Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀಗ ಬೀಳುವ ಹೊಸ್ತಿಲಲ್ಲಿ ಶೃಂಗೇರಿ ಶ್ರೀಗಳು ಓದಿದ ಕನ್ನಡ ಶಾಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಬೀಗ ಬೀಳುವ ಹೊಸ್ತಿಲಲ್ಲಿ ಶೃಂಗೇರಿ ಶ್ರೀಗಳು ಓದಿದ ಕನ್ನಡ ಶಾಲೆ

Chikkamagaluru

ಬೀಗ ಬೀಳುವ ಹೊಸ್ತಿಲಲ್ಲಿ ಶೃಂಗೇರಿ ಶ್ರೀಗಳು ಓದಿದ ಕನ್ನಡ ಶಾಲೆ

Public TV
Last updated: February 13, 2021 3:36 pm
Public TV
Share
3 Min Read
Sringeri Sri School 4 copy
SHARE

– ಶಾಲೆ ಉಳಿವಿಗಾಗಿ ಟೊಂಕ ಕಟ್ಟಿ ನಿಂತ ಹಳೆ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಶೃಂಗೇರಿ ಮಠದ 34ನೇ ಜಗದ್ಗುರುಗಳಾದ ಚಂದ್ರಶೇಖರ ಭಾರತೀ ಶ್ರೀಗಳು ಓದಿದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದೆ. 1900 ಇಸವಿಯಲ್ಲಿ ಪುಟ್ಟ-ಪುಟ್ಟ ಹೆಜ್ಜೆಗಳನ್ನಿಟ್ಟುಕೊಂಡು ಇದೇ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ಶ್ರೀಗಳು ಮುಂದಿನ ದಿನಗಳಲ್ಲಿ ಶೃಂಗೇರಿ ಮಠದ ಜಗದ್ಗುರುಗಳಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಅಜರಾಮರವಾದರು. ವಿಶ್ವದ ಉದ್ದಗಲಕ್ಕೂ ಖ್ಯಾತಿಯಾದರು. ಅದೆಲ್ಲಾ ಒಂದು ತಪ್ಪಸ್ಸು ಹಾಗೂ ಇತಿಹಾಸ. ಆದರೆ ಇಂದು ಅವರು ಆಡಿ-ಬೆಳೆದು ಓದಿದ ಸರ್ಕಾರಿ ಕನ್ನಡ ಶಾಲೆಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದೆ.

Sringeri Sri School 2 copy

ಈ ಶಾಲೆ ಆರಂಭವಾಗಿದ್ದು 1853ನೇ ಇಸವಿಯಲ್ಲಿ. ಈ ಶಾಲೆಗೆ ಸುಮಾರು 168 ವರ್ಷಗಳ ಇತಿಹಾಸವಿದೆ. ಈ ಶಾಲೆಯ ದಾಖಲಾತಿ ಪುಸ್ತಕದಲ್ಲಿ ಶ್ರೀಗಳ ಹೆಸರೂ ಕೂಡ ಇದೆ. ಶ್ರೀ ಜಗದ್ಗುರು ಚಂದ್ರಶೇಖರ ಭಾರತಿಗಳು ಈ ಶಾಲೆಯಲ್ಲಿ ಅಂದಾಜು 1900ನೇ ಇಸವಿಯಲ್ಲಿ ಓದಿದ್ದಾರೆ. ಅವರ ಪೂರ್ಣನಾಮ ನರಸಿಂಹ. ತಂದೆ ವಿದ್ವಾನ್ ಗೋಪಾಲಶಾಸ್ತ್ರಿ ತಾಯಿ ಲಕ್ಷ್ಮಮ್ಮ. ಅವರು ಹುಟ್ಟಿದ ವರ್ಷ 1892. ದಾಖಲೆಗಳು ಕಳೆದು ಹೋಗಿವೆ ಎಂದು ಇಂದಿಗೂ 130 ವರ್ಷಗಳ ಹಿಂದಿನ ದಾಖಲಾತಿ ಪುಸ್ತಕದ ಮೇಲ್ಭಾಗದಲ್ಲೇ ಬರೆದು ಜೋಪಾನವಾಗಿ ಇಟ್ಟಿದ್ದಾರೆ. ಶೃಂಗೇರಿ ಮಠ ಅಂದ್ರೆ ದೇಶ-ವಿದೇಶದ ಉದ್ದಗಲಕ್ಕೂ ಪೂಜ್ಯ ಭಾವನೆ. ಮಠದ ಶ್ರೀಗಳು ಇಟ್ಟ ಒಂದೊಂದು ಹೆಜ್ಜೆಯೂ ನೆನಪಿನ ಬುತ್ತಿ. ಆದರೆ ಸರ್ಕಾರ ಇಂತಹಾ ಜೀವಂತ ದಂತಕಥೆಯ ಶಾಲೆಗೆ ಬೀಗ ಹಾಕುವ ಕಾಲ ಸನ್ನಿಹಿತವಾಗಿದೆ.

Sringeri Sri School 1 copy

ಶಾಲೆಯ ಈ ಸ್ಥಿತಿಗೆ ಎರಡು ಕಾರಣ: ಆರಂಭದಲ್ಲಿ ಶ್ರೀಗಳು ಓದುವಾಗ ಈ ಶಾಲೆಯಲ್ಲಿ ಸಾವಿರಾರು ಮಕ್ಕಳಿದ್ದರು. 168 ವರ್ಷಗಳಲ್ಲಿ ಲಕ್ಷಾಂತರ ಮಕ್ಕಳು ಬದುಕು ರೂಪಿಸಿಕೊಂಡಿದ್ದಾರೆ. ವಿವಿಧ ಉನ್ನತ ಹುದ್ದೆಗೇರಿದ್ದಾರೆ. ಇಂದು ಈ ಶಾಲೆಯಲ್ಲಿ ಇರೋದು ಕೇವಲ 16 ಜನ ಮಕ್ಕಳು. ಶಿಕ್ಷಕರ ಶ್ರಮ ಹಾಗೂ ಹೋರಾಟದ ಫಲವಾಗಿ ನಾಲ್ಕು ಜನ ಸೇರ್ಪಡೆಯಾಗಿದ್ದಾರೆ. ಈ ದಂತಕಥೆಯ ಶಾಲೆಯ ಇಂದಿನ ಸ್ಥಿತಿಗೆ ಕಾರಣ ಎರಡು. ಒಂದು, ಹೆತ್ತವರ ಇಂಗ್ಲಿಷ್ ವ್ಯಾಮೋಹ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮತ್ತೊಂದು, ಸರ್ಕಾರಿ ಶಾಲೆಯ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಶಾಲೆಗೆ ಅನುಮತಿ ನೀಡಬಾರದೆಂಬ ಸರ್ಕಾರದ ಆದೇಶದ ಮಧ್ಯೆಯೂ ಈ ಶಾಲೆಯ 100-200 ಮೀಟರ್ ದೂರದಲ್ಲಿ ಎರಡು ಖಾಸಗಿ ಶಾಲೆಗೆ ಅನುಮತಿ ನೀಡಿರೋದು. ಈ ಶಾಲೆಯ ಇಂದಿನ ಈ ಸ್ಥಿತಿಗೆ ಅಧಿಕಾರಿ ವರ್ಗ ಕೂಡ ಕಾರಣವಾಗಿದೆ.

Sringeri Sri School 5

ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ: ಹಿಂದೊಮ್ಮೆ ಈ ಶಾಲೆಯನ್ನ ಮುಚ್ಚಲು ಮುಂದಾಗಿದ್ದರು. ಸ್ಥಳಿಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಶ್ರೀಗಳ ನೆನಪಿಗಾಗಿ ಉಳಿಸಿದ್ದರು. 2016ರಲ್ಲಿ ಈ ಶಾಲೆಯನ್ನ ಬಾಲಕಿಯರ ಶಾಲೆ ಜೊತೆ ವಿಲೀನ ಮಾಡಲು ಸರ್ಕಾರ ಚಿಂತಿಸಿತ್ತು. ಸ್ಥಳಿಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಬಾಲಕರ ಶಾಲೆಯಾಗೇ ಉಳಿದಿದೆ. ಇಂತಹ ಶಾಲೆಯನ್ನ ಮುಚ್ಚಲು ಅಥವ ಮರ್ಜ್ ಮಾಡಲು ಯೋಚಿಸೋ ಸರ್ಕಾರಕ್ಕೆ ಈ ನೆನಪಿನ ಬುತ್ತಿಯನ್ನ ಉಳಿಸೋ ಮನಸ್ಸಿಲ್ಲ ಎಂದು ಸ್ಥಳಿಯರು ಸರ್ಕಾರದ ವಿರುದ್ಧ ಅಸಮಾಧಾನ ಕೂಡ ಹೊರಹಾಕಿದ್ದಾರೆ. ಹೆತ್ತವರ ಇಂಗ್ಲಿಷ್ ಪ್ರೀತಿ ಕೂಡ ಶಾಲೆಯ ಈ ದುಸ್ಥಿತಿಗೆ ಕಾರಣವಾಗಿದೆ.

sringeri sri school a 2

ಶಾಲೆ ಉಳಿವಿಗಾಗಿ ಟೊಂಕ ಕಟ್ಟಿ ನಿಂತ ಹಳೆ ವಿದ್ಯಾರ್ಥಿಗಳು:
ಸ್ಥಳೀಯರು, ಹಳೇ ವಿಧ್ಯಾರ್ಥಿಗಳು, ಅಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಎಡಿಎಂಸಿ ಸದಸ್ಯರು ಈಗ ಮತ್ತೆ ಶಾಲೆಗೆ ಮರುಜೀವ ನೀಡಲು ಮುಂದಾಗುತ್ತಿದ್ದಾರೆ. ಸುಣ್ಣ-ಬಣ್ಣ ಹೊಡೆಸಿ ಶ್ರೀಗಳ ನೆನಪಿಗಾಗಿ ಈ ಶಾಲೆಯ ಹೊಸ ಶಕೆಗೆ ನಾಂದಿ ಹಾಡಲು ಸಿದ್ಧತೆ ನಡೆಸಿದ್ದಾರೆ. ಅಧಿಕಾರಿಗಳು ಕೂಡ ಕೂಡ ಶಾಲೆಯನ್ನ ಮುಚ್ಚಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯರು ಕೂಡ ಸರ್ಕಾರಕ್ಕೆ ಇದು ಬರೀ ಶಾಲೆಯಷ್ಟೆ. ನಮಗೆ ಜ್ಞಾನದ ದೇಗುಲ. ಶ್ರೀಗಳ ನೆನಪು. ಈ ಶಾಲೆಯ ಅಭಿವೃದ್ಧಿಗೆ ನಾವು ಸದಾ ಸಿದ್ಧ ಎಂದು ಶಾಲೆ ಉಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ.

sringeri sri school a 1

ವಿಶ್ವದ ಉದ್ಧಗಲಕ್ಕೂ ಶಂಕರಾಚಾರ್ಯರು, ಶೃಂಗೇರಿ ಮಠ ಅಂದ್ರೆ ಪೂಜ್ಯ ಭಾವನೆ. ಶೃಂಗೇರಿ ಶ್ರೀಗಳು ಇಟ್ಟ ಒಂದೊಂದು ಹೆಜ್ಜೆಯೂ ಒಂದೊಂದು ನೆನಪಿನ ಬುತ್ತಿ. ಇತಿಹಾಸ. ಜೀವಂತ ದಂತಕಥೆ. ಅವುಗಳನ್ನ ಉಳಿಸಿಕೊಳ್ಳಬೇಕೇ ವಿನಃ ಸೃಷ್ಠಿಸಲಾಗಲ್ಲ. ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪ್ರತಿಮೆ-ರಸ್ತೆ ಮಾಡಿ ಅದಕ್ಕೆ ಒಬ್ಬೊಬ್ಬರ ಹೆಸರಿಟ್ಟು ವಸ್ತುಗಳಲ್ಲಿ ವ್ಯಕ್ತಿಗಳನ್ನ ನೆನಪಿಸಿಕೊಳ್ಳುವ ಬದಲು ಶತಶತಮಾನಕ್ಕೂ ನೈಸರ್ಗಿಕ ಹಾಗೂ ಜೀವಂತ ಆ್ಯಂಟಿಕ್ ಪೀಸ್ ಆಗಿರೋ ಇಂತಹಾ ಕನ್ನಡ ಶಾಲೆಗಳನ್ನೇ ಉಳಿಸಿ ಅಭಿವೃದ್ಧಿಪಡಿಸಿದರೆ ಅದಕ್ಕಿಂತ ದೊಡ್ಡ ಸಾಧನೆ ಮತ್ತೊಂದಿಲ್ಲ ಅನ್ನೋದು ಜಿಲ್ಲೆಯ ಜನರ ಆಸೆಯಾಗಿದೆ.

TAGGED:Chandrashekhara Bharatee SreeChikkamagaluruKannada SchoolPublic TVSringeristudentsಕನ್ನಡ ಶಾಲೆಚಂದ್ರಶೇಖರ ಭಾರತೀ ಶ್ರೀಗಳುಚಿಕ್ಕಮಗಳೂರುಪಬ್ಲಿಕ್ ಟಿವಿವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
18 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
32 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?