Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

Public TV
Last updated: August 19, 2021 7:05 pm
Public TV
Share
3 Min Read
Reservation CM Bommai 3
SHARE

– ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ
– ಸಿಎಂ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವರಿಗೆ ಮನವಿ

ಬೆಂಗಳೂರು: ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಎ ಗೆ ಸೇರಿಸಬಾರದಂತೆ ಆಗ್ರಹಿಸಿ ಇಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು. ಆ ಮೂಲಕ ಜಾತಿಗೆ ಅನುಗುಣವಾಗಿ ಸರ್ಕಾರದಲ್ಲಿ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬಾರದು. ಹಾಗೆಯೇ, ಅತಿ ಹಿಂದುಳಿದ ವರ್ಗಗಳ ಮಠ ಮಾನ್ಯಗಳಿಗೆ ಸಂಘ ಸಂಸ್ಥೆಗಳೀಗೆ ಪ್ರಬಲ ಜಾತಿಗಳಿಗೆ ಕೊಟ್ಟಂತೆಯೇ ಅನುದಾನ ಕೋಡಬೇಕು. ಸಮುದಾಯ ಭವನ ವಿದ್ಯಾರ್ಥಿ ಭವನ ಸ್ಥಾಪನೆಗೆ ಅನುಕೂಲ ಮಾಡಿಕೊಡಬೇಕು ಎನ್ನುವ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

Reservation CM Bommai 5

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ನಾಡಿನಲ್ಲಿ ಆತಿ ಸಣ್ಣ ಹಾಗೂ ಅತಿ ಸೂಕ್ಷ್ಮ ಸಮುದಾಯಗಳಿವೆ, ಧ್ವನಿಯೇ ಇಲ್ಲದ ಈ ಅಸಂಘಟಿತ ಸಮುದಾಯಗಳು ತಮಗೆ ಆಸ್ಮಿತೆಯೇ ಇಲ್ಲದೆ ಸರ್ಕಾರದ ಯಾವುದೇ ನೆರವು, ಸಹಕಾರ, ಅನುದಾನ, ಮೀಸಲಾತಿಗಳನ್ನು ಪಡೆಯುವುದರಲ್ಲಿ ವಿಫಲವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೊರತುಪಡಿಸಿ, ಧಾರ್ಮಿಕ ಅಲ್ಪ ಸಂಖ್ಯಾತರನ್ನು ಒಳಗೊಂಡಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಐದು ಪ್ರವರ್ಗಗಳಿವೆ. ಈ ಐದೂ ಪ್ರವರ್ಗಗಳಿಗೆ ಶೇಕಡಾ 32 ಮೀಸಲಾತಿ ಇದೆ. ಪ್ರವರ್ಗ ಒಂದರಲ್ಲಿ 95 ಜಾತಿಗಳಿದ್ದು 4% ಮೀಸಲಾತಿ ಇದೆ. ಅಂತೆಯೇ ಪ್ರವರ್ಗ 2(ಎ) ನಲ್ಲಿ 102 ಜಾತಿಗಳಿದ್ದು, 15% ಮೀಸಲಾತಿ ಇದೆ. ಪ್ರವರ್ಗ 2(ಬಿ) ನಲ್ಲಿ ಮುಸ್ಲಿಂ ಸಮುದಾಯವಿದ್ದು ಶೇಕಡಾ 4% ಮೀಸಲಾತಿ ಇದೆ. ಪ್ರವರ್ಗ 3(ಎ) ನಲ್ಲಿ ಒಕ್ಕಲಿಗರು ಮತ್ತಿತರಿದ್ದು ಶೇಕಡಾ 4% ಮತ್ತು ಪ್ರವರ್ಗ 3(ಬಿ) ನಲ್ಲಿ ವೀರಶೈವ ಲಿಂಗಾಯಿತ ಮತ್ತಿತರ ಜಾತಿಗಳಿದ್ದು ಶೇಕಡಾ 5% ಮೀಸಲಾತಿ ಇದೆ. ದುರಂತವೆಂದರೆ ಈ ಪಟ್ಟಿಯಲ್ಲಿರುವ ಬಲಿಷ್ಟ ಮತ್ತು ಸಂಘಟಿತ ಜಾತಿಗಳು ಸಹಜವಾಗಿಯೇ ಪ್ರಾತಿನಿದ್ಯದ ಫಲಗಳನ್ನು ಕಾಣುತ್ತಿದ್ದು, ಪ್ರವರ್ಗ ಒಂದು ಮತ್ತು 2(ಬಿ) ನಲ್ಲಿರುವ ಅತಿ ಹಿಂದುಳಿದ ಜಾತಿಗಳು ಅವಕಾಶ ವಂಚಿತವಾಗಿವೆ. ಇದನ್ನೂ ಓದಿ: ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

Reservation CM Bommai 4

ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರವರ್ಗಗಳನ್ನು ಪುನರ್ ವರ್ಗೀಕರಣ ಮಾಡುವ ಅವಶ್ಯಕತೆ ಇದೆ. ಇದರೊಂದಿಗೆ ಸದರಿ ಪ್ರವರ್ಗಗಳು ಹಿಂದುಳಿದ ವರ್ಗಗಳ ಯಾವುದೇ ಆಯೋಗದ ಶಿಫಾರಸಿನ ಮೇಲೆ ಆದವುಗಳಲ್ಲ. ಈ ಕಾರಣಕ್ಕೆ ಇಲ್ಲಿನ ವರ್ಗೀಕರಣ ಅತ್ಯಂತ ಅವೈಜ್ಞಾನಿಕವಾದುದು ಮತ್ತು ಕುಲಶಾಸ್ತ್ರೀಯ ಅಧ್ಯಯನದ ದೃಷ್ಟಿಯಿಂದಲೂ ಅಸಮರ್ಪಕವಾದ್ದು ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್

Reservation CM Bommai 1

ವೇದಿಕೆಯ ಗೌರವ ಸಲಹೆಗಾರರಾದ ಡಾ.ಸಿ.ಎಸ್ ದ್ವಾರಕಾನಾಥ್ ಮಾತನಾಡಿ, ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿಗಳಿಗೆ ಸಮರ್ಪಕವಾದಂತಹ ಧ್ವನಿ ಎತ್ತುವಂತಹ ಜನರಿಲ್ಲ. ಈ ವರ್ಗಗಳಿಗೆ ದೊರಕಬೇಕಾದಂತಹ ಮೀಸಲಾತಿಯನ್ನು ಕಿತ್ತುಕೊಂಡು ಪ್ರಬಲ ಜಾತಿಗಳಿಗೆ ಅವಕಾಶ ಮಾಡಿಕೊಡುವುದು ಸರಿಯಲ್ಲ ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಎಲ್ಲಾ ಬೇಡಿಕೆಯನ್ನು ಸಾವಧಾನವಾಗಿ ಕೇಳಿಸಿಕೊಂಡಿದ್ದು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎಸ್.ಟಿ. ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ಮನವಿ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್.ದ್ವಾರಕಾನಾಥ್, ಗೌರವ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಎಂಎಲ್‍ಸಿ ಪಿ ಆರ್ ರಮೇಶ್, ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬು, ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

TAGGED:casteCM Basavaraj Bommaikota srinivasa poojarymukhyamantri chandruPublic TVreservationಕೋಟ ಶ್ರೀನಿವಾಸ ಪೂಜಾರಿಜಾತಿಪಬ್ಲಿಕ್ ಟಿವಿಮೀಸಲಾತಿಮುಖ್ಯಮಂತ್ರಿ ಚಂದ್ರುಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
5 hours ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
5 hours ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
6 hours ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
6 hours ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
6 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?