ಬೀದರ್: ಗಡಿ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ ಗೂ ಸೋಂಕು ತಗುಲಿದ್ದು, ಮುಖ್ಯ ಪೊಲೀಸ್ ಪೇದೆ ಸೇರಿ 7 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.
ಬೀದರ್ ಹಾಗೂ ಬಸವಕಲ್ಯಾಣ ತಾಲೂಕಿನ 7 ಜನಕ್ಕೆ ಇಂದು ಪಾಸಿಟಿವ್ ಧೃಡವಾಗಿದೆ. 7 ಜನರಲ್ಲಿ ನಗರದ ಗಾಂಧಿ ಗಂಜ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆಗೂ ಇಂದು ಮಹಾಮಾರಿ ವಕ್ಕರಿಸಿದೆ. ಕಂಟೈನ್ಮೆಟ್ ಝೋನ್ ಸಂಪರ್ಕ ಹಾಗೂ ಮುಂಬೈ ಕಂಟಕದಿಂದ ಸೋಂಕು ಧೃಡವಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 562ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 456 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 87 ಪ್ರಕರಣಗಳು ಸಕ್ರಿಯವಾಗಿವೆ. ಇಗಾಗಲೇ ಜಿಲ್ಲೆಯಲ್ಲಿ 19 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಪ್ರತಿ ದಿನ ಮಹಾಮಾರಿಯ ಆರ್ಭಟ ನೋಡಿ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.