Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

Districts

ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

Public TV
Last updated: September 30, 2020 3:43 pm
Public TV
Share
3 Min Read
advani bjp main 2
SHARE

ಲಕ್ನೋ: ಬಿಜೆಪಿ ಭೀಷ್ಮ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಖಲಾಸೆಯಾಗಿದ್ದಾರೆ.

28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯ ಅಂತಿಮ ತೀರ್ಪಿನಲ್ಲಿ ಇದು ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಅವರು 2,300 ಪುಟಗಳು ಇರುವ ತೀರ್ಪನ್ನು ಬರೆದಿದ್ದಾರೆ. ಈ ತೀರ್ಪಿನಿಂದಾಗಿ ಎಲ್‌ಕೆ ಅಡ್ವಾಣಿ ಅವರಿಗಿದ್ದ ಎಲ್ಲ ಕಂಟಕ ಈಗ ದೂರವಾಗಿದೆ.

advani murli manohar joshi 1

ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295,149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು.

babri masjid

ಖುಲಾಸೆಗೆ ಕಾರಣ ಏನು?
ಆರೋಪಿಗಳು ಯಾರು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ಇದೊಂದು ಆಕಸ್ಮಿಕ ಘಟನೆಯಾಗಿದೆ. ಅಶೋಕ್‌ ಸಿಂಘಾಲ್‌ ಮತ್ತು ಇತರ ಸಂಘ ಪರಿವಾರದ ನಾಯಕರು ಒಳಗಡೆಯಿಂದ ಮಸೀದಿ ರಕ್ಷಣೆಗೆ ಮುಂದಾಗಿದ್ದರು. ಈಗ ನೀಡಿರುವ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳ ಮೇಲೆ ಹೊರಿಸಲಾಗಿರುವ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ.

ಐಪಿಸಿ ಸೆಕ್ಷನ್‌ 120 ಬಿ(ಒಳ ಸಂಚು) ಅಡಿ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳು ಪೂರ್ವಭಾವಿಯಾಗಿ ಒಟ್ಟಿಗೆ ಕುಳಿತುಕೊಂಡು ಒಳಸಂಚು ಮಾಡಿ ಈ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳನ್ನು ನೀಡಿಲ್ಲ.

ಬಾಬ್ರಿ ಮಸೀದಿ ಧ್ವಂಸ ಪೂರ್ವನಿಯೋಜಿತ ಕೃತ್ಯ ಅಲ್ಲ, ಆರೋಪಿತರ ವಿರುದ್ಧ ಬಲವಾದ ಸಾಕ್ಷ್ಯಗಳಿಲ್ಲ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು #BabriMasjid #BabriDemolitionCase #BabriMasjidDemolition

— PublicTV (@publictvnews) September 30, 2020

ಸೆಕ್ಷನ್ 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ) ಆರೋಪವನ್ನು ಒಪ್ಪಿಕೊಳ್ಳಲು ಬರುವುದಿಲ್ಲ. ವಿಚಾರಣೆ ವೇಳೆ ಕೋರ್ಟ್‌ಗೆ ಸಲ್ಲಿರುವ ವಿಡಿಯೋ ತಿರುಚಲಾಗಿದೆ. ಈ ವಿಡಿಯೋಗೆ ಸಂಬಂಧಿಸಿದ ನೆಗೆಟಿವ್‌ ಸಲ್ಲಿಸುವಂತೆ ಕೋರ್ಟ್‌ ಕೇಳಿತ್ತು. ಆದರೆ ತನಿಖಾ ತಂಡ ನೆಗೆಟಿವ್‌ ನೀಡಿಲ್ಲ.

UMABHARATHI

ಸೆಕ್ಷನ್‌ 295(ಯಾವುದೇ ವರ್ಗದವರ ಮತಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪೂಜಾ ಸ್ಥಾನಕ್ಕೆ ಧಕ್ಕೆ ಉಂಟು ಮಾಡುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಆರೋಪ ಮಾಡಲಾಗಿದೆ. ಆದರೆ ಈ ಜಾಗದಲ್ಲಿ ಮುಸ್ಲಿಮರು ಹಲವು ವರ್ಷಗಳಿಂದ ನಮಾಜ್‌ ಮಾಡುತ್ತಿರಲಿಲ್ಲ. ಪ್ರಾರ್ಥನೆ ಮಾಡದ ಕಾರಣ ಈ ಸ್ಥಳ ಅಪವಿತ್ರಗೊಂಡಿಲ್ಲ.

ಸೆಕ್ಷನ್ 149( ಒಂದೇ ಉದ್ದೇಶಕ್ಕಾಗಿ ಅಕ್ರಮ ಗುಂಪು ಸೇರುವುದು) ಅಡಿಯ ಮಾಡಲಾಗಿರುವ ಆರೋಪ ಒಪ್ಪಲು ಬರುವುದಿಲ್ಲ. ಈ ಘಟನೆಯ ನಡೆದ ಸ್ಥಳದಲ್ಲಿ ಸರ್ಕಾರ ಸೆಕ್ಷನ್‌ 144 ಹಾಕಿರಲಿಲ್ಲ. ಹೀಗಾಗಿ ಗುಂಪು ಸೇರುವುದು ಅಕ್ರಮವಾಗುದಿಲ್ಲ. ಸಭೆ ನಡೆಸುವುದು ಕಾನೂನುಬಾಹಿರವಾಗುವುದಿಲ್ಲ.

Watching TV as judge SK Yadav starts reading #Babri verdict #MurliManoharJoshi@aajtak pic.twitter.com/KJQSVozxHb

— Poulomi Saha (@PoulomiMSaha) September 30, 2020

ಆರೋಪಿಗಳ ದರೋಡೆ ಮಾಡಿದ್ದಕ್ಕೆ ಸೆಕ್ಷನ್‌ 395ರ ಅಡಿ ಕೇಸ್‌ ಹಾಕಲಾಗಿದೆ. ಆರೋಪಿಗಳು ದರೋಡೆ ಮಾಡಿ ಸ್ಥಳದಿಂದ ಕಲಾಕೃತಿಗಳೊಂದಿಗೆ ಓಡಿ ಹೋಗುವುದನ್ನು ಯಾರು ನೋಡಿಲ್ಲ. ಈ ಕಾರಣಕ್ಕೆ ಈ ಆರೋಪವನ್ನು ಒಪ್ಪಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಏನಿದು ಪ್ರಕರಣ?
1992 ಡಿಸೆಂಬರ್‌ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.

ಖಲಾಸೆಯಾದ 32 ಮಂದಿ ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

TAGGED:Babri MasjidBabri Masjid VerdictcbiLK AdvaniUma Bhartiಅಡ್ವಾಣಿಉತ್ತರ ಪ್ರದೇಶಬಾಬ್ರಿ ಮಸೀದಿಬಿಜೆಪಿಮುರಳಿ ಮನೋಹರ್ ಜೋಶಿಸಿಬಿಐ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
1 hour ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
1 hour ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
2 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
2 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
3 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?