ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಉಗ್ರರು- ಬಲಿಯಾಗಿದ್ದು 3 ವರ್ಷದ ಕಂದಮ್ಮ

Public TV
1 Min Read
baby

ಜಮ್ಮು ಕಾಶ್ಮೀರ: ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಭಯೋತ್ಪಾದಕರ ದಾಳಿಗೆ 3 ವರ್ಷದ ಕಂದ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿದೆ.

ರಾಜೌರಿಯಲ್ಲಿ ಭಯೋತ್ಪಾದಕರು ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸವನ್ನು ಟಾರ್ಗೆಟ್ ಮಾಡಿ ನಿನ್ನೆ ರಾತ್ರಿ ಗ್ರೆನೇಡ್ ಎಸೆದಿದ್ದಾರೆ. ಈ ದಾಳಿಯ ಪರಿಣಾಮ ಜಸ್ಬೀರ್ ಸಿಂಗ್ ಅವರ ಕುಟುಂಬದ ಏಳು ಮಂದಿ ಸದಸ್ಯರಿಗೆ ಗಾಯಗಳಾಗಿವೆ. ಆದರೆ ವೀರ್(3) ಮಗುವಿನ ಸ್ಥಿತಿ ಗಂಭೀರವಾಗಿದ್ದು, ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೀರ್ ಸಾವನ್ನಪ್ಪಿದ್ದಾನೆ. ಮಗುವಿನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಶ್ರೀ ಸಿಂಗ್ ಅವರಿಗೂ ಗಾಯಗಳಾಗಿದ್ದು, ಸರಿಯಾಗಿ ಅವರಿಗೆ ಭದ್ರತೆಯನ್ನು ಕೊಟ್ಟಿಲ್ಲ. ಅದಕ್ಕೆ ಈ ರೀತಿ ಕೃತ್ಯ ಸಂಭವಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದನ್ನೂ ಓದಿ: ತಾತನ ಮೃತದೇಹವನ್ನೇ ಫ್ರಿಡ್ಜ್‌ನಲ್ಲಿಟ್ಟ ಮೊಮ್ಮಗ – ಕಾರಣವೇನು ಗೊತ್ತಾ?

ಬಿಜೆಪಿ ನಾಯಕರ ಮೇಲೆ ಭಯೋತ್ಪಾದಕ ದಾಳಿಗಳನ್ನು ಪಾಕಿಸ್ತಾನ ನಡೆಸುತ್ತಿದೆ. ಇದು ಹೇಡಿತನದ ಕೃತ್ಯ. ನಾವು ದಾಳಿಯನ್ನು ಖಂಡಿಸುತ್ತೇವೆ. ಅದಕ್ಕೆ ಕಾರಣರಾದ ಭಯೋತ್ಪಾದಕರನ್ನು ಪೊಲೀಸರು ತಕ್ಷಣವೇ ಬಂಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಆಗ್ರಹಿಸಿದ್ದಾರೆ.

ಈ ಪ್ರಕರಣ ಕುರಿತು ಪರಿಣಾಮಕಾರಿಯಾಗಿ ತನಿಖೆ ಮಾಡುಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *