ಮಡಿಕೇರಿ: ಕಾಡಾನೆಗಳ ದಾಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಲೇ ಇದೆ. ಆನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೂಬನಕೊಲ್ಲಿ ಎಸ್ಟೇಟ್ ಬಳಿ ನಡೆದಿದೆ.
ಲಕ್ಷ್ಮಿ (80) ಮೃತ ಮಹಿಳೆ. ಇವರು ರಾತ್ರಿ ಬಹಿರ್ದೆಸೆಗೆಂದು ಹೊರಗೆ ಬಂದಿರುವ ವೇಳೆ ಆನೆ ದಾಳಿ ನಡೆಸಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಆನೆ ಮತ್ತು ಮಾನವ ಸಂಘರ್ಷ ಹಿಂದಿನಿಂದಲೂ ಇದ್ದು ಈಗಲೂ ಮುಂದುವರಿದುಕೊಂಡು ಬಂದಿದೆ. ರಾತ್ರಿ ಬಹಿರ್ದೆಸೆಗೆಂದು ಲಕ್ಷ್ಮಿ ಮನೆಯಿಂದ ಹೊರಗೆ ಬಂದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ ಲಕ್ಷ್ಮಿ ಅವರನ್ನು ಮಡಿಕೇರಿಯ ಜಿಲ್ಲಾ ಅಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳದಿದ್ದಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.