ಬೀಗ ಹಾಕಿದ ಮನೆಯೇ ಟಾರ್ಗೆಟ್- 25 ಲಕ್ಷ ಮೌಲ್ಯದ ಚಿನ್ನಾಭರಣ ವಶ

Public TV
1 Min Read
RMG ARREST copy

– ಐಷಾರಾಮಿ ಜೀವನ ನಡೆಸ್ತಿದ್ದ ಕಳ್ಳ ಅಂದರ್

ರಾಮನಗರ: ಕುಖ್ಯಾತ ಮನೆಗಳ್ಳನನ್ನ ಬಂಧಿಸಿ, ಬಂಧಿತನಿಂದ 25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳುವಲ್ಲಿ ರಾಮನಗರ ಜಿಲ್ಲೆ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉದಯ್‍ಕುಮಾರ್ ಅಲಿಯಾಸ್ ಅಶೋಕ ಬಂಧಿತ ಆರೋಪಿಯಾಗಿದ್ದು, ಈತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವನಾಗಿದ್ದಾನೆ. ಈ ಆರೋಪಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 18 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಬಂಧಿತನಿಂದ 560 ಗ್ರಾಂ ಚಿನ್ನಾಭರಣಗಳು, 3 ಕೆ.ಜಿ ಬೆಳ್ಳಿ ಸಾಮಾಗ್ರಿಗಳು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರು, ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.

RMG 8

ಬಂಧಿತ ಆರೋಪಿ ಮಾರ್ಚ್ ತಿಂಗಳಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹರ್ತಿ ಗ್ರಾಮದ ರೇಣುಕಮ್ಮ ಮನೆ ಒಡೆದು 1,20,000 ಬೆಲೆ ಬಾಳುವ ಚಿನ್ನಾಭರಣಗಳನ್ನ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂದ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಪಿಐ ಮಂಜುನಾಥ್ ಹಾಗೂ ಅವರ ತಂಡ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಇನ್ನಷ್ಟು ಕಳ್ಳತನದ ಪ್ರಕರಣಗಳು ಹೊರ ಬಂದಿವೆ.

RMG 9

ಮಾಗಡಿ ಸರಹದ್ದಿನಲ್ಲಿ 2, ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 15 ಮನೆ ಕಳ್ಳತನದ ಪ್ರಕರಣಗಳು ಹಾಗೂ ತುಮಕೂರು ಜಿಲ್ಲೆಯ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿ ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಬಂಧನವಾಗಿ ಕಾರಗೃಹದಲ್ಲಿದ್ದು, 2019ರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದನು.

ಜೈಲಿನಿಂದ ಹೊರ ಬಂದ ಮೇಲೂ ಈತ ತನ್ನ ಹಳೇ ಚಾಳಿಯನ್ನ ಬಿಟ್ಟಿರಲಿಲ್ಲ. ಈ ಆರೋಪಿ ಹಗಲು ಸಮಯದಲ್ಲೇ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದನು. ಇಂತಹ ಖತನಾರ್ಕ್ ಮನೆಗಳ್ಳನನ್ನ ಬಂಧಿಸಿದ ಮಾಗಡಿ ಪೊಲೀಸರಿಗೆ ಎಸ್‍ಪಿ ಅನೂಪ್ ಎ.ಶೆಟ್ಟಿ ಅಭಿನಂದಿಸಿದ್ದಾರೆ.

RMG 3

Share This Article
Leave a Comment

Leave a Reply

Your email address will not be published. Required fields are marked *