Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

Bengaluru City

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

Public TV
Last updated: October 19, 2020 3:49 pm
Public TV
Share
3 Min Read
Siddaramaiah 4
SHARE

– ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿ
– ಪ್ರವಾಹ ಬಂದ್ರೂ ಒಮ್ಮೆಯಾದ್ರೂ ಪ್ರಧಾನಿಗಳು ಬಂದರಾ?
– ಯಾರಿಗಾದ್ರೂ ಪರಿಹಾರ ನೀಡಿದ್ದೀರಾ?

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ.

North Karnataka Flood 7

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗಲ್ಲ. ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ. ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅವುಗಳಿಗೆ ಹಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಮುಖ್ಯಮಂತ್ರಿಗಳು ತಮ್ಮ ಇಲಾಖೆಗೆ ನಯಾಪೈಸೆ ಹಣ ಕೊಟ್ಟಿಲ್ಲ ಅಂತಾರೆ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ್ದಾರೆ.

North Karnataka Flood 2

ಪ್ರವಾಹ ಪರಿಸ್ಥಿತಿ ಇರುವಾಗ ವೈಮಾನಿಕ ಸಮೀಕ್ಷೆ ಮಾಡುವುದು ಸರಿ. ಆದರೆ ಈಗ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕ ಸಂಚರಿಸಲು, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರನ್ನು ಭೇಟಿ ಮಾಡಲು ಅವಕಾಶವಿದ್ದಾಗ್ಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಮಾನದಲ್ಲೇ ಸಮೀಕ್ಷೆ ಮಾಡಿದರೆ ಜನರ ಕಷ್ಟ ಏನು ಅಂತ ಹೇಗೆ ತಿಳಿಯುತ್ತೆ? ಕಳೆದ ವರ್ಷದ ಆಗಸ್ಟ್ ನಲ್ಲಿ, ಈ ಬಾರಿಯ ಆಗಸ್ಟ್ ನಲ್ಲಿ, ಮತ್ತೆ ಅಕ್ಟೋಬರ್ ನಲ್ಲಿ ರಾಜ್ಯದಲ್ಲಿ ಪ್ರವಾಹ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಒಮ್ಮೆಯಾದರೂ ರಾಜ್ಯಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳಿದ್ದಾರ? ಬಿಜೆಪಿಯ 25 ಸಂಸದರನ್ನು ರಾಜ್ಯದಿಂದ ಆರಿಸಿ ಕಳಿಸಿರುವುದೇ ಮೋದಿ ಅವರು ಕರ್ನಾಟಕವನ್ನು ಇಷ್ಟು ತಾತ್ಸಾರ ಮಾಡಲು ಕಾರಣ ಎಂದು ಕಿಡಿಕಾರಿದ್ದಾರೆ.

North Karnataka Flood 4

ಯಕಶ್ಚಿತ್ ರಾಜಕಾರಣಿ: ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ. ನಳಿನ್ ಕುಮಾರ್ ಕಟೀಲ್ ಅವರೇ, ರಾಜ್ಯದಲ್ಲಿ ರೈತರು, ನೇಕಾರರು, ಕೂಲಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದನ್ನು ತಡೆಯಲು ತಾವೇನು ಮಾಡಿದ್ದೀರಿ? ಮೊದಲು ಜನರಿಗೆ ಲಾಕ್‍ಡೌನ್ ಮತ್ತು ಪ್ರವಾಹದಿಂದ ಉಂಟಾದ ನಷ್ಟವನ್ನು ತುಂಬಿಕೊಡುವ ವ್ಯವಸ್ಥೆ ಮಾಡಿ. ನಿಮ್ಮ ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

NALIN 1

ಕಳೆದ ವರ್ಷದ ಪ್ರವಾಹದಲ್ಲಿ ಬಿದ್ದ ಮನೆಗಳನ್ನೇ ಕಟ್ಟಿಸಿಕೊಟ್ಟಿಲ್ಲ. ಈ ವರ್ಷದ ಪ್ರವಾಹದಲ್ಲಿ ಇನ್ನಷ್ಟು ಮನೆಗಳು ಬಿದ್ದಿವೆ. ಜಿಲ್ಲಾಧಿಕಾರಿಗಳಿಗೆ ದುಡ್ಡು ಕೊಟ್ಟಿದ್ದೇವೆ ಎಂದು  ಮುಖ್ಯಮಂತ್ರಿಗಳು ಹೇಳ್ತಾರೆ. ಅವರ ಪಿಡಿ ಖಾತೆಯಲ್ಲಿ ದುಡ್ಡಿದ್ದರೆ ಸಂತ್ರಸ್ತರಿಗೆ ತಲುಪತ್ತಾ? ಈ ವರ್ಷ ಯಾರಿಗಾದರೂ ಪರಿಹಾರ ಕೊಟ್ಟಿದ್ದಾರಾ? ನಮ್ಮ ಸರ್ಕಾರ ಪ್ರಾರಂಭಿಸಿದ್ದ ಯೋಜನೆಗಳನ್ನೆಲ್ಲ ಒಂದೊಂದಾಗಿ ನಿಲ್ಲಿಸ್ತಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನು 7ಕೆ.ಜಿಯಿಂದ 5ಕ್ಕೆ ಇಳಿಸಿದ್ದಾರೆ. ಇಂದಿರಾಕ್ಯಾಂಟೀನ್ ಗೆ ದುಡ್ಡು ಕೊಡದೆ ಮುಚ್ಚಲು ಹೊರಟಿದ್ದಾರೆ. ದನ-ಕುರಿ ಸತ್ತರೆ ಪರಿಹಾರ ಕೊಡ್ತಿಲ್ಲ, ಕ್ಷೀರಧಾರೆಯಲ್ಲಿ ಹಾಲಿನ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಕೃಷಿಭಾಗ್ಯವೂ ನಿಂತಿದೆ.

North Karnataka Flood 9

ಪರಿಹಾರ ಬಂದಿದೆಯಾ?: ಕೇಂದ್ರ ತಂಡ ರಾಜ್ಯದ ಪ್ರವಾಹ ಸಮೀಕ್ಷೆ ನಡೆಸಿ ಇಷ್ಟು ದಿನವಾಯ್ತಲ್ಲ ಒಂದು ರೂಪಾಯಿಯಾದ್ರೂ ಪರಿಹಾರ ಬಂದಿದೆಯಾ? ಸಚಿವ ಆರ್. ಅಶೋಕ್ ಅವರು ಪರಿಹಾರ ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತನೇ ದಿನ ದೂಡುತ್ತಿದ್ದಾರೆ, ಜನ ಕಷ್ಟದಲ್ಲಿರುವಾಗ ಪರಿಹಾರ ಕೊಡದೆ ಯಾವಾಗ ಕೊಡ್ತೀರ? ನಮ್ಮ ಕಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹೀಗಿತ್ತಾ? ಬಿಎಸ್ವೈ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ಗೋಲಿಬಾರ್ ನಡೆಸಿ ರೈತರನ್ನು ಕೊಂದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಎರಡು ಬಾರಿ ಗೋಲಿಬಾರ್ ನಡೆಸಿ ಅಮಾಯಕರನ್ನು ಕೊಂದರು. ಇದು ಕಾನೂನು ಮತ್ತು ಸುವ್ಯವಸ್ಥೆನಾ?

North Karnataka Flood 6

ಉಪಚುನಾವಣೆಯಲ್ಲಿ ಆರ್.ಆರ್ ನಗರದಲ್ಲಿ ಕಾಂಗ್ರೆಸ್- ಬಿಜೆಪಿ ಮಧ್ಯೆ ನೇರ ಸ್ಪರ್ಧೆಯಿದ್ದರೆ, ಶಿರಾದಲ್ಲಿ ತ್ರಿಕೋನ ಸ್ಪರ್ಧೆಯಿದೆ. ಎರಡೂ ಕ್ಷೇತ್ರಗಳ ಜನರ ಒಲವು ಹೆಚ್ಚಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಕಂಡುಬರುತ್ತಿರುವುದರಿಂದ ಎರಡರಲ್ಲೂ ಗೆಲ್ಲುವ ಹೆಚ್ಚಿನ ಅವಕಾಶವಿರುವುದು ನಮ್ಮ ಪಕ್ಷಕ್ಕೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

TAGGED:bjpBS YediyurappacongressKarnataka FloodKarnataka Rainnorth karnatakaPublic TVsiddaramaiahಉತ್ತರ ಕರ್ನಾಟಕಕರ್ನಾಟಕ ಪ್ರವಾಹಕರ್ನಾಟಕ ಮಳೆಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Sureshkumar
Bengaluru City

ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Public TV
By Public TV
19 minutes ago
Hassan Arrest
Crime

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್

Public TV
By Public TV
21 minutes ago
Governor
Bengaluru City

ವಿಧಾನಸೌಧ Vs ಲೋಕಭವನ ಫೈಟ್ – 11 ಅಂಶ ತೆಗೆಯುವಂತೆ ಪಟ್ಟು; ಇಂದು ಅಧಿವೇಶನಕ್ಕೆ ಬರ್ತಾರ ಗವರ್ನರ್?

Public TV
By Public TV
42 minutes ago
Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
1 hour ago
supreme Court 1
Belgaum

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

Public TV
By Public TV
9 hours ago
01 20
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?