Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಯೋಕಾನ್‌ಗೆ ಹಿನ್ನಡೆ – ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರಲ್ಲ ಎಂದ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಬಯೋಕಾನ್‌ಗೆ ಹಿನ್ನಡೆ – ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರಲ್ಲ ಎಂದ ಕೇಂದ್ರ

Corona

ಬಯೋಕಾನ್‌ಗೆ ಹಿನ್ನಡೆ – ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರಲ್ಲ ಎಂದ ಕೇಂದ್ರ

Public TV
Last updated: July 27, 2020 11:26 am
Public TV
Share
3 Min Read
biocon ed
SHARE

ನವದೆಹಲಿ: ಕೊರೊನಾ ವೈರಸ್‌ ಸೋಂಕಿತರಿಗೆ ಬೆಂಗಳೂರಿನ ಬಯೋಕಾನ್‌ ಅಭಿವೃದ್ಧಿ ಪಡಿಸಿರುವ ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಜುಲೈ ಮೊದಲ ವಾರದಲ್ಲಿ ಬಯೋಕಾನ್‌ ಸಂಸ್ಥೆ ಅಭಿವೃದ್ಧಿ ಪಡಿಸಿದ್ದ ಚರ್ಮರೋಗ ಔಷಧ ‘ಇಟೋಲಿಝುಮಾಬ್‌’ ಇಂಜೆಕ್ಷನ್‌ನ್ನು ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕೋವಿಡ್‌ 19 ಸೋಂಕಿತರಿಗೆ ನೀಡಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿತ್ತು.

corona 11

ಡಿಸಿಜಿಐ ಬಯೋಕಾನ್‌ ಔಷಧಿ ಬಳಕೆಗೆ ಅನುಮತಿ ನೀಡಿದಕ್ಕೆ ವೈದ್ಯಕೀಯ ಕ್ಷೇತ್ರದ ಕೆಲ ತಜ್ಞರು ಆರೋಗ್ಯ ಇಲಾಖೆಗೆ ಪತ್ರ ಬರೆದು ಆಕ್ಷೇಪ ಎತ್ತಿದ್ದರು. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಸಚಿವಾಲಯ ಈ ಔಷಧಿಯಿಂದ ರೋಗಿ ಗುಣಮುಖರಾಗುತ್ತಾರೆ ಎಂಬುದಕ್ಕೆ ಬಹಳ ಕಡಿಮೆ ಪ್ರಮಾಣದ ಸಾಕ್ಷ್ಯ ಸಿಕ್ಕಿದೆ. ಕೇವಲ 30 ರೋಗಿಗಳಿಗೆ ಟ್ರಯಲ್‌ ಮಾಡಿದ ಈ ಔಷಧಿಯನ್ನು ನೀಡಲು ಅನುಮತಿ ನೀಡಿದ್ದಕ್ಕೆ ಕೆಲ ವೈದ್ಯರು ಪ್ರಶ್ನೆ ಎತ್ತಿದ್ದಾರೆ. ಕೋವಿಡ್‌ 19 ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಔಷಧಿ ನೀಡಲು ಅನುಮತಿ ನೀಡಬೇಕಾದರೆ ಅದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಪ್ಪಿಗೆ ಬೇಕಾಗುತ್ತದೆ ಎಂದು ಹೇಳಿದೆ.

CORONA VIRUS 1 1

ಈ ಸಂಬಂಧ ಬಯೋಕಾನ್‌ ಹೇಳಿಕೆ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ೭ ಕೋವಿಡ್‌ 19 ಟಾಸ್ಕ್‌ ಫೋರ್ಸ್‌ ಔಷಧಿ ಬಳಕೆ ಸಂಬಂಧ ಮತ್ತಷ್ಟು ಸಾಕ್ಷ್ಯಗಳನ್ನು ಕೇಳಿದೆ. ನಾವು ಸಾಕ್ಷ್ಯಗಳನ್ನು ನೀಡುತ್ತೇವೆ. ಹತ್ತಿರ ಹತ್ತಿರ 1 ಸಾವಿರ ಸೋಂಕಿತರಿಗೆ ಈ ಔಷಧಿ ನೀಡಿದ್ದು, ಉತ್ತಮ ಫಲಿತಾಂಶ ಬಂದಿದೆ ಎಂದು ತಿಳಿಸಿದೆ.

ದೊಡ್ಡ ಪ್ರಮಾಣದಲ್ಲಿ ಈ ಔಷಧಿಯನ್ನು ಟ್ರಯಲ್‌ ಮಾಡಲು ನಾವು ಮುಂದಾಗುತ್ತಿದ್ದೇವೆ. 10-15 ಆಸ್ಪತ್ರೆಗಳ 200 ರೋಗಿಗಳಿಗೆ ಈ ಔಷಧಿ ನೀಡಲು ಮುಂದಾಗುತ್ತಿದ್ದೇವೆ. ಈ ಅಧ್ಯಯನ ವರದಿಯನ್ನು ನಾವು ಡಿಸಿಜಿಐಗೆ ನೀಡುತ್ತೇವೆ ಎಂದು ಬಯೋಕಾನ್‌ ಹೇಳಿದೆ.

The National Covid Task Force needs to see more evidence & we will provide them large real world data to enable the committee to reconsider its decision on inclusion of Itolizumab in the protocol. Nearly 1000 patients have used the drug across the country with good outcome data👇 pic.twitter.com/mAwjqDSwNX

— Biocon (@Bioconlimited) July 26, 2020

ಬಯೋಕಾನ್‌ ಕಂಪನಿ ಚರ್ಮರೋಗ ಸೋರಿಯಾಸಿಸ್‌ಗೆ ಬಳಸುವ ಈ ಔಷಧವನ್ನು ಉಸಿರಾಟದ ತೊಂದರೆಗೆ ಬಳಸುವ ರೋಗಿಗಳಿಗೆ ನೀಡುವ ಸಂಬಂಧ 2ನೇ ಹಂತದ ಕ್ಲಿನಿಕಲ್‌ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿ, ತನ್ನ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಿತ್ತು. ಡಿಸಿಜಿಐ ಈ ವರದಿಯನ್ನು ಶ್ವಾಸಕೋಶ, ಔಷಧ ಶಾಸ್ತ್ರ, ಏಮ್ಸ್‌ ತಜ್ಞರ ಸಮಿತಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ತಜ್ಞರಿಂದ ‌ಒಪ್ಪಿಗೆ ಸಿಕ್ಕಿದ ಬಳಿಕ ಕೊರೊನಾ ಸೋಂಕಿತರ ಸಮ್ಮತಿಯ ಮೇರೆಗೆ ಬಳಸಲು ಅನುಮತಿ ನೀಡಿತ್ತು.

CORONA VIRUS 2

ಈ ಔಷಧಿಯನ್ನು ಅತಿ ಹೆಚ್ಚು ಸೋಂಕಿತರು ಇರುವ ಮುಂಬೈ ಮತ್ತು ದೆಹಲಿಯಲ್ಲಿ ಪ್ರಯೋಗ ಮಾಡಲಾಗಿತ್ತು. ಆಸ್ಪತ್ರೆಯಲ್ಲಿನ ಹಲವು ರೋಗಿಗಳ ಮೇಲೆ ಈ ಔಷಧ ಪ್ರಯೋಗಿಸಲಾಗಿದ್ದು ಗುಣಮುಖರಾಗಿದ್ದಾರೆ ಎಂದು ಮುಂಬೈಯ ಬಿವೈಎಲ್ ನಾಯರ್ ಆಸ್ಪತ್ರೆಯ ಡೀನ್ ಡಾ. ಮೋಹನ್ ಜೋಷಿ ತಿಳಿಸಿದ್ದಾರೆ. ದೆಹಲಿಯ ಲೋಕ ನಾಯಕ ಆಸ್ಪತ್ರೆಯಲ್ಲಿ 8 ರೋಗಿಗಳಿಗೆ ಇಟೋಲಿಝುಮಾಬ್‌ ಔಷಧ ನೀಡಲಾಗಿದ್ದು, ಅವರೆಲ್ಲರೂ ಗುಣಮುಖರಾಗಿದ್ದಾರೆ ಎಂದು ವರದಿಯಾಗಿತ್ತು. ತುರ್ತು ಸ್ಥಿತಿಯಲ್ಲಿ ಹಾಗೂ ನಿಯಂತ್ರಿತ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂಬ ಷರತ್ತನ್ನು ಡಿಸಿಜಿಐ ವಿಧಿಸಿತ್ತು.

kiran mazumdar shaw biocon

ಈ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯಿಸಿ, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪಾರಾಗಲು ದೇಶ, ವಿದೇಶಗಳಲ್ಲಿ ಸಂಶೋಧಕರು ನಿರತಂತರ ಸಂಶೋಧನೆ ನಡೆಸುತ್ತಿದ್ದಾರೆ. ಇಟೋಲಿಝುಮಾಬ್‌ ಔಷಧ ನೀಡಿದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ. ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದ ಹಿನ್ನೆಲೆಯಲ್ಲಿ ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಸೋಂಕಿತರಿಗೆ ಈ ಔಷಧ ನೀಡಲು ಡಿಸಿಜಿಐ ಅನುಮೋದನೆ ನೀಡಿದೆ ಎಂದು ತಿಳಿಸಿದ್ದರು. ಬಯೋಕಾನ್‌ ಕಂಪನಿಯು 2013ರಿಂದಲೂ ಬಯೋಕಾನ್ ಪಾರ್ಕ್ ನಲ್ಲಿ ಈ ಔಷಧವನ್ನು ತಯಾರಿಸುತ್ತದೆ.

corona 1 3

ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಏಪ್ರಿಲ್‌ನಲ್ಲಿ ತಿಳಿಸಿದ್ದರು.

ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದರು.

TAGGED:BioconCoronaCovid19kannada newsProtocolಕೇಂದ್ರ ಸರ್ಕಾರಕೊರೊನಾಕೊರೊನಾ ವೈರಸ್ಕೋವಿಡ್ 19ಬಯೋಕಾನ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
16 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
49 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
57 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
59 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
1 hour ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?