ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ಗೆ ಮಾಜಿ ಕಬಡ್ಡಿ ಆಟಗಾರ ಎಂ.ವಿ. ಪ್ರಸಾದ್ ಬಾಬು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ.
ಇಂದು ಬಿವಿಕೆ ವಿಹಾರ ಕೇಂದ್ರದಲ್ಲಿ ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಗೆ ಒಳಪಟ್ಟ 100 ಮಂದಿ ಸದಸ್ಯರು ಹಾಜರಾಗಿ ಅವಿರೋಧವಾಗಿ ಪ್ರಸಾದ್ ಬಾಬು ಅವರನ್ನು ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಕಬಡ್ಡಿ ಆಟಗಾರ ವಿ.ಜಯರಾಂ ಅವರನ್ನು ಅಧ್ಯಕ್ಷರಾಗಿ ಹಾಗೂ ಕೆ.ಮುತ್ತುರಾಜ್ ಅವರನ್ನು ಖಜಾಂಚಿಯಾಗಿ ಸರ್ವಾನುಮತದಿಂದ ನೇಮಕ ಮಾಡಲಾಯಿತು.
ಎಂ.ವಿ.ಪ್ರಸಾದ್ ಬಾಬು ಕರ್ನಾಟಕ ಅಮೆಚೂರ್ ಕಬಡ್ಡಿ ಸಂಸ್ಥೆ ಕಾರ್ಯದರ್ಶಿ ರೇಸ್ನಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಕ್ರೀಯವಾಗಿ ರಾಜ್ಯ ಕಬಡ್ಡಿ ಸಂಸ್ಥೆಯಲ್ಲಿ ತೊಡಗಿಕೊಳ್ಳಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ.
ಇವರು ಭಾರತೀಯ ಅಮೆಚೂರ್ ಕಬಡ್ಡಿ ಒಕ್ಕೂಟ (ಎಕೆಎಫ್ಐ)ಕ್ಕೆ ಪರ್ಯಾಯವಾಗಿ ನ್ಯೂ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ (ಎನ್ಕೆಎಫ್ಐ) ಸಂಸ್ಥೆಯನ್ನು ಹುಟ್ಟು ಹಾಕಿ ದೇಶದಲ್ಲಿ ಬದಲಾವಣೆಯ ಬಿರುಗಾಳಿ ಏಳುವಂತೆ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.