Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

Bengaluru City

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

Public TV
Last updated: June 12, 2021 10:44 pm
Public TV
Share
3 Min Read
DK Shivakumar Congress Price Hike Petro Protest 7
SHARE

ಬೆಂಗಳೂರು:ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಆಸ್ಪತೆಯಲ್ಲಿ ಹಾಸಿಗೆ, ಚಿಕಿತ್ಸೆ, ಆಕ್ಸಿಜನ್, ಔಷಧಿ, ಕೊನೆಗೆ ಶವ ಸಂಸ್ಕಾರ ಸೇರಿ ಎಲ್ಲದಕ್ಕೂ ಜನ ಕ್ಯೂ ನಿಲ್ಲುವಂತೆ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ಹಾಗೂ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:

DK Shivakumar Congress Price Hike Petro Protest 8 medium

ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರತಿಯೊಂದು ವಿಚಾರಕ್ಕೂ ನಿಮ್ಮನ್ನೆಲ್ಲ ಕ್ಯೂ ನಿಲ್ಲಿಸಿದರಲ್ಲಾ ಅಂತಾ ಸಂಕಟವಾಗುತ್ತಿದೆ. ನೋಟು ರದ್ದು ಮಾಡಿ, ನಿಮ್ಮ ದುಡ್ಡು ನೀವು ತೆಗೆದುಕೊಳ್ಳಲು ಕ್ಯೂ ನಿಲ್ಲಿಸಿ ಸಾಯಿಸಿದರು. ನಂತರ ಆಧಾರ್ ಜೋಡಣೆ ವಿಚಾರವಾಗಿ ಮತ್ತೆ ಬ್ಯಾಂಕ್ ಮುಂದೆ ಕ್ಯೂ ನಿಲ್ಲಿಸಿದರು. ದೇಶಕ್ಕೆ ಮಹಾಮಾರಿ ಕರೆತಂದು, ಆಸ್ಪತ್ರೆ ಮುಂದೆ ಕ್ಯೂ, ಆಂಬುಲೆನ್ಸ್ ಗೂ ಕ್ಯೂ, ಔಷಧಿಗೂ ಕ್ಯೂ, ಆಕ್ಸಿಜನ್ ಗೂ ಕ್ಯೂ, ಕೊನೆಗೆ ಶವ ಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು.

DK Shivakumar Congress Price Hike Petro Protest 1 medium

ಈಗ ಆಹಾರ ಕಿಟ್ ಕೊಡಲು ನಾವು ನಿಮ್ಮನ್ನು ಕ್ಯೂ ನಿಲ್ಲಿಸಿದ್ದೇವೆ. ಇದು ಸರ್ಕಾರದ ಆಹಾರ ಕಿಟ್ ಅಲ್ಲ, ಕಾಂಗ್ರೆಸ್ ನಾಯಕರು ತಮ್ಮ ಶ್ರಮದಿಂದ ಸಂಪಾದಿಸಿದ ಸ್ವಂತ ಹಣದಲ್ಲಿ ನೀಡುತ್ತಿರುವ ಕಿಟ್. ಬೆಂಗಳೂರಿನಿಂದ ದಿಲ್ಲಿವರೆಗೆ ದೇಶದಲ್ಲಿ ನೀವು ಬದಲಾವಣೆ ತರಬೇಕು. ಇದನ್ನೂ ಓದಿ: ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

DK Shivakumar Congress Price Hike Petro Protest 6 medium

ಚುನಾವಣೆ ಕಾರಣಕ್ಕೆ ನಾವು ಇಲ್ಲಿಗೆ ಬಂದು ಈ ಕಾರ್ಯಕ್ರಮ ಮಾಡುತ್ತಿಲ್ಲ. ದೇಶದೆಲ್ಲೆಡೆ ಜನ ಸಂಕಟದಲ್ಲಿದ್ದು, ಅವರಿಗೆ ಸಹಾಯ ಮಾಡಲು ನಾವು ಈ ಇಲ್ಲಿಗೆ ಬಂದಿದ್ದೇವೆ. ನಾವು ಮಾಡುವ ಸಹಾಯದಿಂದ ನಿಮ್ಮ ಜೀವನ ಉದ್ಧಾರವಾಗುತ್ತದೆ ಎಂದು ಹೇಳುತ್ತಿಲ್ಲ. ಆದರೆ ಕಷ್ಟದಲ್ಲಿರುವ ಜನರ ಭಾರವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ.

DK Shivakumar Congress Price Hike Petro Protest 5 medium

ಬಡವರು, ಮಧ್ಯಮ ವರ್ಗದವರು ತಮ್ಮ ಬಳಿ ಇದ್ದ ಅಲ್ಪಸ್ವಲ್ಪ ಚಿನ್ನ ಅಡವಿಟ್ಟು ಜೀವನ ಮಾಡಲು ಮುಂದಾಗಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯೋಗ ಕೊಡುತ್ತೇವೆ ಎಂದವರು ವಿದ್ಯಾವಂತರಿಗೆ ಪಕೋಡಾ ಮಾರಲು ಹೇಳಿದರು. ಪಕೋಡಾ ಮಾಡುವ ಅಡುಗೆ ಎಣ್ಣೆ ಬೆಲೆಯನ್ನು ರೂ.200ಕ್ಕೆ ಹೆಚ್ಚಿಸಿದ್ದಾರೆ. ಇಡೀ ದೇಶದ ಜನರನ್ನು ಬಡತನಕ್ಕೆ ನೂಕಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಮೂಲಬೆಲೆ 35 ರೂ., ಅದಕ್ಕೆ ತೆರಿಗೆ 65 ರೂ. ನೆರೆ ರಾಷ್ಟ್ರಗಳಲ್ಲಿ ಅರ್ಧದಷ್ಟಿದ್ದರೂ ನಮ್ಮಲ್ಲಿ ಮಾತ್ರ ಬೆಲೆ ಹೆಚ್ಚುತ್ತಲೇ ಇದೆ. ಈ ಸರ್ಕಾರ ದಿನಾ ಜನರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ. ಇದನ್ನೂ ಓದಿ: ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

DK Shivakumar Congress Price Hike Petro Protest 4 medium

ಆರ್ಥಿಕ ನೆರವು:
ನಮ್ಮ ನಾಯಕರು ತಮ್ಮ ಸ್ವಂತ ಹಣದಲ್ಲಿ ನಿಮಗೆ ಸಹಾಯ ಮಾಡಲು ಮುಂದಾಗಿದ್ದಾರೆ. ನಮ್ಮ ನಾಯಕರೆಲ್ಲರೂ ಹಣ ಸೇರಿಸಿ ಈ ಕ್ಷೇತ್ರದ ಬಡ ಕುಟುಂಬಗಳಿಗೆ ತಲಾ 1 ಸಾವಿರ ರೂ. ನೀಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಲು ನಾನಿಲ್ಲಿಗೆ ಬಂದಿದ್ದೇನೆ. ಈ ಹಣ ನಿಮ್ಮ ಎಲ್ಲಾ ಸಮಸ್ಯೆ ಬಗೆಹರಿಸದೆ ಇರಬಹುದು. ಆದರೆ ಕಷ್ಟಕಾಲದಲ್ಲಿ ನಿಮ್ಮ ಜತೆ ನಿಲ್ಲಲು ನಮ್ಮ ನಾಯಕರು ಮುಂದೆ ಬಂದಿದ್ದಾರೆ. ಅನೇಕರಿಗೆ ಊಟಕ್ಕೆ, ಔಷಧಿಗೆ ಹಣವಿರುವುದಿಲ್ಲ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸಲು ಈ ಹೆಜ್ಜೆ ಇಟ್ಟಿದ್ದಾರೆ. ಆ ಮೂಲಕ ನಿಮ್ಮ ಋಣ ತೀರಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದಾರೆ.

DK Shivakumar Congress Price Hike Petro Protest 3 medium

ಕಳೆದ ಬಾರಿ ಹಾಲು ಕೇಳಿದವರಿಗೆ ಐಪಿಸಿ ಸೆಕ್ಷನ್ 307 ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ಪೊಲೀಸರನ್ನು ಬಳಸಿಕೊಂಡು ಮೂರ್ನಾಲ್ಕು ಕೇಸ್ ಹಾಕಿಸಿದ್ದಾರೆ ಎಂದು ಒಬ್ಬರು ಹೆಣ್ಣು ಮಗಳು ಹೇಳುತ್ತಿದ್ದರು. ಆ ರೀತಿ ನಿಮಗೆ ಯಾರಾದರೂ ಯಾವುದೇ ತೊಂದರೆ ಕೊಟ್ಟರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ರಕ್ಷಣೆಗೆ ಕಾಂಗ್ರೆಸ್ ಸದಾ ನಿಲ್ಲಲಿದೆ. ಮುಂದಿನ ದಿನಗಳಲ್ಲಿ ಕಾರ್ಪೊರೇಷನ್ ಚುನಾವಣೆ ಬರುತ್ತಿದೆ, ವಿಧಾನಸಭೆ ಚುನಾವಣೆಯೂ ಬರಲಿದೆ. ನೀವು ಬಿಜೆಪಿಯವರಿಗೆ ಬುದ್ದಿ ಕಲಿಸಬೇಕು. ನಾವು ನಿಮ್ಮ ಜತೆ ಇರುತ್ತೇವೆ.

TAGGED:bjpcongressCorona VirusDK ShivakumarFood KitOil PricesPublic TVಕಾಂಗ್ರೆಸ್ಕೊರೊನಾ ವೈರಸ್ಡಿ.ಕೆ.ಶಿವಕುಮಾರ್ತೈಲ ಬೆಲೆ ಏರಿಕೆಪಬ್ಲಿಕ್ ಟಿವಿಫುಡ್ ಕಿಟ್ಬಿಜೆಪಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
6 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
7 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
45 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
48 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?