ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಆರೋಪಿಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಸೆಕೆಂಡ್ ಬ್ಲಾಕ್ ಬಳಿ ಘಟನೆ ನಡೆದಿದ್ದು, ಕೊಲೆಯ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಪಿಂಕಿ ನವಾಜ್ ಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಬಂದ ಆರು ಜನರ ತಂಡ ಪಿಂಕಿ ನವಾಜ್ ಮೇಲೆ ದಾಳಿ ನಡೆಸಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಆರು ಜನರ ತಂಡ ಪಿಂಕಿ ನವಾಜ್ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ ಪಿಂಕಿ ನವಾಜ್ಗೆ ಗಂಭೀರ ಗಾಯವಾಗಿದೆ.
2018ರ ಜ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯದ್ವಾತದ್ವಾ ದೀಪಕ್ ರಾವ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಕೂಡಲೇ ಮಾಹಿತಿ ಪಡೆದ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು.