ಚಾಮರಾಜನಗರ: ಬಾಳೆ ಮಾರಾಟ ಮಾಡಿದ್ದ ಹಣದ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದ್ದು, ವ್ಯಕ್ತಿ ನೇಣು ಬಿಗಿದುಕೊಂಡಿರುವ ಆಘಾತಕಾರಿ ಘಟನೆ ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದಲ್ಲಿ ನಡೆದಿದೆ.
- Advertisement 2
ಮಹಾದೇವಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಗ್ರಾಮದ ಚೇತನ್ ಗೆ ಮಹಾದೇವಪ್ಪ ಬಾಳೆ ಮಾರಾಟ ಮಾಡಿದ್ದರು. ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿತ್ತು. ಪ್ರಕರಣ ಬಳಿಕ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಪೊಲೀಸ್ ಠಾಣೆಯಲ್ಲಿ ವಿಷದ ಬಾಟಲ್ ಹಿಡಿದು ಮಹಾದೇವಪ್ಪ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದಿದ್ದರು.
- Advertisement 3
ಇದೆಲ್ಲರ ಬಳಿಕ ಪೊಲೀಸ್ ಠಾಣೆಯಿಂದ ಗ್ರಾಮಕ್ಕೆ ವಾಪಸ್ ಆಗಿದ್ದ ಮಹಾದೇವಪ್ಪ, ಚೇತನ್ ತೋಟದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
- Advertisement 4
ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಮಾಡಿ ನೇತು ಹಾಕಿರುವ ಶಂಕೆ ಇದೆ ಎಂದು ಮೃತನ ಪುತ್ರ ಮೋಹನ್ ಆರೋಪಿಸಿದ್ದಾರೆ. ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.