ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.
ನನಗೆ ಕೊರೊನಾ ಟೆಸ್ಟ್ನಲ್ಲಿ ಪಾಸಿಟಿವ್ ಬಂದಿದೆ. ನಾನು ಐಸೋಲೇಷನ್ಗೆ ಒಳಗಾಗಿದ್ದೇನೆ. ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡುತ್ತೇನೆ. ಕೆಲವು ದಿನಗಳಕಾಲ ಐಸೋಲೇಷನ್ಗೆ ಒಳಗಾಗಿ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ.
अभी-अभी मेरी कोरोना टेस्ट की रिपोर्ट पॉज़िटिव आई है। मैंने अपने आपको सबसे अलग कर लिया है व घर पर ही उपचार शुरू हो गया है।
पिछले कुछ दिनों में जो लोग मेरे संपर्क में आये हैं, उन सबसे विनम्र आग्रह है कि वो भी जाँच करा लें। उन सभी से कुछ दिनों तक आइसोलेशन में रहने की विनती भी है।
— Akhilesh Yadav (@yadavakhilesh) April 14, 2021
ನಾನು ಸದ್ಯಕ್ಕೆ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವುದಿಲ್ಲ. ಬಿಜೆಪಿ ಲಸಿಕೆಯನ್ನು ನಾನು ನಂಬೋದಾದ್ರೂ ಹೇಗೆ? ನಾನು ಬಿಜೆಪಿ ಲಸಿಕೆ ತೆಗೆದುಕೊಳ್ಳುವುದಿಲ್ಲ ಎಂದು ವ್ಯಾಕ್ಸಿನ್ ಡ್ರೈರನ್ ನಡೆಯುವ ಸಂದರ್ಭದಲ್ಲಿ ಅಖಿಲೇಷ್ ಯಾದವ್ ಹೇಳಿದ್ದರು.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೆಲವರು ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ, ಮುನ್ನೆಚ್ಚರಿಕೆಯಾಗಿ, ನಾನು ಮೊದಲೇ ಪ್ರತ್ಯೇಕವಾಗಿದ್ದು, ನನ್ನ ಕೆಲಸವನ್ನು ವಾಸ್ತವಿಕವಾಗಿ ಪ್ರಾರಂಭಿಸಿದೆ. ನನಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.