ಬಾದಾಮಿ ಜನ ಒಳ್ಳೆಯವರು, ಚಾಮುಂಡೇಶ್ವರಿ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

Public TV
1 Min Read
SIDDARAMAIHA 6

ಬಾಗಲಕೋಟೆ: ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಕಳೆದ ಬಾರಿ ಸೋಲಿಸಿದ್ರೂ. 5 ಬಾರಿ ಗೆದ್ದಿದ್ದೆ, ನನ್ನ ಊರು, ತಾಲೂಕು ಇರೋ ಕ್ಷೇತ್ರ ಅದು, ಅಲ್ಲಿ ನನ್ನನ್ನು ಸೋಲಿಸಿಬಿಟ್ರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲಿನ ಬಗ್ಗೆ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

SIDDARAMAHIA 2 medium

ಬಾದಾಮಿ ಪಟ್ಟಣದಲ್ಲಿ ಕಾರ್ಮಿಕ ಇಲಾಖೆಯಡಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಜನ ನನ್ನನ್ನು ಸೋಲಿಸಿದ್ದಾರೆ. ಬಾದಾಮಿ ಜನ ಒಳ್ಳೆಯ ಜನ ಅಂತ ಇಲ್ಲಿ ಚುನಾವಣೆಗೆ ನಿಂತುಕೊಂಡೆ, ನೀವು ನನ್ನನ್ನು ಗೆಲ್ಲಿಸಿದ್ರಿ, ನಿಮ್ಮ ಋಣ ತೀರಸಬೇಕಲ್ಲ ಎಂದು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲಿನ ಕಹಿ ಬಾದಾಮಿ ಜನರ ಬಳಿ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ನಮ್ಮ ಧರ್ಮ, ನಮ್ಮ ಧರ್ಮ ಎನ್ನುವವರು ಪರಧರ್ಮ ಸಹಿಷ್ಣುಗಳಾಗಿ: ಸಿದ್ದರಾಮಯ್ಯ

SIDDARAMAHIA 1 medium

ನಾನು ವಿಪಕ್ಷ ನಾಯಕ ಬಹಳ ಓಡಾಡಬೇಕಾಗುತ್ತೇ, ಹೀಗಾಗಿ ನಾನು ಪದೇ, ಪದೇ ಬಾದಾಮಿಗೆ ಬರುವುದಕ್ಕೆ ಆಗುವುದಿಲ್ಲ. ನಾನು ಸಿಎಂ ಆಗಿದ್ದಾಗ, ಏನಾದ್ರೂ ಬಾದಾಮಿ ಶಾಸಕನಾಗಿದ್ದರೆ ನಿಮಗೆ ಬೇಕಾದ ಎಲ್ಲ ಅಭಿವೃದ್ಧಿ ಮಾಡಿ, ಎಲ್ಲ ವಿಕಾಸ ಮಾಡುತ್ತಿದ್ದೆ. ಇರಲಿ ಆದ್ರೂ ನಿಮ್ಮ ಆಶೀವಾ9ದ ನಮ್ಮ ಮೇಲಿರಲಿ ಎಂದು ಮನವಿ ಮಾಡಿಕೊಂಡರು. ಭಾಷಣದ ಮಧ್ಯೆಯೇ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಡ ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *