ಬಿಹಾರ ಚುನಾವಣೆ – ಆರ್‌ಜೆಡಿಯಿಂದ 10 ಲಕ್ಷ ಉದ್ಯೋಗ, ಕೃಷಿ ಸಾಲ ಮನ್ನಾ ಭರವಸೆ

Public TV
1 Min Read
tejaswi yadav

ಪಾಟ್ನಾ: ಮುಂದಿನ 5 ವರ್ಷಗಳಲ್ಲಿ ಬಿಹಾರದಲ್ಲಿ 10 ಲಕ್ಷ ಸರ್ಕಾರಿ ನೌಕರಿಗಳನ್ನು ಸೃಷ್ಟಿಸುವುದಾಗಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಅಲ್ಲದೇ ಇಡೀ ಬಿಹಾರವನ್ನು ಸಂಪೂರ್ಣ ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಅವರು ಭರವಸೆ ನೀಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಬಳಿಕ ಇಂದು ಆರ್‌ಜೆಡಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತು. ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ತೇಜಸ್ವಿ ಯಾದವ್ ಶೀಘ್ರದಲ್ಲಿ ಶಿಕ್ಷಕರ ನೇಮಕಾತಿ ಮಾಡುವುದಾಗಿ ಹೇಳಿದರು.

ರಾಜ್ಯದಲ್ಲಿ ಕೊರೊನಾದಿಂದ ಸಾಕಷ್ಟು ಉದ್ಯೋಗ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಕೈಗಾರಿಕಾ ನೀತಿ ಜಾರಿ ತರುವ ಮೂಲಕ ಹೆಚ್ಚಿನ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು. ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ, ಜೊತೆಗೆ ಕೃಷಿ ಸಾಲ ಮನ್ನಾ, ಸ್ಮಾರ್ಟ್ ವಿಲೇಜ್, ವೃದ್ಧಾಪ್ಯ ವೇತನ ಹೆಚ್ಚಳದ ಭರವಸೆವನ್ನೂ ತೇಜಸ್ವಿ ನೀಡಿದ್ದಾರೆ.

NitishTejashwi

ಇದೇ ವೇಳೆ ಸಿಎಂ ನಿತೀಶ್ ಕುಮಾರ್ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ತಿಳಿಸಬೇಕು. ಈಗಾಗಲೇ ಉದ್ಯೋಗ ನೀಡುವ ಭರವಸೆ ನಿತೀಶ್ ಕುಮಾರ್ ನೀಡಿದ್ದರು. ಆದರೆ ಅವರಿಂದ ಅದು ಸಾಧ್ಯವಾಗಿಲ್ಲ. ಬಿಜೆಪಿ ಎಲ್ಲಿಂದ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *