ಚಿತ್ರದುರ್ಗ: ಈ ಸಂದರ್ಭದಲ್ಲಿ ಬಿಜೆಪಿಗೆ ಯಾರು ಬರ್ತಾರೆ, ಯಾರು ಹೋಗ್ತಾರೆ ಅನ್ನೋದು ಗೌಣ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
- Advertisement 2
ಜಿಲ್ಲೆಯ ಹಿರಿಯೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬಿಸಿಎಂ ಇಲಾಖೆಯಿಂದ 4,500 ಫಲಾನುಭವಿಗಳಿಗೆ ವಸತಿ ನಿರ್ಮಾಣದ ಕಾರ್ಯ ಆದೇಶ ಪತ್ರ ವಿತರಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿಯ ಕೆಲ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು. ವಿರೋಧ ಪಕ್ಷದವರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಎರಡು ವರ್ಷ ಸರ್ಕಾರ ಬಿಗಿಯಾಗಿ ಇರಲಿದೆ ಎಂದರು.
- Advertisement 3
- Advertisement 4
ಸಿಎಂ ಯಡಿಯೂರಪ್ಪ ರಾಜ್ಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಉಳಿದ ಅವಧಿಗೂ ಬಿಎಸ್ವೈ ಅವರೇ ಸಿಎಂ ಆಗಿರುತ್ತಾರೆ. ಈ ಸಂದರ್ಭದಲ್ಲಿ ಬಿಜೆಪಿಗೆ ಯಾರು ಬರ್ತಾರೆ, ಯಾರು ಹೋಗ್ತಾರೆ ಅನ್ನೋದೆಲ್ಲವೂ ಗೌಣ. ಆದರೆ ಉತ್ತಮ ಕೆಲಸ ಮಾಡುತ್ತಿರುವ ಈ ಸರ್ಕಾರದ ಅಸ್ಥಿರಕ್ಕೆ ಯಾರು ಕೈ ಹಾಕಬಾರದು. ಈ ವಯಸ್ಸಿನಲ್ಲೂ ಯಡಿಯೂರಪ್ಪ ನಮ್ಮನ್ನು ಬಡಿದೆಬ್ಬಿಸುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.