ಬೆಂಗಳೂರು: ಬೆಡ್ ಬ್ಲಾಕ್ ದಂಧೆಗೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಚುರುಕೊಂಡಿದ್ದು ಎರಡು ಪ್ರತಿಷ್ಠಿತ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಸುಧೀರ್, ವೆಂಕೋಬಾ ರಾವ್ ಅವರನ್ನು ಪೊಲೀಸರು ಬಂಧಿಸಿದ್ದು ಈಗ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಸಿಸಿಬಿ ತನಿಖೆ ವೇಳೆ ಮಹತ್ವದ ವಿಚಾರ ಬಯಲಿಗೆ ಬಂದಿದ್ದು ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ.
ಈ ಸಿಬ್ಬಂದಿ ಈಗಾಗಲೇ ಬಂಧನಕ್ಕೆ ಒಳಗಾದ ಆರೋಪಿಗಳ ಜೊತೆ ನೇರ ಸಂಪರ್ಕದಲ್ಲಿದ್ದ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ. ಈ ಸಿಬ್ಬಂದಿ ಜೊತೆ ಆಸ್ಪತ್ರೆಯ ವೈದ್ಯರು ಸಹ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
ರೋಗಿಗಳು ಡಿಸ್ಚಾರ್ಜ್ ಆದ ಕೂಡಲೇ ಈ ಆರೋಪಿಗಳು ಬಿಯು ನಂಬರ್ ಇರುವ ರೋಗಿಗಳ ಹೆಸರಿನಲ್ಲಿ ಬೆಡ್ ಬ್ಲಾಕ್ ಮಾಡುತ್ತಿದ್ದರು. ಬಳಿಕ ಈ ಬೆಡ್ಗಳನ್ನು ತಮಗೆ ಬೇಕಾದವರಿಗೆ ನೀಡುತ್ತಿದ್ದರು. ಅಷ್ಟೇ ಅಲ್ಲದೇ ರೋಗಿ ಡಿಸ್ಚಾರ್ಜ್ ಆಗಿದ್ದರೂ ಆ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಅಪ್ಡೇಟ್ ಮಾಡುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.