ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರಿಗೆ ಕೆಲವು ವಿಶೇಷವಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯ ಇದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರೋಕ್ಷವಾಗಿ ಲಾಕ್ಡೌನ್ ಸುಳಿವು ನೀಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಇಂದು ಭೇಟಿ ಮಾಡಿ ತಾಂತ್ರಿಕ ಸಮಿತಿಯವರು ನೀಡಿದ ಕೆಲವೊಂದು ವರದಿಗಳ ಕುರಿತಂತೆ ಚರ್ಚೆ ನಡೆಸುತ್ತೇನೆ. ಅಲ್ಲದೆ ನಿನ್ನೆ ಸಂಜೆ ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಅವರು ಕೂಡ ಕೆಲ ಸಲಹೆಗಳನ್ನು ನೀಡಿದ್ದಾರೆ ಎಂದು ನುಡಿದರು.
- Advertisement 2
- Advertisement 3
ಇದೇ ವೇಳೆ ಬೆಂಗಳೂರಿಗೆ ವಿಶೇಷ ಕ್ರಮ ಅವಶ್ಯಕತೆ ಇದೆ. ಅಂತಹ ಅನಿವಾರ್ಯ ಉದ್ಭವವಾಗಿದೆ. ಅಲ್ಲದೆ ಕೊರೊನಾ ಸಮುದಾಯಕ್ಕೆ ಹರಿಡಿದೆ ಎಂದು ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಸಮುದಾಯಕ್ಕೆ ಕೊರೊನಾ ಹರಡಿದೆ ಎಂದರು.
- Advertisement 4
ಬೆಂಗಳೂರು ಲಾಕ್ಡೌನ್ ಬಗ್ಗೆ ಇಂದು ನಾನು ಸಿಎಂ ಬಿಎಸ್ವೈರನ್ನು ಭೇಟಿ ಮಾಡುತ್ತಿದ್ದು, ಬೆಂಗಳೂರಿಗೆ ಬಿಗಿ ಕ್ರಮ ತೆಗೆದುಕೊಳ್ಳದೇ ಹೋದರೆ ನಾವು ಇದನ್ನು ನಿಯಂತ್ರಿಸುವುದು ಅಸಾಧ್ಯ ಎಂದು ಒಬ್ಬ ಆರೋಗ್ಯ ಸಚಿವನಾಗಿ ನಾನು ಕೂಡ ಹೇಳುತ್ತಿದ್ದೇನೆ. ನಾಳೆಯ ಸಭೆಯಲ್ಲಿ ಚರ್ಚೆ ಮಾಡಿ ಕಠಿಣ ನಿರ್ಧಾರ ಪ್ರಕಟ ಮಾಡ್ತೀವಿ ಎಂದು ಹೇಳಿದರು.