Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ – ತನ್ನ ಪಾಲನ್ನು ಮಾರಲು ಮುಂದಾದ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ – ತನ್ನ ಪಾಲನ್ನು ಮಾರಲು ಮುಂದಾದ ಕೇಂದ್ರ

Latest

ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ – ತನ್ನ ಪಾಲನ್ನು ಮಾರಲು ಮುಂದಾದ ಕೇಂದ್ರ

Public TV
Last updated: March 15, 2021 12:32 pm
Public TV
Share
2 Min Read
Bangalore airport1
SHARE

– ದೇಶದ 13 ವಿಮಾನ ನಿಲ್ದಾಣ ಮಾರಾಟಕ್ಕೆ ಸಿದ್ಧತೆ
– 2.5 ಲಕ್ಷ ಕೋಟಿ ರೂ. ಸಂಗ್ರಹಣೆಯ ಗುರಿ

ನವದೆಹಲಿ: ಬೆಂಗಳೂರು ಸೇರಿದಂತೆ ಖಾಸಗೀಕರಣಕ್ಕೆ ಗುರುತಿಸಲಾಗಿರುವ 13 ವಿಮಾನ ನಿಲ್ದಾಣಗಳಲ್ಲಿರುವ ತನ್ನ ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳಲ್ಲಿನ ತನ್ನ ಉಳಿಕೆ ಪಾಲಿನ ಷೇರನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ. 2021-22ರ ಹಣಕಾಸು ವರ್ಷದಲ್ಲಿ ಆಸ್ತಿಗಳ ನಗದೀಕರಣದ ಮೂಲಕ 2.5 ಲಕ್ಷ ಕೋಟಿ ರೂ. ಸಂಗ್ರಹಣೆ ಸಂಬಂಧ ತನ್ನ ಪಾಲನ್ನು ಮಾರಾಟ ಮಾಡಲು  ಸಿದ್ಧತೆ ನಡೆಸಿದೆ.

Kempegowda Airport

ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ(ಎಎಐ) ಷೇರು ಹಿಂತೆಗೆತ ಸಂಬಂಧ ವಿಮಾನಯಾನ ಸಚಿವಾಲಯ ಅನುಮೋದನೆ ನೀಡುವ ನಿರೀಕ್ಷೆ ಇದ್ದು, ಈ ವಿಷಯವು ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಶೇ.13 ಹಾಗೂ ದೆಹಲಿ ವಿಮಾನ ನಿಲ್ದಾಣದಲ್ಲಿ ಶೇ.26ರಷ್ಟು ಷೇರನ್ನು ಹೊಂದಿದೆ. ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಗಳನ್ನು ಈಗಾಗಲೇ ಸಚಿವಾಲಯ ಆರಂಭಿಸಿದ್ದು, ಸಂಪುಟದ ಅಂಗೀಕಾರ, ವಿವಿಧ ಇಲಾಖೆಗಳ ಅನುಮೋದನೆ ಪಡೆಯುವ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ.

Mumbai Airport 1

ಕಳೆದ ವರ್ಷ ನಡೆದ ಮೊದಲ ಹಂತದ ಖಾಸಗೀಕರಣದಲ್ಲಿ ಮಂಗಳೂರು, ಲಕ್ನೋ, ಅಹಮದಾಬಾದ್‌, ಜೈಪುರ, ಗುವಾಹಟಿ ಮತ್ತು ತಿರುವನಂತಪುರ ಸೇರಿ 6 ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ ತನ್ನ ತೆಕ್ಕೆಗೆ ಪಡೆದುಕೊಂಡಿತ್ತು.

ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರ ಮಾಡಲಾಗಿದ್ದು, ಕಳೆದ ನವೆಂಬರ್‌ನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪನಿ ನಿರ್ವಹಿಸುತ್ತಿದೆ.

bengaluru airport corona 3

ಮುಂಬೈ ವಿಮಾನ ನಿಲ್ದಾಣದಲ್ಲಿ ಶೇ.74ರಷ್ಟು ಷೇರು ಅದಾನಿ ಗ್ರೂಪ್‌ನಲ್ಲಿ ಇದ್ದರೆ ಶೇ.26ರಷ್ಟು ಷೇರು ಎಎಐನಲ್ಲಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಶೇ.54ರಷ್ಟು ಷೇರು ಜಿಎಂಆರ್‌ ಗ್ರೂಪ್‌, ಎಎಎ ಬಳಿ ಶೇ. 26 ಮತ್ತು ಫ್ರಾಪೋರ್ಟ್‌ ಎಜಿ ಮತ್ತು ಎರ್ಮಾನ್‌ ಮಲೇಷ್ಯಾ ಶೇ.10 ರಷ್ಟು ಪಾಲನ್ನು ಹೊಂದಿದೆ.

2021-22ರ ಬಜೆಟ್‌ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಬಳಿ ಇರುವ ಆಸ್ತಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುವುದು ಎಂದು ಹೇಳಿದ್ದರು.

PM MODI 2

ಮೋದಿ ಹೇಳಿದ್ದು ಏನು?
ಈ ಹಿಂದೆ ದೇಶದ ಉದ್ಯಮಿಗಳು, ಆರ್ಥಿಕ ತಜ್ಞರು ಭಾಗವಹಿಸಿದ್ದ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ತಮ್ಮ ಸರ್ಕಾರದ ಖಾಸಗೀಕರಣದ ನೀತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು. ದೇಶದಲ್ಲಿರುವ ಹಲವು ಸಾರ್ವಜನಿಕ ವಲಯದ ಉದ್ಯಮಗಳು ನಷ್ಟದಲ್ಲಿದೆ. ಇಷ್ಟೇ ಅಲ್ಲದೇ ಹಲವು ಸರ್ಕಾರಿ ವಲಯದ ಉದ್ಯಮಗಳಿಗೆ ಆರ್ಥಿಕ ಬೆಂಬಲದ ಅಗತ್ಯವಿದೆ. ಇದು ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ ತರುತ್ತಿದೆ. ಜನರ ತೆರಿಗೆ ಹಣವನ್ನು ಇವುಗಳಿಗೆ ಬಳಸುವುದು ಸರಿಯಲ್ಲ. ಈ ಉದ್ಯಮಗಳಲ್ಲಿ ಸರ್ಕಾರ ಇರಬೇಕಾದ ಅಗತ್ಯವಿಲ್ಲ. ಉದ್ಯಮಗಳನ್ನು ನಡೆಸುವುದು ಸರ್ಕಾರದ ಕೆಲಸವಲ್ಲ ಎಂದು ಪ್ರತಿಪಾದಿಸಿದ್ದರು.

TAGGED:airportbengalurukannada newsnarendra modiPrivatisationಅದಾನಿ ಗ್ರೂಪ್ಖಾಸಗೀಕರಣನರೇಂದ್ರ ಮೋದಿಬೆಂಗಳೂರುಬೆಂಗಳೂರು ವಿಮಾನ ನಿಲ್ದಾಣಮುಂಬೈ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?