Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಸಿ ಮತ್ತು ಪೌಷ್ಟಿಕ ಆಹಾರ ಎಲ್ಲರಿಗೂ ಲಭ್ಯಮಾಡುವ ನಿಟ್ಟಿನಲ್ಲಿ ಸರಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌

Public TV
Last updated: June 6, 2021 3:33 pm
Public TV
Share
3 Min Read
tejaswini ananthkumar e1622973126842
SHARE

– ದೇಶವನ್ನು ಪೌಷ್ಟಿಕ ಭಾರತ ಮಾಡುವ ನಿಟ್ಟಿನಲ್ಲಿ ಪಣ ತೊಡಲು ನಿರ್ಧಾರ
– ಅದಮ್ಯ ಚೇತನದಿಂದ ಪೌಷ್ಟಿಕ ಸಾತ್ವಿಕ ಆಹಾರ ಆಂದೋಲನಕ್ಕೆ ಚಾಲನೆ

ಬೆಂಗಳೂರು:  ಬಿಸಿ ಮತ್ತು ಪೌಷ್ಟಿಕ ಆಹಾರ ಎಲ್ಲರಿಗೂ ಲಭ್ಯ ಮಾಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ಇಂದು ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 5ನೇ ದೇಶ ಮೊದಲು – ಹಸಿವನ್ನು ಮೀರಿದ ಪೌಷ್ಠಿಕತೆ – ದೇಶದಲ್ಲಿ ಹೆಚ್ಚುವರಿ ಆಹಾರ ಮತ್ತು ಕಡಿಮೆ ಪೌಷ್ಟಿಕತೆಯ ಒಗಟು ವೆಬಿನಾರ್‌ ನಲ್ಲಿ ಅವರು ಮಾತನಾಡಿದರು.

adamya chetana nutritious food campaign tejaswini ananthkumar 2 medium

ಪೌಷ್ಟಿಕತೆಯ ಸೂಚ್ಯಾಂಕದಲ್ಲಿ ಭಾರತ ದೇಶದ ಸ್ಥಾನ ಬಹಳ ಕೆಳಗಿನದ್ದಾಗಿದೆ. ಹಾಗಂತ ನಮ್ಮ ದೇಶದಲ್ಲಿ ಆಹಾರ ಉತ್ಪಾದನೆಯ ಪ್ರಮಾಣ ಕಡಿಮೆಯದ್ದು ಎಂದು ಅರ್ಥವಲ್ಲ. ನಾವು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚು ಆಹಾರ ಉತ್ಪಾದನೆ ಮಾಡುವ ರಾಷ್ಟ್ರವಾಗಿದ್ದೇವೆ. ಆದರೆ, ನಮ್ಮಲ್ಲಿ ಶೇ.40 ಆಹಾರವನ್ನು ಹಾಳಾಗುತ್ತಿದೆ. ಕೆಲವೆಡೆ ಆಹಾರ ಹಾಳಾದರೆ, ಕೆಲವೆಡೆ ಆಹಾರ ಸಿಗುತ್ತಿಲ್ಲ. ಈ ಅಂತರವನ್ನು ಕಡಿಮೆ ಮಾಡಬೇಕು. ಸರಿಯಾದ ಊಟ ಮಾಡಿಯೂ ಅಗತ್ಯ ಪೌಷ್ಟಿಕಾಂಶಗಳನ್ನು ಸೇವಿಸದೇ ಇರುವುದು ಅಪೌಷ್ಟಿಕತೆ. ನಾವು ನಮ್ಮ ಪ್ರಾಚೀನ ವೈವಿಧ್ಯಮಯ ಆಹಾರ ಪದ್ದತಿಯಿಂದ ವಿಮುಖರಾಗುತ್ತಿದ್ದು, ಅವಸರದ ಹಾಗೂ ಸರಿಯಾದ ಪೌಷ್ಟಿಕ ಆಹಾರ ಇಲ್ಲದೆ ಬಳುತ್ತಿದ್ದೇವೆ. ಅದಮ್ಯ ಚೇತನ ಸಂಸ್ಥೆ ತನ್ನ ಬಿಸಿಯೂಟದಲ್ಲಿ ಪೌಷ್ಟಿಕತೆಯನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲದೇ ಇರುವುದಕ್ಕೆ ಆದಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

adamya chetana nutritious food campaign tejaswini ananthkumar 4 medium

ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಯಾ ಪ್ರದೇಶದ ಜನಸಂಖ್ಯೆಯ ಆಧಾರದ ಮೇಲೆ ಕಮ್ಯೂನಿಟಿ ಕಿಚನ್‌ಗಳನ್ನು ಪ್ರಾರಂಭಿಸಬೇಕು. ಪೌಷ್ಟಿಕತೆ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಬಿಸಿ ಮತ್ತು ಪೌಷ್ಟಿಕ ಆಹಾರ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ದೊರಕಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಇದೇ ವೇಳೆ, ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಪೌಷ್ಟಿಕ ಮತ್ತು ಸಾತ್ವಿಕ ಆಹಾರ ಆಂದೋಲನಕ್ಕೆ ಚಾಲನೆ ನೀಡಲಾಯಿತು. 1000 ರೂಪಾಯಿಗಳನ್ನು ನೀಡಿ ಸದಸ್ಯರಾದವರಿಗೆ ನಮ್ಮ ಪ್ರಾಚೀನ ಆಹಾರ ಧಾನ್ಯಗಳನ್ನು ಒಳಗೊಂಡಂತಹ ಕಿಟ್‌ ನ್ನು ನೀಡಲಾಗುತ್ತದೆ. ಇದು ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ ಎಂದರು.

adamya chetana nutritious food campaign tejaswini ananthkumar 3 medium

ಆರೋಗ್ಯ ಮತ್ತು ಶಿಕ್ಷಣವನ್ನು ದಾನದ ವರ್ಗದಲ್ಲಿ (ಚಾರಿಟಿ ಕೆಟಗರಿ) ಸೇರಿಸಿದ್ದು ತೆರಿಗೆಯಲ್ಲಿ ಹಲವಾರು ವಿನಾಯಿತಿಗಳನ್ನು ನೀಡಲಾಗಿದೆ. ಆದರೆ, ಆಹಾರವನ್ನು ದಾನವಾಗಿ ನೀಡುವಂತಹ ಸಂಸ್ಥೆಗಳಿಗೆ ಇನ್ನೂ ಯಾವುದೇ ವಿನಾಯಿತಿಗಳು ಇಲ್ಲದ ಕಾರಣ ಬಹಳಷ್ಟು ಜನರು ತಮಗೆ ಇಷ್ಟವಿದ್ದರೂ ಈ ಕಾರ್ಯದಲ್ಲಿ ತೊಡಗಿಕೊಳ್ಳದೇ ಇರುವಂತಾಗಿದೆ. ಆದ್ದರಿಂದ ದೇಶದ ಕಾನೂನು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

adamya chetana nutritious food campaign tejaswini ananthkumar 1 medium

ಅಮೇರಿಕದ ವಿಶ್ವ ಭಾರತೀಯ ವಿಜ್ಞಾನಿಗಳು ಮತ್ತು ಟೆಕ್ನೋಕ್ರಾಟ್‌ಗಳ ಅಸೋಷಿಯೇಷನ್‌ ನ ಸಂಚಾಲಕರು ಮತ್ತು ದೇಶದಲ್ಲಿ ಆಹಾರ ಕ್ರಾಂತಿ – ಪೌಷ್ಟಿಕತೆಯ ಮಿಷನ್ ನ ಮುನ್ನಡೆಸುತ್ತಿರುವ ಡಾ. ಯೆಲ್ಲೋಜಿ ರಾವ್‌ ಮಿರ್ಜಾಕರ್‌ ಮಾತನಾಡಿ, ನಾವು ಹುಟ್ಟುವುದಕ್ಕೂ ಮುಂಚಿನಿಂದಲೂ ಸರಿಯಾದ ಪೌಷ್ಟಿಕತೆಯನ್ನ ಪಡೆದುಕೊಳ್ಳುವುದು ಬಹಳ ಅವಶ್ಯ ಎಂದು ಸಂಶೋಧನೆಗಳು ಹೇಳುತ್ತವೆ. ಅದರಲ್ಲೂ ಗರ್ಭ ಧರಿಸಿದಾಗ ತಾಯಿ ತಗೆದುಕೊಳ್ಳುವ ಆಹಾರ ಮಗುವಿನ ಬೆಳವಣಿಗೆಯಲ್ಲಿ ಬಹಳ ಮಹತ್ವದ ಕೆಲಸವನ್ನು ಮಾಡುತ್ತದೆ. ಅದೇ ಬೆಳವಣಿಗೆಯ ಹಂತದಲ್ಲಿರುವ ಮಗು ಅಪೌಷ್ಟಿಕತೆಯಿಂದ ಬಳಲಿದಾಗ ಮೆದುಳು ಕುಗ್ಗುವುದನ್ನೂ ಸಂಶೋಧನೆಗಳು ತಿಳಿಸಿವೆ. ಅಲ್ಲದೆ, ದೇಶ ಅಪೌಷ್ಟಿಕತೆಯ ಸೂಚ್ಯಾಂಕದಲ್ಲಿ ಬಹಳ ಹಿಂದಿನ ಸ್ಥಾನದಲ್ಲಿದ್ದು, ನಮ್ಮಲ್ಲಿ ಬಹಳಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಕಾಣಬಹುದಾಗಿದೆ. ನಮ್ಮ ಪ್ರಾಚೀನ ಆಹಾರ ಪದ್ದತಿಯಲ್ಲಿ ಪೌಷ್ಟಿಕಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ವೈವಿಧ್ಯಮಯ ಆಹಾರ ಪದ್ದತಿಯನ್ನು ಅನುಸರಿಸಲಾಗುತ್ತಿತ್ತು. ಆದರೆ, ಕೇವಲ ಕಾರ್ಬೋಹೈಡ್ರೈಟ್‌ ಧಾನ್ಯಗಳ ಅತಿಯಾದ ಕೃಷಿಯಿಂದಾಗಿ ಪೌಷ್ಟಿಕ ಆಹಾರ ಧಾನ್ಯಗಳ ಕೊರತೆ ಹೆಚ್ಚಾಗಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ದೇಶದಾದ್ಯಂತ ಪೌಷ್ಟಿಕ ಆಹಾರ ಪದ್ದತಿಯ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೋ. ಪಿ.ವಿ ಕೃಷ್ಣ ಭಟ್‌, ಡಾ ಬಿ.ಎಸ್‌ ಶ್ರೀನಾಥ್‌, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

TAGGED:Adamya Chetanafoodkannada newsTejaswini AnanthKumarಅದಮ್ಯ ಚೇತನಆಹಾರತೇಜಸ್ವಿನಿ ಅನಂತಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
36 minutes ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
4 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
5 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
9 hours ago

You Might Also Like

ipl 2025 the champions are the ones who have won qualifier 1 in the last 7 years fans celebrate in bengaluru
Bengaluru City

IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

Public TV
By Public TV
2 minutes ago
rcb 4
Cricket

IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
By Public TV
12 minutes ago
Rambhadracharya General Upendra Dwivedi
Latest

ಸೇನಾ ಮುಖ್ಯಸ್ಥರಿಗೆ ಧೀಕ್ಷೆ ನೀಡಿ ಪಿಒಕೆ ಗುರುದಕ್ಷಿಣೆಯಾಗಿ ಕೇಳಿದ ಸ್ವಾಮೀಜಿ

Public TV
By Public TV
42 minutes ago
RCB 5
Cricket

ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

Public TV
By Public TV
48 minutes ago
Rajnath Singh
Latest

ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್

Public TV
By Public TV
1 hour ago
RCB vs PBKS 1
Cricket

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?