– ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ
ಲಕ್ನೋ: ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ ಸುಮಾರು 17 ಮಂದಿ ದಾರುಣವಾಗಿ ಮೃತಪಟ್ಟು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಿಂದ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಕಾನ್ಪುರದ ಸಚೇಂದಿ ಬಳಿಯ ಕಿಸಾನ್ ನಗರ ಕಾಲುವೆ ಸಮೀಪ ಜೆಸಿಬಿ ಶತಾಬ್ದಿ ಎಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 17 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಕಾನ್ಪುರದಿಂದ ಅಹಮದಾಬಾದ್ ಕಡೆ ಚಲಿಸುತ್ತಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
Kanpur: 17 people lost their lives after a collision between a bus and an auto in Sachendi area.
"Four people are undergoing treatment at Hallet hospital. The bus was going to Delhi from Lucknow," IG Mohit Agrawal says. pic.twitter.com/iuCBSs0Cf0
— ANI UP/Uttarakhand (@ANINewsUP) June 8, 2021
ಮೋದಿ, ಯೋಗಿ ಆದಿತ್ಯನಾಥ್ ಪರಿಹಾರ:
ದುರಂತದಲ್ಲಿ ಮಡಿದ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟ್ಟರ್ ನಲ್ಲಿ ಬರೆದುಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
उत्तर प्रदेश के कानपुर में हुआ सड़क हादसा अत्यंत दुःखद है। इसमें जान गँवाने वाले लोगों के परिजनों के प्रति अपनी संवेदना व्यक्त करता हूँ। ईश्वर उन्हें यह दुःख सहने की शक्ति दे। घायलों के शीघ्र ही स्वस्थ होने की कामना करता हूँ।
— Amit Shah (@AmitShah) June 8, 2021
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸಹಾಯ ಮಾಡುವಂತೆ ಸೂಚಿಸಿದ್ದರು. ಅಪಘಾತಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.
कानपुर के सचेंडी क्षेत्र में हुई एक सड़क दुर्घटना से मन द्रवित है।
मेरी संवेदनाएं मृतकों के शोक संतप्त परिजनों के साथ हैं।
प्रभु श्री राम से प्रार्थना है कि दिवंगत आत्माओं को शांति तथा घायलों को शीघ्र स्वास्थ्य लाभ प्रदान करें।
— Yogi Adityanath (@myogiadityanath) June 9, 2021