ಬೆಂಗ್ಳೂರು ರಸ್ತೆ ಬದಿ ಸಸಿ ಮಾರುತ್ತಿರೋ ವೃದ್ಧನ ವಿಡಿಯೋ ವೈರಲ್ – ಬಾಲಿವುಡ್ ನಟ, ನಟಿಯರ ಸ್ಪಂದನೆ

Public TV
2 Min Read
plant man

ಬೆಂಗಳೂರು: ದೆಹಲಿಯ ಬಾಬಾ ಕಾ ಡಾಭಾ ವೃದ್ಧರ ಸಂಕಷ್ಟದ ಕುರಿತು ಸುದ್ದಿ ವೈರಲ್ ಆದ ಬೆನ್ನಲ್ಲೇ ಇದೀಗ ಬೆಂಗಳೂರಿನ ಸಸಿ ಮಾರುವ ವೃದ್ಧನ ವಿಡಿಯೋ ಸಖತ್ ವೈರಲ್ ಆಗಿದ್ದು, ಸಹಾಯ ಮಾಡುವಂತೆ ಬಾಲಿವುಡ್ ಸ್ಟಾರ್‍ ಗಳು ಸಹ ಮನವಿ ಮಾಡಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಸಸಿ ಮಾರುವ ರೇವಣಸಿದ್ದಪ್ಪ ಅವರಿಗೆ ಸಹಾಯ ಮಾಡುವಂತೆ ಟ್ವೀಟ್ ವೈರಲ್ ಆಗಿದೆ. ಅಲ್ಲದೆ ಇದಕ್ಕೆ ಬಾಲಿವುಡ್ ನಟರು ಪ್ರತಿಕ್ರಿಯಿಸಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

plant man 2

ರೇವಣಸಿದ್ದಪ್ಪ ಅವರು ಸುಡುವ ಬಿಸಿಲಿನಲ್ಲಿ ಸಿಗ್ನಲ್ ಪಕ್ಕ ಕುಳಿತುಕೊಂಡು 10 ರಿಂದ 30 ರೂಪಾಯಿಗೆ ಸಸಿ ಮಾರುತ್ತಿದ್ದಾರೆ. ಈ ವೃದ್ಧನ ಬಗ್ಗೆ ಐ ಆಮ್ ಶುಭಮ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಇವರಿಗೆ ಸಹಾಯ ಮಾಡಿ ಎಂದು ನಟರಾದ ಸೋನು ಸೂದ್, ಮಾಧವನ್, ಕಾಂಚನಾ ಗುಪ್ತ ಮತ್ತು ಪ್ರವೀಣ್ ಕಸ್ವನ್ ಗೆ ಟ್ಯಾಗ್ ಮಾಡಲಾಗಿದೆ. ಇದನ್ನು ಕಂಡ ಹಲವರು ರೀಟ್ವೀಟ್ ಮಾಡಿದ್ದು, ಪೋಸ್ಟ್ ವೈರಲ್ ಆಗಿದೆ. ಪೋಸ್ಟ್ ನೋಡಿದ ಬಾಲಿವುಡ್ ನಟ ರಣದೀಪ್ ಹೂಡಾ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಹೂಡಾ, ಹೇ ಬೆಂಗಳೂರು ಸ್ವಲ್ಪ ಪ್ರೀತಿಯನ್ನು ತೋರಿಸುವುದನ್ನು ಮಾಡಿ, ಇವರು ವುಲಾರ್ ಫ್ಯಾಷನ್ ಫ್ಯಾಕ್ಟರಿ, ಜೆಪಿ ನಗರ, ಸಾರಕ್ಕಿ ಸಿಗ್ನಲ್, ಕನಕಪುರ ರಸ್ತೆ, ಬೆಂಗಳೂರು. ಈ ವಿಳಾಸದಲ್ಲಿ ಕುಳಿತಿರುತ್ತಾರೆ ಎಂದು ಮನವಿ ಮಾಡಿದ್ದಾರೆ.

ಸುಡುವ ಬಿಸಿಲಿನಲ್ಲಿ ಕೊಡೆ ಹಿಡಿದು ವ್ಯಾಪಾರ ಮಾಡುವ ಈ ವೃದ್ಧನ ಕಥೆ ಪರಿಸ್ಥಿತಿ ಎಂತಹವರಿಗೂ ಮನಮಿಡಿಯುತ್ತದೆ. ರಸ್ತೆ ಪಕ್ಕ ಕೊಡೆ ಹಿಡಿದುಕಂಡು ಸಸಿಗಳನ್ನು ಮಾರುತ್ತಿದ್ದಾರೆ. ಆದರೆ ಗ್ರಾಹಕರು ಬಾರದ ಹಿನ್ನೆಲೆ ಬೇಸರಗೊಂಡಿದ್ದಾರೆ. ಸಸಿಗಳನ್ನು ಯಾರು ತೆಗೆದುಕೊಳ್ಳದ್ದಕ್ಕೆ ವೃದ್ಧನಿಗೆ ತುಂಬಾ ನೋವುಂಟಾಗಿದೆ. ಇದನ್ನು ಮನಗಂಡ ಸೈನಿಕರೊಬ್ಬರು ಟ್ವೀಟ್ ಮಾಡಿ, ಬಾಲಿವುಡ್ ನಟರಿಗೆ ಟ್ಯಾಗ್ ಮಾಡಿದ್ದಾರೆ. ವೃದ್ಧನಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *