ಕಳಿಗೆ ಮಾದರಿಯಾಗಿದ್ದಾರೆ. ಇದನ್ನೂ ಓದಿ: ಕಲಿಯುಗದ ಶ್ರವಣಕುಮಾರ- ಸ್ಕೂಟರ್ನಲ್ಲಿ ತಾಯಿಗೆ ತೀರ್ಥಯಾತ್ರೆ
ಮೈಸೂರಿನ ಹಳ್ಳಿ ಬೋಗಾದಿಯ ನಿವಾಸಿ ಕೃಷ್ಣಕುಮಾರ್ ತನ್ನ ಹೆತ್ತ ತಾಯಿಯನ್ನು ಬಜಾಜ್ ಸ್ಕೂಟರಿನಲ್ಲಿ ದೇಶ ಪರ್ಯಟನೆ ಮಾಡಿಸಿದ್ದಾರೆ. ಕೃಷ್ಣಕುಮಾರ್ ಬೇಲೂರು ಹಳೇಬೀಡನ್ನೂ ನೋಡದ ತಾಯಿಗೆ ದೇಶದ ಪರಿಚಯ ಮಾಡಿಸಿ ಅವರ ಇಚ್ಛೆಯನ್ನ ಪೂರೈಸಿದ್ದಾರೆ.
40 ವರ್ಷ ವಯಸ್ಸಿನ ಕೃಷ್ಣಕುಮಾರ್ ಬೆಂಗಳೂರಿನ ಕಾರ್ಪೊರೇಟ್ ಸಂಸ್ಥೆಯೊಂದರ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು 5 ವರ್ಷಗಳ ಹಿಂದೆ ತಂದೆಯನ್ನ ಕಳೆದುಕೊಂಡ ಇವರು ತಾಯಿಯ ಜವಾಬ್ದಾರಿ ಹೊತ್ತಿದ್ದರು. ಇವರು 70 ವರ್ಷದ ತಾಯಿಗೆ ದೇಶದ ತೀರ್ಥ ಕ್ಷೇತ್ರಗಳ ತೋರಿಸುವ ಸಂಕಲ್ಪ ಮಾಡಿದ್ದರು. ಅದರಂತೆಯೇ ಮಾತೃ ಸೇವಾ ಸಂಕಲ್ಪ ಯಾತ್ರೆ ಶುರು ಮಾಡಿದ್ದು, ತಂದೆ ಕೊಡಿಸಿದ ಬಜಾಜ್ ಸ್ಕೂಟರ್ನಲ್ಲೇ ತಾಯಿಯ ಜೊತೆ 2018ರ ಜನವರಿ 16ರಂದು ಯಾತ್ರೆ ಆರಂಭಿಸಿದರು.
ಎರಡು 9 ತಿಂಗಳ ಕಾಲ ಯಾತ್ರೆ ನಡೆಸಿದ್ದಾರೆ. ಚಾಮುಂಡಿ ಬೆಟ್ಟದಿಂದ ಶುರುವಾದ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದೆ. ಒಟ್ಟು 56,522 ಕಿಲೋಮೀಟರ್ ಪ್ರಯಾಣ ಮುಗಿಸಿದ ತಾಯಿ ಮಗ ಜೋಡಿ ಇಂದು ಮೈಸೂರಿಗೆ ವಾಪಸ್ ಬಂದಿದ್ದಾರೆ.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.